ಗೂಳ್ಯನಂದಿಗುಂದ ಗ್ರಾಮದ ಸ.ನಂ 191 ರಲ್ಲಿ ನಮ್ಮ ತಾಯಿಯವರಿಗೆ ಮಂಜೂರಾಗಿದ್ದ 3 ಎಕರೆ 30 ಗುಂಟೆ ಜಮೀನಿನಲ್ಲಿ ಕಳೆದ 50 ವರ್ಷಗಳಿಂದ ನಮ್ಮ ಕುಟುಂಬ ಉತ್ತು ಬಿತ್ತಿ ಬೆಳೆತೆಗೆದು ಜೀವನ ಸಾಗಿಸುತ್ತಿದ್ದೇವೆ. ಈಗ ನಮ್ಮ ಜಮೀನಿನ ಪಕ್ಕದ 184/1 ರಲ್ಲಿ ಬೆಂಗಳೂರು ಮೂಲದ ಓನ್ ವೋಲ್ಡ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ನ ಮಾಲಿಕರಾದ ಸಜೀದ್ ಆಲಿ ಆಗ ಅವರು ಜಮೀನು ಖರೀದಿ ಮಾಡಿದ್ದು. ಅವರ ಜಮೀನಿನ ಪಕ್ಷದಲ್ಲಿರುವ ನಮ್ಮ ಜಮೀನನ್ನು ಗೂಂಡಾ ಪಡೆ ಕಟ್ಟಿಕೊಂಡು ಅಕ್ರಮವಾಗಿ ಒತ್ತುವರಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರೈತ ಮುನಿರಾಜು ಆರೋಪಿಸಿದ್ದಾರೆ.
ನಮ್ಮ ಬದುಕಿಗೆ ಆಧಾರವಾಗಿದ್ದ ಭೂಮಿಯನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ. ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕಾರಣಕ್ಕೆ ನಮ್ಮ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಹ ನೀಡಿದ್ದೇವೆ. ಎಲ್ಲವೂ ತಿಳಿದಿದ್ದರೂ ಅಧಿಕಾರಿಗಳು ಮತ್ತು ಪೊಲೀಸರು ಮೌನವಹಿಸಿರುವುದು ವಿಪರ್ಯಾಸ ಎಂದು ತಮ್ಮ ನೋವನ್ನು ತೋಡಿಕೊಂಡರು.
ನ್ಯಾಯಾಲಯದಲ್ಲಿ ತಾತ್ಕಾಲಿಕ ತಡೆಯಾಜ್ಞೆ ಇದ್ದರೂ ಸಹ ನ್ಯಾಯಾಲಯದ ಬೇಸಿಗೆ ರಜೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿರುವ ಸಜೀದ್ ಆಲಿ ಆಗ ಮತ್ತು ಅವರ ಸಹಚರರು ಭೂ ಮಾಪನಾ ಇಲಾಖೆಗೆ ನೀಡಿರುವ ಸರ್ವೇ ಅರ್ಜಿ ಅನುಮೋದನೆಗಾಗಿ ಬಾಕಿ ಉಳಿದಿದ್ದರೂ ಖಾಸಗಿ ಸರ್ವೆ ಅಧಿಕಾರಿಗಳ ಸಹಾಯದಿಂದ ನಮ್ಮ ಸ್ಥಳದಲ್ಲಿ ಅನಧಿಕೃತ ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ನಂದಗುಂದ ವೆಂಕಟೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…