ಗೂಳ್ಯನಂದಿಗುಂದ ಗ್ರಾಮದ ಸ.ನಂ 191 ರಲ್ಲಿ ನಮ್ಮ ತಾಯಿಯವರಿಗೆ ಮಂಜೂರಾಗಿದ್ದ 3 ಎಕರೆ 30 ಗುಂಟೆ ಜಮೀನಿನಲ್ಲಿ ಕಳೆದ 50 ವರ್ಷಗಳಿಂದ ನಮ್ಮ ಕುಟುಂಬ ಉತ್ತು ಬಿತ್ತಿ ಬೆಳೆತೆಗೆದು ಜೀವನ ಸಾಗಿಸುತ್ತಿದ್ದೇವೆ. ಈಗ ನಮ್ಮ ಜಮೀನಿನ ಪಕ್ಕದ 184/1 ರಲ್ಲಿ ಬೆಂಗಳೂರು ಮೂಲದ ಓನ್ ವೋಲ್ಡ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ನ ಮಾಲಿಕರಾದ ಸಜೀದ್ ಆಲಿ ಆಗ ಅವರು ಜಮೀನು ಖರೀದಿ ಮಾಡಿದ್ದು. ಅವರ ಜಮೀನಿನ ಪಕ್ಷದಲ್ಲಿರುವ ನಮ್ಮ ಜಮೀನನ್ನು ಗೂಂಡಾ ಪಡೆ ಕಟ್ಟಿಕೊಂಡು ಅಕ್ರಮವಾಗಿ ಒತ್ತುವರಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರೈತ ಮುನಿರಾಜು ಆರೋಪಿಸಿದ್ದಾರೆ.
ನಮ್ಮ ಬದುಕಿಗೆ ಆಧಾರವಾಗಿದ್ದ ಭೂಮಿಯನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ. ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕಾರಣಕ್ಕೆ ನಮ್ಮ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಹ ನೀಡಿದ್ದೇವೆ. ಎಲ್ಲವೂ ತಿಳಿದಿದ್ದರೂ ಅಧಿಕಾರಿಗಳು ಮತ್ತು ಪೊಲೀಸರು ಮೌನವಹಿಸಿರುವುದು ವಿಪರ್ಯಾಸ ಎಂದು ತಮ್ಮ ನೋವನ್ನು ತೋಡಿಕೊಂಡರು.
ನ್ಯಾಯಾಲಯದಲ್ಲಿ ತಾತ್ಕಾಲಿಕ ತಡೆಯಾಜ್ಞೆ ಇದ್ದರೂ ಸಹ ನ್ಯಾಯಾಲಯದ ಬೇಸಿಗೆ ರಜೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿರುವ ಸಜೀದ್ ಆಲಿ ಆಗ ಮತ್ತು ಅವರ ಸಹಚರರು ಭೂ ಮಾಪನಾ ಇಲಾಖೆಗೆ ನೀಡಿರುವ ಸರ್ವೇ ಅರ್ಜಿ ಅನುಮೋದನೆಗಾಗಿ ಬಾಕಿ ಉಳಿದಿದ್ದರೂ ಖಾಸಗಿ ಸರ್ವೆ ಅಧಿಕಾರಿಗಳ ಸಹಾಯದಿಂದ ನಮ್ಮ ಸ್ಥಳದಲ್ಲಿ ಅನಧಿಕೃತ ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ನಂದಗುಂದ ವೆಂಕಟೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…