ನಮ್ಮ ಬದುಕಿಗೆ ಆಧಾರವಾಗಿದ್ದ ಕೃಷಿ ಭೂಮಿಯನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ- ರೈತ ಮುನಿರಾಜು ಆರೋಪ

ಗೂಳ್ಯನಂದಿಗುಂದ ಗ್ರಾಮದ ಸ.ನಂ 191 ರಲ್ಲಿ ನಮ್ಮ ತಾಯಿಯವರಿಗೆ ಮಂಜೂರಾಗಿದ್ದ 3 ಎಕರೆ 30 ಗುಂಟೆ ಜಮೀನಿನಲ್ಲಿ ಕಳೆದ 50 ವರ್ಷಗಳಿಂದ ನಮ್ಮ ಕುಟುಂಬ ಉತ್ತು ಬಿತ್ತಿ ಬೆಳೆತೆಗೆದು ಜೀವನ ಸಾಗಿಸುತ್ತಿದ್ದೇವೆ. ಈಗ ನಮ್ಮ ಜಮೀನಿನ ಪಕ್ಕದ 184/1 ರಲ್ಲಿ ಬೆಂಗಳೂರು ಮೂಲದ ಓನ್ ವೋಲ್ಡ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ನ ಮಾಲಿಕರಾದ ಸಜೀದ್ ಆಲಿ ಆಗ ಅವರು ಜಮೀನು ಖರೀದಿ ಮಾಡಿದ್ದು. ಅವರ ಜಮೀನಿನ ಪಕ್ಷದಲ್ಲಿರುವ ನಮ್ಮ ಜಮೀನನ್ನು ಗೂಂಡಾ ಪಡೆ ಕಟ್ಟಿಕೊಂಡು ಅಕ್ರಮವಾಗಿ ಒತ್ತುವರಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರೈತ ಮುನಿರಾಜು ಆರೋಪಿಸಿದ್ದಾರೆ.

ನಮ್ಮ ಬದುಕಿಗೆ ಆಧಾರವಾಗಿದ್ದ ಭೂಮಿಯನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ. ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕಾರಣಕ್ಕೆ ನಮ್ಮ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಹ ನೀಡಿದ್ದೇವೆ. ಎಲ್ಲವೂ ತಿಳಿದಿದ್ದರೂ ಅಧಿಕಾರಿಗಳು ಮತ್ತು ಪೊಲೀಸರು ಮೌನವಹಿಸಿರುವುದು ವಿಪರ್ಯಾಸ ಎಂದು ತಮ್ಮ ನೋವನ್ನು ತೋಡಿಕೊಂಡರು.

ಇನ್ನು ಸಜೀದ್ ಆಲಿಆಗ ಅವರಿಂದ ನಮ್ಮ ಭೂಮಿ ರಕ್ಷಣೆಗಾಗಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇವೆ. ನ್ಯಾಯಾಲಯವು ಸದರಿ ಭೂಮಿಯಲ್ಲಿ ಯಾವುದೇ ಚಟುವಟಿಕೆ ನಡೆಯುವಂತಿಲ್ಲ ಎಂದು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ ಎಂದರು.

ನ್ಯಾಯಾಲಯದಲ್ಲಿ ತಾತ್ಕಾಲಿಕ ತಡೆಯಾಜ್ಞೆ ಇದ್ದರೂ ಸಹ ನ್ಯಾಯಾಲಯದ ಬೇಸಿಗೆ ರಜೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿರುವ ಸಜೀದ್ ಆಲಿ ಆಗ ಮತ್ತು ಅವರ ಸಹಚರರು ಭೂ ಮಾಪನಾ ಇಲಾಖೆಗೆ ನೀಡಿರುವ ಸರ್ವೇ ಅರ್ಜಿ ಅನುಮೋದನೆಗಾಗಿ ಬಾಕಿ ಉಳಿದಿದ್ದರೂ ಖಾಸಗಿ ಸರ್ವೆ ಅಧಿಕಾರಿಗಳ ಸಹಾಯದಿಂದ ನಮ್ಮ ಸ್ಥಳದಲ್ಲಿ ಅನಧಿಕೃತ ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿದರು.

