ಗೂಳ್ಯನಂದಿಗುಂದ ಗ್ರಾಮದ ಸ.ನಂ 191 ರಲ್ಲಿ ನಮ್ಮ ತಾಯಿಯವರಿಗೆ ಮಂಜೂರಾಗಿದ್ದ 3 ಎಕರೆ 30 ಗುಂಟೆ ಜಮೀನಿನಲ್ಲಿ ಕಳೆದ 50 ವರ್ಷಗಳಿಂದ ನಮ್ಮ ಕುಟುಂಬ ಉತ್ತು ಬಿತ್ತಿ ಬೆಳೆತೆಗೆದು ಜೀವನ ಸಾಗಿಸುತ್ತಿದ್ದೇವೆ. ಈಗ ನಮ್ಮ ಜಮೀನಿನ ಪಕ್ಕದ 184/1 ರಲ್ಲಿ ಬೆಂಗಳೂರು ಮೂಲದ ಓನ್ ವೋಲ್ಡ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ನ ಮಾಲಿಕರಾದ ಸಜೀದ್ ಆಲಿ ಆಗ ಅವರು ಜಮೀನು ಖರೀದಿ ಮಾಡಿದ್ದು. ಅವರ ಜಮೀನಿನ ಪಕ್ಷದಲ್ಲಿರುವ ನಮ್ಮ ಜಮೀನನ್ನು ಗೂಂಡಾ ಪಡೆ ಕಟ್ಟಿಕೊಂಡು ಅಕ್ರಮವಾಗಿ ಒತ್ತುವರಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರೈತ ಮುನಿರಾಜು ಆರೋಪಿಸಿದ್ದಾರೆ.
ನಮ್ಮ ಬದುಕಿಗೆ ಆಧಾರವಾಗಿದ್ದ ಭೂಮಿಯನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ. ಪರಿಶಿಷ್ಟ ಜಾತಿಗೆ ಸೇರಿದವರು ಎಂಬ ಕಾರಣಕ್ಕೆ ನಮ್ಮ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಹ ನೀಡಿದ್ದೇವೆ. ಎಲ್ಲವೂ ತಿಳಿದಿದ್ದರೂ ಅಧಿಕಾರಿಗಳು ಮತ್ತು ಪೊಲೀಸರು ಮೌನವಹಿಸಿರುವುದು ವಿಪರ್ಯಾಸ ಎಂದು ತಮ್ಮ ನೋವನ್ನು ತೋಡಿಕೊಂಡರು.
ನ್ಯಾಯಾಲಯದಲ್ಲಿ ತಾತ್ಕಾಲಿಕ ತಡೆಯಾಜ್ಞೆ ಇದ್ದರೂ ಸಹ ನ್ಯಾಯಾಲಯದ ಬೇಸಿಗೆ ರಜೆಯನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸುತ್ತಿರುವ ಸಜೀದ್ ಆಲಿ ಆಗ ಮತ್ತು ಅವರ ಸಹಚರರು ಭೂ ಮಾಪನಾ ಇಲಾಖೆಗೆ ನೀಡಿರುವ ಸರ್ವೇ ಅರ್ಜಿ ಅನುಮೋದನೆಗಾಗಿ ಬಾಕಿ ಉಳಿದಿದ್ದರೂ ಖಾಸಗಿ ಸರ್ವೆ ಅಧಿಕಾರಿಗಳ ಸಹಾಯದಿಂದ ನಮ್ಮ ಸ್ಥಳದಲ್ಲಿ ಅನಧಿಕೃತ ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ನಂದಗುಂದ ವೆಂಕಟೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…