ನಮ್ಮ ಬದುಕಿಗೆ ಆಧಾರವಾಗಿದ್ದ ಕೃಷಿ ಭೂಮಿಯನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ- ರೈತ ಮುನಿರಾಜು ಆರೋಪ

ಗೂಳ್ಯನಂದಿಗುಂದ ಗ್ರಾಮದ ಸ.ನಂ 191 ರಲ್ಲಿ ನಮ್ಮ ತಾಯಿಯವರಿಗೆ ಮಂಜೂರಾಗಿದ್ದ 3 ಎಕರೆ 30 ಗುಂಟೆ ಜಮೀನಿನಲ್ಲಿ ಕಳೆದ 50 ವರ್ಷಗಳಿಂದ ನಮ್ಮ ಕುಟುಂಬ ಉತ್ತು ಬಿತ್ತಿ ಬೆಳೆತೆಗೆದು ಜೀವನ ಸಾಗಿಸುತ್ತಿದ್ದೇವೆ. ಈಗ ನಮ್ಮ ಜಮೀನಿನ ಪಕ್ಕದ 184/1 ರಲ್ಲಿ ಬೆಂಗಳೂರು ಮೂಲದ ಓನ್ ವೋಲ್ಡ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ನ ಮಾಲಿಕರಾದ ಸಜೀದ್ ಆಲಿ ಆಗ ಅವರು ಜಮೀನು ಖರೀದಿ ಮಾಡಿದ್ದು. ಅವರ ಜಮೀನಿನ ಪಕ್ಷದಲ್ಲಿರುವ ನಮ್ಮ ಜಮೀನನ್ನು ಗೂಂಡಾ ಪಡೆ ಕಟ್ಟಿಕೊಂಡು ಅಕ್ರಮವಾಗಿ ಒತ್ತುವರಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರೈತ ಮುನಿರಾಜು ಆರೋಪಿಸಿದ್ದಾರೆ.

ನಮ್ಮ ಬದುಕಿಗೆ ಆಧಾರವಾಗಿದ್ದ ಭೂಮಿಯನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ. ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕಾರಣಕ್ಕೆ ನಮ್ಮ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಹ ನೀಡಿದ್ದೇವೆ. ಎಲ್ಲವೂ ತಿಳಿದಿದ್ದರೂ ಅಧಿಕಾರಿಗಳು ಮತ್ತು ಪೊಲೀಸರು ಮೌನವಹಿಸಿರುವುದು ವಿಪರ್ಯಾಸ ಎಂದು ತಮ್ಮ ನೋವನ್ನು ತೋಡಿಕೊಂಡರು.

ಇನ್ನು ಸಜೀದ್ ಆಲಿಆಗ ಅವರಿಂದ ನಮ್ಮ ಭೂಮಿ ರಕ್ಷಣೆಗಾಗಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇವೆ. ನ್ಯಾಯಾಲಯವು ಸದರಿ ಭೂಮಿಯಲ್ಲಿ ಯಾವುದೇ ಚಟುವಟಿಕೆ ನಡೆಯುವಂತಿಲ್ಲ ಎಂದು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ ಎಂದರು.

ನ್ಯಾಯಾಲಯದಲ್ಲಿ ತಾತ್ಕಾಲಿಕ ತಡೆಯಾಜ್ಞೆ ಇದ್ದರೂ ಸಹ ನ್ಯಾಯಾಲಯದ ಬೇಸಿಗೆ ರಜೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿರುವ ಸಜೀದ್ ಆಲಿ ಆಗ ಮತ್ತು ಅವರ ಸಹಚರರು ಭೂ ಮಾಪನಾ ಇಲಾಖೆಗೆ ನೀಡಿರುವ ಸರ್ವೇ ಅರ್ಜಿ ಅನುಮೋದನೆಗಾಗಿ ಬಾಕಿ ಉಳಿದಿದ್ದರೂ ಖಾಸಗಿ ಸರ್ವೆ ಅಧಿಕಾರಿಗಳ ಸಹಾಯದಿಂದ ನಮ್ಮ ಸ್ಥಳದಲ್ಲಿ ಅನಧಿಕೃತ ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿದರು.