ನಮ್ಮ ಸ್ಥಳಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದು. ನ್ಯಾಯ ಕೇಳಲು ಹೋದ ನಮ್ಮ ಮೇಲೆ ಗೂಂಡಗಳಂತೆ ವರ್ತಿಸುತ್ತಿದ್ದಾರೆ. ರಕ್ಷಣೆ ನೀಡಬೇಕಿದ್ದ ಪೊಲೀಸ್ ಅಧಿಕಾರಿಗಳು ಮೌನ ವಹಿಸಿರುವುದು ಹಲವು ಸಂಶಯಕ್ಕೆ ಎಡೆ ಮಾಡಿಕೊಟ್ಟಿದ್ದೆ. ಸಾಜಿದ್ ಅಲಿ ಹಾಗೂ ಸಹಚರರು ರಾತ್ರೋರಾತ್ರಿ ಕಾಂಪೌಂಡ್ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿದ್ದು ನಮಗೆ ಸೇರಿರುವ ಸರ್ವೇ ನಂಬರ್ 191 ರ 3 ಎಕರೆ 30 ಗುಂಟೆ ಜಮೀನನ್ನು ದಿನೇ ದಿನಕ್ಕೆ ಒತ್ತುವರಿ ಮಾಡುವ ಮೂಲಕ ಈಗಾಗಲೇ ಸುಮಾರು ಒಂದು ಎಕರೆ ಭೂಮಿಯನ್ನು ಅತಿಕ್ರಮ ಪ್ರವೇಶ ಮಾಡಿದ್ದಾರೆ.  ಈ ಕುರಿತು ನಮಗೆ ನ್ಯಾಯ ಬೇಕಿದೆ ವ್ಯವಸಾಯ ಒಂದೇ ನಮ್ಮ ಜೀವನೋಪಾಯಕ್ಕೆ ಮಾರ್ಗವಾಗಿದ್ದು. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ನಮಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಮನವಿ ಮಾಡಿದರು.

ರೈತ ಮಹಿಳೆ ಪುನೀತ ಮಾತನಾಡಿ ಕಳೆದ ಎಂಟು ತಿಂಗಳಿನಿಂದ ಈ ಸಮಸ್ಯೆ ಉದ್ಭವವಾಗಿದ್ದು ಬೆಂಗಳೂರು ಮೂಲದವರಾದ ಸಾಜಿದ್ ಅಲಿ ಎಂಬುವರು ಸರ್ವೆ ನಂಬರ್ 184/1 ರ ಭೂಮಿ  ಖರೀದಿ ಮಾಡಿದ್ದು ಈಗ ತಮ್ಮ ಅಧಿಕಾರ ಬಲ ಹಾಗೂ ಹಣ ಬಲದಿಂದ ನಮ್ಮ ಭೂಮಿಗೆ ಅತಿಕ್ರಮ ಪ್ರವೇಶ ಮಾಡುತ್ತಿದ್ದಾರೆ  ನಮಗೆ ಭಯ ಹೆಚ್ಚಾಗುತ್ತಿದ್ದು ಜೀವನ ಸಾಗಿಸುವುದೇ ಕಷ್ಟಕರವಾಗಿದೆ. ಪ್ರತಿದಿನದ ಈ ಬೆಳವಣಿಗೆ ಕಾಣುತ್ತಿದ್ದರೆ ನಮ್ಮ ಜೀವಕ್ಕೆ ಕುತ್ತು ಬರಬಹುದು ಎಂಬ ಭಯ ಹೆಚ್ಚಾಗುತ್ತಿದೆ. ಈಗಾಗಲೇ ಒಂದು ಎಕರೆಯಷ್ಟು ಭೂಮಿಯನ್ನು ಅತಿಕ್ರಮ ಪ್ರವೇಶ ಮಾಡಿದ್ದು ಮುಂದೆ ಏನಾಗುವುದು ಎಂಬ ಭಯ ಕಾಡುತ್ತಿದೆ. ಇದೇ ಭೂಮಿಯಲ್ಲಿ ನಾವು ರಾಗಿ, ಜೋಳ ಸೇರಿದಂತೆ ಹಲವು ಬೆಳೆ ಬೆಳೆಯುವ ಮೂಲಕ ನಮ್ಮ ಜೀವನ ಸಾಗಿಸಿದ್ದೇವೆ ಇಂದು ನಮ್ಮ ಭೂಮಿ ಕೈತಪ್ಪಿ ಹೋಗುತ್ತಿದೆ ನಮ್ಮ ಜೀವನಕ್ಕೆ ಆಧಾರವಾಗಿರುವ ಭೂಮಿಯನ್ನು ಉಳಿಸಿಕೊಡಿ ಎಂದು ಮನವಿ ಮಾಡಿದರು

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ನಂದಗುಂದ ವೆಂಕಟೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

3 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

15 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

15 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

15 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

16 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

23 hours ago