ಗೂಳ್ಯನಂದಿಗುಂದ ಗ್ರಾಮದ ಸ.ನಂ 191 ರಲ್ಲಿ ನಮ್ಮ ತಾಯಿಯವರಿಗೆ ಮಂಜೂರಾಗಿದ್ದ 3 ಎಕರೆ 30 ಗುಂಟೆ ಜಮೀನಿನಲ್ಲಿ ಕಳೆದ 50 ವರ್ಷಗಳಿಂದ ನಮ್ಮ ಕುಟುಂಬ ಉತ್ತು ಬಿತ್ತಿ ಬೆಳೆತೆಗೆದು ಜೀವನ ಸಾಗಿಸುತ್ತಿದ್ದೇವೆ. ಈಗ ನಮ್ಮ ಜಮೀನಿನ ಪಕ್ಕದ 184/1 ರಲ್ಲಿ ಬೆಂಗಳೂರು ಮೂಲದ ಓನ್ ವೋಲ್ಡ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ನ ಮಾಲಿಕರಾದ ಸಜೀದ್ ಆಲಿ ಆಗ ಅವರು ಜಮೀನು ಖರೀದಿ ಮಾಡಿದ್ದು. ಅವರ ಜಮೀನಿನ ಪಕ್ಷದಲ್ಲಿರುವ ನಮ್ಮ ಜಮೀನನ್ನು ಗೂಂಡಾ ಪಡೆ ಕಟ್ಟಿಕೊಂಡು ಅಕ್ರಮವಾಗಿ ಒತ್ತುವರಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರೈತ ಮುನಿರಾಜು ಆರೋಪಿಸಿದ್ದಾರೆ.
ನಮ್ಮ ಬದುಕಿಗೆ ಆಧಾರವಾಗಿದ್ದ ಭೂಮಿಯನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ. ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕಾರಣಕ್ಕೆ ನಮ್ಮ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಹ ನೀಡಿದ್ದೇವೆ. ಎಲ್ಲವೂ ತಿಳಿದಿದ್ದರೂ ಅಧಿಕಾರಿಗಳು ಮತ್ತು ಪೊಲೀಸರು ಮೌನವಹಿಸಿರುವುದು ವಿಪರ್ಯಾಸ ಎಂದು ತಮ್ಮ ನೋವನ್ನು ತೋಡಿಕೊಂಡರು.
ನ್ಯಾಯಾಲಯದಲ್ಲಿ ತಾತ್ಕಾಲಿಕ ತಡೆಯಾಜ್ಞೆ ಇದ್ದರೂ ಸಹ ನ್ಯಾಯಾಲಯದ ಬೇಸಿಗೆ ರಜೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿರುವ ಸಜೀದ್ ಆಲಿ ಆಗ ಮತ್ತು ಅವರ ಸಹಚರರು ಭೂ ಮಾಪನಾ ಇಲಾಖೆಗೆ ನೀಡಿರುವ ಸರ್ವೇ ಅರ್ಜಿ ಅನುಮೋದನೆಗಾಗಿ ಬಾಕಿ ಉಳಿದಿದ್ದರೂ ಖಾಸಗಿ ಸರ್ವೆ ಅಧಿಕಾರಿಗಳ ಸಹಾಯದಿಂದ ನಮ್ಮ ಸ್ಥಳದಲ್ಲಿ ಅನಧಿಕೃತ ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ನಂದಗುಂದ ವೆಂಕಟೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…