ನಮ್ಮ ಸ್ಥಳಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದು. ನ್ಯಾಯ ಕೇಳಲು ಹೋದ ನಮ್ಮ ಮೇಲೆ ಗೂಂಡಗಳಂತೆ ವರ್ತಿಸುತ್ತಿದ್ದಾರೆ. ರಕ್ಷಣೆ ನೀಡಬೇಕಿದ್ದ ಪೊಲೀಸ್ ಅಧಿಕಾರಿಗಳು ಮೌನ ವಹಿಸಿರುವುದು ಹಲವು ಸಂಶಯಕ್ಕೆ ಎಡೆ ಮಾಡಿಕೊಟ್ಟಿದ್ದೆ. ಸಾಜಿದ್ ಅಲಿ ಹಾಗೂ ಸಹಚರರು ರಾತ್ರೋರಾತ್ರಿ ಕಾಂಪೌಂಡ್ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿದ್ದು ನಮಗೆ ಸೇರಿರುವ ಸರ್ವೇ ನಂಬರ್ 191 ರ 3 ಎಕರೆ 30 ಗುಂಟೆ ಜಮೀನನ್ನು ದಿನೇ ದಿನಕ್ಕೆ ಒತ್ತುವರಿ ಮಾಡುವ ಮೂಲಕ ಈಗಾಗಲೇ ಸುಮಾರು ಒಂದು ಎಕರೆ ಭೂಮಿಯನ್ನು ಅತಿಕ್ರಮ ಪ್ರವೇಶ ಮಾಡಿದ್ದಾರೆ.  ಈ ಕುರಿತು ನಮಗೆ ನ್ಯಾಯ ಬೇಕಿದೆ ವ್ಯವಸಾಯ ಒಂದೇ ನಮ್ಮ ಜೀವನೋಪಾಯಕ್ಕೆ ಮಾರ್ಗವಾಗಿದ್ದು. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ನಮಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಮನವಿ ಮಾಡಿದರು.

ರೈತ ಮಹಿಳೆ ಪುನೀತ ಮಾತನಾಡಿ ಕಳೆದ ಎಂಟು ತಿಂಗಳಿನಿಂದ ಈ ಸಮಸ್ಯೆ ಉದ್ಭವವಾಗಿದ್ದು ಬೆಂಗಳೂರು ಮೂಲದವರಾದ ಸಾಜಿದ್ ಅಲಿ ಎಂಬುವರು ಸರ್ವೆ ನಂಬರ್ 184/1 ರ ಭೂಮಿ  ಖರೀದಿ ಮಾಡಿದ್ದು ಈಗ ತಮ್ಮ ಅಧಿಕಾರ ಬಲ ಹಾಗೂ ಹಣ ಬಲದಿಂದ ನಮ್ಮ ಭೂಮಿಗೆ ಅತಿಕ್ರಮ ಪ್ರವೇಶ ಮಾಡುತ್ತಿದ್ದಾರೆ  ನಮಗೆ ಭಯ ಹೆಚ್ಚಾಗುತ್ತಿದ್ದು ಜೀವನ ಸಾಗಿಸುವುದೇ ಕಷ್ಟಕರವಾಗಿದೆ. ಪ್ರತಿದಿನದ ಈ ಬೆಳವಣಿಗೆ ಕಾಣುತ್ತಿದ್ದರೆ ನಮ್ಮ ಜೀವಕ್ಕೆ ಕುತ್ತು ಬರಬಹುದು ಎಂಬ ಭಯ ಹೆಚ್ಚಾಗುತ್ತಿದೆ. ಈಗಾಗಲೇ ಒಂದು ಎಕರೆಯಷ್ಟು ಭೂಮಿಯನ್ನು ಅತಿಕ್ರಮ ಪ್ರವೇಶ ಮಾಡಿದ್ದು ಮುಂದೆ ಏನಾಗುವುದು ಎಂಬ ಭಯ ಕಾಡುತ್ತಿದೆ. ಇದೇ ಭೂಮಿಯಲ್ಲಿ ನಾವು ರಾಗಿ, ಜೋಳ ಸೇರಿದಂತೆ ಹಲವು ಬೆಳೆ ಬೆಳೆಯುವ ಮೂಲಕ ನಮ್ಮ ಜೀವನ ಸಾಗಿಸಿದ್ದೇವೆ ಇಂದು ನಮ್ಮ ಭೂಮಿ ಕೈತಪ್ಪಿ ಹೋಗುತ್ತಿದೆ ನಮ್ಮ ಜೀವನಕ್ಕೆ ಆಧಾರವಾಗಿರುವ ಭೂಮಿಯನ್ನು ಉಳಿಸಿಕೊಡಿ ಎಂದು ಮನವಿ ಮಾಡಿದರು

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ನಂದಗುಂದ ವೆಂಕಟೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

5 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

12 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

15 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

16 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago