ಗೂಳ್ಯನಂದಿಗುಂದ ಗ್ರಾಮದ ಸ.ನಂ 191 ರಲ್ಲಿ ನಮ್ಮ ತಾಯಿಯವರಿಗೆ ಮಂಜೂರಾಗಿದ್ದ 3 ಎಕರೆ 30 ಗುಂಟೆ ಜಮೀನಿನಲ್ಲಿ ಕಳೆದ 50 ವರ್ಷಗಳಿಂದ ನಮ್ಮ ಕುಟುಂಬ ಉತ್ತು ಬಿತ್ತಿ ಬೆಳೆತೆಗೆದು ಜೀವನ ಸಾಗಿಸುತ್ತಿದ್ದೇವೆ. ಈಗ ನಮ್ಮ ಜಮೀನಿನ ಪಕ್ಕದ 184/1 ರಲ್ಲಿ ಬೆಂಗಳೂರು ಮೂಲದ ಓನ್ ವೋಲ್ಡ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ನ ಮಾಲಿಕರಾದ ಸಜೀದ್ ಆಲಿ ಆಗ ಅವರು ಜಮೀನು ಖರೀದಿ ಮಾಡಿದ್ದು. ಅವರ ಜಮೀನಿನ ಪಕ್ಷದಲ್ಲಿರುವ ನಮ್ಮ ಜಮೀನನ್ನು ಗೂಂಡಾ ಪಡೆ ಕಟ್ಟಿಕೊಂಡು ಅಕ್ರಮವಾಗಿ ಒತ್ತುವರಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರೈತ ಮುನಿರಾಜು ಆರೋಪಿಸಿದ್ದಾರೆ.
ನಮ್ಮ ಬದುಕಿಗೆ ಆಧಾರವಾಗಿದ್ದ ಭೂಮಿಯನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ. ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕಾರಣಕ್ಕೆ ನಮ್ಮ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಹ ನೀಡಿದ್ದೇವೆ. ಎಲ್ಲವೂ ತಿಳಿದಿದ್ದರೂ ಅಧಿಕಾರಿಗಳು ಮತ್ತು ಪೊಲೀಸರು ಮೌನವಹಿಸಿರುವುದು ವಿಪರ್ಯಾಸ ಎಂದು ತಮ್ಮ ನೋವನ್ನು ತೋಡಿಕೊಂಡರು.
ನ್ಯಾಯಾಲಯದಲ್ಲಿ ತಾತ್ಕಾಲಿಕ ತಡೆಯಾಜ್ಞೆ ಇದ್ದರೂ ಸಹ ನ್ಯಾಯಾಲಯದ ಬೇಸಿಗೆ ರಜೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿರುವ ಸಜೀದ್ ಆಲಿ ಆಗ ಮತ್ತು ಅವರ ಸಹಚರರು ಭೂ ಮಾಪನಾ ಇಲಾಖೆಗೆ ನೀಡಿರುವ ಸರ್ವೇ ಅರ್ಜಿ ಅನುಮೋದನೆಗಾಗಿ ಬಾಕಿ ಉಳಿದಿದ್ದರೂ ಖಾಸಗಿ ಸರ್ವೆ ಅಧಿಕಾರಿಗಳ ಸಹಾಯದಿಂದ ನಮ್ಮ ಸ್ಥಳದಲ್ಲಿ ಅನಧಿಕೃತ ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ನಂದಗುಂದ ವೆಂಕಟೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…