ನಮ್ಮ ಬದುಕಿಗೆ ಆಧಾರವಾಗಿದ್ದ ಕೃಷಿ ಭೂಮಿಯನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ- ರೈತ ಮುನಿರಾಜು ಆರೋಪ

ಗೂಳ್ಯನಂದಿಗುಂದ ಗ್ರಾಮದ ಸ.ನಂ 191 ರಲ್ಲಿ ನಮ್ಮ ತಾಯಿಯವರಿಗೆ ಮಂಜೂರಾಗಿದ್ದ 3 ಎಕರೆ 30 ಗುಂಟೆ ಜಮೀನಿನಲ್ಲಿ ಕಳೆದ 50 ವರ್ಷಗಳಿಂದ ನಮ್ಮ ಕುಟುಂಬ ಉತ್ತು ಬಿತ್ತಿ ಬೆಳೆತೆಗೆದು ಜೀವನ ಸಾಗಿಸುತ್ತಿದ್ದೇವೆ. ಈಗ ನಮ್ಮ ಜಮೀನಿನ ಪಕ್ಕದ 184/1 ರಲ್ಲಿ ಬೆಂಗಳೂರು ಮೂಲದ ಓನ್ ವೋಲ್ಡ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ನ ಮಾಲಿಕರಾದ ಸಜೀದ್ ಆಲಿ ಆಗ ಅವರು ಜಮೀನು ಖರೀದಿ ಮಾಡಿದ್ದು. ಅವರ ಜಮೀನಿನ ಪಕ್ಷದಲ್ಲಿರುವ ನಮ್ಮ ಜಮೀನನ್ನು ಗೂಂಡಾ ಪಡೆ ಕಟ್ಟಿಕೊಂಡು ಅಕ್ರಮವಾಗಿ ಒತ್ತುವರಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರೈತ ಮುನಿರಾಜು ಆರೋಪಿಸಿದ್ದಾರೆ.

ನಮ್ಮ ಬದುಕಿಗೆ ಆಧಾರವಾಗಿದ್ದ ಭೂಮಿಯನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ. ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕಾರಣಕ್ಕೆ ನಮ್ಮ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಹ ನೀಡಿದ್ದೇವೆ. ಎಲ್ಲವೂ ತಿಳಿದಿದ್ದರೂ ಅಧಿಕಾರಿಗಳು ಮತ್ತು ಪೊಲೀಸರು ಮೌನವಹಿಸಿರುವುದು ವಿಪರ್ಯಾಸ ಎಂದು ತಮ್ಮ ನೋವನ್ನು ತೋಡಿಕೊಂಡರು.

ಇನ್ನು ಸಜೀದ್ ಆಲಿಆಗ ಅವರಿಂದ ನಮ್ಮ ಭೂಮಿ ರಕ್ಷಣೆಗಾಗಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇವೆ. ನ್ಯಾಯಾಲಯವು ಸದರಿ ಭೂಮಿಯಲ್ಲಿ ಯಾವುದೇ ಚಟುವಟಿಕೆ ನಡೆಯುವಂತಿಲ್ಲ ಎಂದು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ ಎಂದರು.

ನ್ಯಾಯಾಲಯದಲ್ಲಿ ತಾತ್ಕಾಲಿಕ ತಡೆಯಾಜ್ಞೆ ಇದ್ದರೂ ಸಹ ನ್ಯಾಯಾಲಯದ ಬೇಸಿಗೆ ರಜೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿರುವ ಸಜೀದ್ ಆಲಿ ಆಗ ಮತ್ತು ಅವರ ಸಹಚರರು ಭೂ ಮಾಪನಾ ಇಲಾಖೆಗೆ ನೀಡಿರುವ ಸರ್ವೇ ಅರ್ಜಿ ಅನುಮೋದನೆಗಾಗಿ ಬಾಕಿ ಉಳಿದಿದ್ದರೂ ಖಾಸಗಿ ಸರ್ವೆ ಅಧಿಕಾರಿಗಳ ಸಹಾಯದಿಂದ ನಮ್ಮ ಸ್ಥಳದಲ್ಲಿ ಅನಧಿಕೃತ ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿದರು.

