ಗೂಳ್ಯನಂದಿಗುಂದ ಗ್ರಾಮದ ಸ.ನಂ 191 ರಲ್ಲಿ ನಮ್ಮ ತಾಯಿಯವರಿಗೆ ಮಂಜೂರಾಗಿದ್ದ 3 ಎಕರೆ 30 ಗುಂಟೆ ಜಮೀನಿನಲ್ಲಿ ಕಳೆದ 50 ವರ್ಷಗಳಿಂದ ನಮ್ಮ ಕುಟುಂಬ ಉತ್ತು ಬಿತ್ತಿ ಬೆಳೆತೆಗೆದು ಜೀವನ ಸಾಗಿಸುತ್ತಿದ್ದೇವೆ. ಈಗ ನಮ್ಮ ಜಮೀನಿನ ಪಕ್ಕದ 184/1 ರಲ್ಲಿ ಬೆಂಗಳೂರು ಮೂಲದ ಓನ್ ವೋಲ್ಡ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ನ ಮಾಲಿಕರಾದ ಸಜೀದ್ ಆಲಿ ಆಗ ಅವರು ಜಮೀನು ಖರೀದಿ ಮಾಡಿದ್ದು. ಅವರ ಜಮೀನಿನ ಪಕ್ಷದಲ್ಲಿರುವ ನಮ್ಮ ಜಮೀನನ್ನು ಗೂಂಡಾ ಪಡೆ ಕಟ್ಟಿಕೊಂಡು ಅಕ್ರಮವಾಗಿ ಒತ್ತುವರಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರೈತ ಮುನಿರಾಜು ಆರೋಪಿಸಿದ್ದಾರೆ.
ನಮ್ಮ ಬದುಕಿಗೆ ಆಧಾರವಾಗಿದ್ದ ಭೂಮಿಯನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ. ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕಾರಣಕ್ಕೆ ನಮ್ಮ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಹ ನೀಡಿದ್ದೇವೆ. ಎಲ್ಲವೂ ತಿಳಿದಿದ್ದರೂ ಅಧಿಕಾರಿಗಳು ಮತ್ತು ಪೊಲೀಸರು ಮೌನವಹಿಸಿರುವುದು ವಿಪರ್ಯಾಸ ಎಂದು ತಮ್ಮ ನೋವನ್ನು ತೋಡಿಕೊಂಡರು.
ನ್ಯಾಯಾಲಯದಲ್ಲಿ ತಾತ್ಕಾಲಿಕ ತಡೆಯಾಜ್ಞೆ ಇದ್ದರೂ ಸಹ ನ್ಯಾಯಾಲಯದ ಬೇಸಿಗೆ ರಜೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿರುವ ಸಜೀದ್ ಆಲಿ ಆಗ ಮತ್ತು ಅವರ ಸಹಚರರು ಭೂ ಮಾಪನಾ ಇಲಾಖೆಗೆ ನೀಡಿರುವ ಸರ್ವೇ ಅರ್ಜಿ ಅನುಮೋದನೆಗಾಗಿ ಬಾಕಿ ಉಳಿದಿದ್ದರೂ ಖಾಸಗಿ ಸರ್ವೆ ಅಧಿಕಾರಿಗಳ ಸಹಾಯದಿಂದ ನಮ್ಮ ಸ್ಥಳದಲ್ಲಿ ಅನಧಿಕೃತ ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ನಂದಗುಂದ ವೆಂಕಟೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…