ನಮ್ಮ ಬದುಕಿಗೆ ಆಧಾರವಾಗಿದ್ದ ಕೃಷಿ ಭೂಮಿಯನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ- ರೈತ ಮುನಿರಾಜು ಆರೋಪ

ಗೂಳ್ಯನಂದಿಗುಂದ ಗ್ರಾಮದ ಸ.ನಂ 191 ರಲ್ಲಿ ನಮ್ಮ ತಾಯಿಯವರಿಗೆ ಮಂಜೂರಾಗಿದ್ದ 3 ಎಕರೆ 30 ಗುಂಟೆ ಜಮೀನಿನಲ್ಲಿ ಕಳೆದ 50 ವರ್ಷಗಳಿಂದ ನಮ್ಮ ಕುಟುಂಬ ಉತ್ತು ಬಿತ್ತಿ ಬೆಳೆತೆಗೆದು ಜೀವನ ಸಾಗಿಸುತ್ತಿದ್ದೇವೆ. ಈಗ ನಮ್ಮ ಜಮೀನಿನ ಪಕ್ಕದ 184/1 ರಲ್ಲಿ ಬೆಂಗಳೂರು ಮೂಲದ ಓನ್ ವೋಲ್ಡ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ನ ಮಾಲಿಕರಾದ ಸಜೀದ್ ಆಲಿ ಆಗ ಅವರು ಜಮೀನು ಖರೀದಿ ಮಾಡಿದ್ದು. ಅವರ ಜಮೀನಿನ ಪಕ್ಷದಲ್ಲಿರುವ ನಮ್ಮ ಜಮೀನನ್ನು ಗೂಂಡಾ ಪಡೆ ಕಟ್ಟಿಕೊಂಡು ಅಕ್ರಮವಾಗಿ ಒತ್ತುವರಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರೈತ ಮುನಿರಾಜು ಆರೋಪಿಸಿದ್ದಾರೆ.

ನಮ್ಮ ಬದುಕಿಗೆ ಆಧಾರವಾಗಿದ್ದ ಭೂಮಿಯನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ. ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕಾರಣಕ್ಕೆ ನಮ್ಮ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಹ ನೀಡಿದ್ದೇವೆ. ಎಲ್ಲವೂ ತಿಳಿದಿದ್ದರೂ ಅಧಿಕಾರಿಗಳು ಮತ್ತು ಪೊಲೀಸರು ಮೌನವಹಿಸಿರುವುದು ವಿಪರ್ಯಾಸ ಎಂದು ತಮ್ಮ ನೋವನ್ನು ತೋಡಿಕೊಂಡರು.

ಇನ್ನು ಸಜೀದ್ ಆಲಿಆಗ ಅವರಿಂದ ನಮ್ಮ ಭೂಮಿ ರಕ್ಷಣೆಗಾಗಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇವೆ. ನ್ಯಾಯಾಲಯವು ಸದರಿ ಭೂಮಿಯಲ್ಲಿ ಯಾವುದೇ ಚಟುವಟಿಕೆ ನಡೆಯುವಂತಿಲ್ಲ ಎಂದು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ ಎಂದರು.

ನ್ಯಾಯಾಲಯದಲ್ಲಿ ತಾತ್ಕಾಲಿಕ ತಡೆಯಾಜ್ಞೆ ಇದ್ದರೂ ಸಹ ನ್ಯಾಯಾಲಯದ ಬೇಸಿಗೆ ರಜೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿರುವ ಸಜೀದ್ ಆಲಿ ಆಗ ಮತ್ತು ಅವರ ಸಹಚರರು ಭೂ ಮಾಪನಾ ಇಲಾಖೆಗೆ ನೀಡಿರುವ ಸರ್ವೇ ಅರ್ಜಿ ಅನುಮೋದನೆಗಾಗಿ ಬಾಕಿ ಉಳಿದಿದ್ದರೂ ಖಾಸಗಿ ಸರ್ವೆ ಅಧಿಕಾರಿಗಳ ಸಹಾಯದಿಂದ ನಮ್ಮ ಸ್ಥಳದಲ್ಲಿ ಅನಧಿಕೃತ ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿದರು.