ನಮ್ಮ ಸ್ಥಳಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದು. ನ್ಯಾಯ ಕೇಳಲು ಹೋದ ನಮ್ಮ ಮೇಲೆ ಗೂಂಡಗಳಂತೆ ವರ್ತಿಸುತ್ತಿದ್ದಾರೆ. ರಕ್ಷಣೆ ನೀಡಬೇಕಿದ್ದ ಪೊಲೀಸ್ ಅಧಿಕಾರಿಗಳು ಮೌನ ವಹಿಸಿರುವುದು ಹಲವು ಸಂಶಯಕ್ಕೆ ಎಡೆ ಮಾಡಿಕೊಟ್ಟಿದ್ದೆ. ಸಾಜಿದ್ ಅಲಿ ಹಾಗೂ ಸಹಚರರು ರಾತ್ರೋರಾತ್ರಿ ಕಾಂಪೌಂಡ್ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿದ್ದು ನಮಗೆ ಸೇರಿರುವ ಸರ್ವೇ ನಂಬರ್ 191 ರ 3 ಎಕರೆ 30 ಗುಂಟೆ ಜಮೀನನ್ನು ದಿನೇ ದಿನಕ್ಕೆ ಒತ್ತುವರಿ ಮಾಡುವ ಮೂಲಕ ಈಗಾಗಲೇ ಸುಮಾರು ಒಂದು ಎಕರೆ ಭೂಮಿಯನ್ನು ಅತಿಕ್ರಮ ಪ್ರವೇಶ ಮಾಡಿದ್ದಾರೆ.  ಈ ಕುರಿತು ನಮಗೆ ನ್ಯಾಯ ಬೇಕಿದೆ ವ್ಯವಸಾಯ ಒಂದೇ ನಮ್ಮ ಜೀವನೋಪಾಯಕ್ಕೆ ಮಾರ್ಗವಾಗಿದ್ದು. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ನಮಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಮನವಿ ಮಾಡಿದರು.

ರೈತ ಮಹಿಳೆ ಪುನೀತ ಮಾತನಾಡಿ ಕಳೆದ ಎಂಟು ತಿಂಗಳಿನಿಂದ ಈ ಸಮಸ್ಯೆ ಉದ್ಭವವಾಗಿದ್ದು ಬೆಂಗಳೂರು ಮೂಲದವರಾದ ಸಾಜಿದ್ ಅಲಿ ಎಂಬುವರು ಸರ್ವೆ ನಂಬರ್ 184/1 ರ ಭೂಮಿ  ಖರೀದಿ ಮಾಡಿದ್ದು ಈಗ ತಮ್ಮ ಅಧಿಕಾರ ಬಲ ಹಾಗೂ ಹಣ ಬಲದಿಂದ ನಮ್ಮ ಭೂಮಿಗೆ ಅತಿಕ್ರಮ ಪ್ರವೇಶ ಮಾಡುತ್ತಿದ್ದಾರೆ  ನಮಗೆ ಭಯ ಹೆಚ್ಚಾಗುತ್ತಿದ್ದು ಜೀವನ ಸಾಗಿಸುವುದೇ ಕಷ್ಟಕರವಾಗಿದೆ. ಪ್ರತಿದಿನದ ಈ ಬೆಳವಣಿಗೆ ಕಾಣುತ್ತಿದ್ದರೆ ನಮ್ಮ ಜೀವಕ್ಕೆ ಕುತ್ತು ಬರಬಹುದು ಎಂಬ ಭಯ ಹೆಚ್ಚಾಗುತ್ತಿದೆ. ಈಗಾಗಲೇ ಒಂದು ಎಕರೆಯಷ್ಟು ಭೂಮಿಯನ್ನು ಅತಿಕ್ರಮ ಪ್ರವೇಶ ಮಾಡಿದ್ದು ಮುಂದೆ ಏನಾಗುವುದು ಎಂಬ ಭಯ ಕಾಡುತ್ತಿದೆ. ಇದೇ ಭೂಮಿಯಲ್ಲಿ ನಾವು ರಾಗಿ, ಜೋಳ ಸೇರಿದಂತೆ ಹಲವು ಬೆಳೆ ಬೆಳೆಯುವ ಮೂಲಕ ನಮ್ಮ ಜೀವನ ಸಾಗಿಸಿದ್ದೇವೆ ಇಂದು ನಮ್ಮ ಭೂಮಿ ಕೈತಪ್ಪಿ ಹೋಗುತ್ತಿದೆ ನಮ್ಮ ಜೀವನಕ್ಕೆ ಆಧಾರವಾಗಿರುವ ಭೂಮಿಯನ್ನು ಉಳಿಸಿಕೊಡಿ ಎಂದು ಮನವಿ ಮಾಡಿದರು

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ನಂದಗುಂದ ವೆಂಕಟೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

4 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

5 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

5 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

9 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

20 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

21 hours ago