ನಮ್ಮ ಸ್ಥಳಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದು. ನ್ಯಾಯ ಕೇಳಲು ಹೋದ ನಮ್ಮ ಮೇಲೆ ಗೂಂಡಗಳಂತೆ ವರ್ತಿಸುತ್ತಿದ್ದಾರೆ. ರಕ್ಷಣೆ ನೀಡಬೇಕಿದ್ದ ಪೊಲೀಸ್ ಅಧಿಕಾರಿಗಳು ಮೌನ ವಹಿಸಿರುವುದು ಹಲವು ಸಂಶಯಕ್ಕೆ ಎಡೆ ಮಾಡಿಕೊಟ್ಟಿದ್ದೆ. ಸಾಜಿದ್ ಅಲಿ ಹಾಗೂ ಸಹಚರರು ರಾತ್ರೋರಾತ್ರಿ ಕಾಂಪೌಂಡ್ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿದ್ದು ನಮಗೆ ಸೇರಿರುವ ಸರ್ವೇ ನಂಬರ್ 191 ರ 3 ಎಕರೆ 30 ಗುಂಟೆ ಜಮೀನನ್ನು ದಿನೇ ದಿನಕ್ಕೆ ಒತ್ತುವರಿ ಮಾಡುವ ಮೂಲಕ ಈಗಾಗಲೇ ಸುಮಾರು ಒಂದು ಎಕರೆ ಭೂಮಿಯನ್ನು ಅತಿಕ್ರಮ ಪ್ರವೇಶ ಮಾಡಿದ್ದಾರೆ.  ಈ ಕುರಿತು ನಮಗೆ ನ್ಯಾಯ ಬೇಕಿದೆ ವ್ಯವಸಾಯ ಒಂದೇ ನಮ್ಮ ಜೀವನೋಪಾಯಕ್ಕೆ ಮಾರ್ಗವಾಗಿದ್ದು. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ನಮಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಮನವಿ ಮಾಡಿದರು.

ರೈತ ಮಹಿಳೆ ಪುನೀತ ಮಾತನಾಡಿ ಕಳೆದ ಎಂಟು ತಿಂಗಳಿನಿಂದ ಈ ಸಮಸ್ಯೆ ಉದ್ಭವವಾಗಿದ್ದು ಬೆಂಗಳೂರು ಮೂಲದವರಾದ ಸಾಜಿದ್ ಅಲಿ ಎಂಬುವರು ಸರ್ವೆ ನಂಬರ್ 184/1 ರ ಭೂಮಿ  ಖರೀದಿ ಮಾಡಿದ್ದು ಈಗ ತಮ್ಮ ಅಧಿಕಾರ ಬಲ ಹಾಗೂ ಹಣ ಬಲದಿಂದ ನಮ್ಮ ಭೂಮಿಗೆ ಅತಿಕ್ರಮ ಪ್ರವೇಶ ಮಾಡುತ್ತಿದ್ದಾರೆ  ನಮಗೆ ಭಯ ಹೆಚ್ಚಾಗುತ್ತಿದ್ದು ಜೀವನ ಸಾಗಿಸುವುದೇ ಕಷ್ಟಕರವಾಗಿದೆ. ಪ್ರತಿದಿನದ ಈ ಬೆಳವಣಿಗೆ ಕಾಣುತ್ತಿದ್ದರೆ ನಮ್ಮ ಜೀವಕ್ಕೆ ಕುತ್ತು ಬರಬಹುದು ಎಂಬ ಭಯ ಹೆಚ್ಚಾಗುತ್ತಿದೆ. ಈಗಾಗಲೇ ಒಂದು ಎಕರೆಯಷ್ಟು ಭೂಮಿಯನ್ನು ಅತಿಕ್ರಮ ಪ್ರವೇಶ ಮಾಡಿದ್ದು ಮುಂದೆ ಏನಾಗುವುದು ಎಂಬ ಭಯ ಕಾಡುತ್ತಿದೆ. ಇದೇ ಭೂಮಿಯಲ್ಲಿ ನಾವು ರಾಗಿ, ಜೋಳ ಸೇರಿದಂತೆ ಹಲವು ಬೆಳೆ ಬೆಳೆಯುವ ಮೂಲಕ ನಮ್ಮ ಜೀವನ ಸಾಗಿಸಿದ್ದೇವೆ ಇಂದು ನಮ್ಮ ಭೂಮಿ ಕೈತಪ್ಪಿ ಹೋಗುತ್ತಿದೆ ನಮ್ಮ ಜೀವನಕ್ಕೆ ಆಧಾರವಾಗಿರುವ ಭೂಮಿಯನ್ನು ಉಳಿಸಿಕೊಡಿ ಎಂದು ಮನವಿ ಮಾಡಿದರು

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ನಂದಗುಂದ ವೆಂಕಟೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

16 minutes ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

55 minutes ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

5 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

6 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

12 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

13 hours ago