Categories: ಲೇಖನ

“ನಮ್ಮ ಬೆನ್ನ ಹಿಂದೆಯೇ ನೆರಳಿನಂತೆ ಸಾವು ಎಂಬ ಅಂತಿಮ ಸತ್ಯವೂ ಹಿಂಬಾಲಿಸುತ್ತಿರುತ್ತದೆ”

ಮರಣವೇ ಮಹಾ ನವಮಿ…….

ಮೊನ್ನೆ ಅಹಮದಾಬಾದಿನ ವಿಮಾನ ನಿಲ್ದಾಣದ ಬಳಿ ನಡೆದ ಬೋಯಿಂಗ್ ಡ್ರೀಮ್ ಲೈನರ್ 787 ವಿಮಾನದ 265 ಕ್ಕೂ ಹೆಚ್ಚು ಜನರ ಸಾವಿನ ದುರ್ಘಟನೆ ನಮ್ಮ ಬದುಕಿಗೆ ಹೇಗೆಲ್ಲಾ ಪಾಠವಾಗಬಹುದು……..

ಏಕೆಂದರೆ ಆಧುನಿಕ ಕಾಲದಲ್ಲಿ ಅಪಘಾತಗಳೆಂಬುದು ಬಹುತೇಕ ಸಾಮಾನ್ಯ ಸಹಜ. ಅದರಿಂದ ತಪ್ಪಿಸಿಕೊಳ್ಳುವುದು ಕಷ್ಟ. ಹೇಗೆ ನಾವು ಸುರಕ್ಷಿತೆಗಾಗಿ, ಅಧೀಕೃತವಾಗಿ ಜೀವವಿಮೆ ಮತ್ತು ಆರೋಗ್ಯ ವಿಮೆ ಮಾಡಿಸಿಟ್ಟುಕೊಳ್ಳುತ್ತೇವೆಯೋ ಹಾಗೆಯೇ ಅನಧೀಕೃತವಾಗಿ ನಮ್ಮ ಬೆನ್ನ ಹಿಂದೆಯೇ ನೆರಳಿನಂತೆ ಸಾವು ಎಂಬ ಅಂತಿಮ ಸತ್ಯವೂ ಹಿಂಬಾಲಿಸುತ್ತಿರುತ್ತದೆ. ಬದುಕಿನ ಪ್ರಯಾಣದಲ್ಲಿ ಅದೂ ಸಹ ಜೊತೆಗಾರ…….

ಅದರಲ್ಲೂ ನಾವು ವಿದೇಶಕ್ಕೆ ಹೋಗಬೇಕಾದರೆ ಸಧ್ಯದಲ್ಲಿ ಇರುವ ಅತ್ಯಂತ ಸುಲಭ, ಸುರಕ್ಷಿತ ಪ್ರಯಾಣದ ಮಾರ್ಗವೆಂದರೆ ವಾಯುಯಾನ ಮಾತ್ರ. ಸಮುದ್ರ ಮತ್ತು ರಸ್ತೆ ತೀರಾ ಅವಾಸ್ತವಿಕ. ನೀವು ಅನಿವಾರ್ಯವಾಗಿ ವಿಮಾನದಲ್ಲಿ ಅದರಲ್ಲಿ ಸಂಚರಿಸಲೇಬೇಕು ಅಂತಹ ಸಂದರ್ಭದಲ್ಲಿ ಅಪರೂಪಕ್ಕೊಮ್ಮೆ ಈ ರೀತಿಯ ಅಪಘಾತವು ಕೂಡ ಆಕಸ್ಮಿಕ ಮತ್ತು ಅನಿರೀಕ್ಷಿತವೇ ಆದರು ಸಹಜವೇ ಆಗಿದೆ……

ಈಗ ಮುಖ್ಯ ವಿಷಯವೇನೆಂದರೆ , ಆ ವಿಮಾನ ಅಪಘಾತದಲ್ಲಿ ಸತ್ತ ಸುಮಾರು 265 ಕ್ಕೂ ಹೆಚ್ಚು ಜನರ ಕೌಟುಂಬಿಕ ಸಂಬಂಧಗಳು, ಪ್ರಯಾಣದ ಉದ್ದೇಶ, ಅವರ ಅವಲಂಬಿತರ ಭವಿಷ್ಯದ ಬದುಕು, ಮಡಿದ ಜನರ ಕನಸುಗಳು ಇವುಗಳನ್ನು ಮಾಧ್ಯಮಗಳ ಮೂಲಕ ನೋಡುತ್ತಿದ್ದರೆ, ಒಬ್ಬೊಬ್ಬರಿಗೆ ಒಂದೊಂದು ರೀತಿಯ ಭಾವನೆಗಳು ಉಕ್ಕುತ್ತವೆ. ಒಬ್ಬರಿಗೆ ಅಪ್ಪ ಇಲ್ಲವಾದರೆ, ಇನ್ನೊಬ್ಬರಿಗೆ ಅಮ್ಮ ಇಲ್ಲ, ಇನ್ನೊಬ್ಬರಿಗೆ ಮಗಳಿಲ್ಲ, ಮತ್ತೊಬ್ಬರಿಗೆ ಅಣ್ಣ ತಂಗಿ ಅಕ್ಕ ತಮ್ಮ ಇಲ್ಲ, ಮತ್ತೊಬ್ಬರಿಗೆ ಮೊಮ್ಮಗ ಇಲ್ಲ, ಇನ್ಯಾರಿಗೂ ಅಜ್ಜ ಅಜ್ಜಿ ಇಲ್ಲ, ಮತ್ಯಾರದೋ ಇಡೀ ಕುಟುಂಬವೇ ಇಲ್ಲ, ಇನ್ಯಾರೋ ತಾಯಿ ಕಾಣಲು ಹೋದ ಮಗಳಿಲ್ಲ, ಮಗಳು ಕಾಣಲು ಹೋದ ತಂದೆ ಇಲ್ಲ, ಹೆಂಡತಿ ಕಾಣಲು ಹೋದ ಗಂಡ ಇಲ್ಲ, ಗಂಡ ಕಾಣಲು ಹೋದ ಹೆಂಡತಿ ಇಲ್ಲ, ಮತ್ಯಾರೋ ಹೆಂಡತಿಯ ಚಿತಾಭಸ್ಮ ವಿಸರ್ಜಿಸಲು ಬಂದು ಆತನೇ ಇಲ್ಲ ಹೀಗೆ ನೂರಾರು ವ್ಯಥೆಗಳು……

ಇದರಿಂದ ಕೆಲವರಿಗೆ ನೋವಾಗಬಹುದು, ಕೆಲವರಿಗೆ ದುಃಖವಾಗಬಹುದು, ಕೆಲವರಿಗೆ ಆಘಾತವಾಗಬಹುದು, ಕೆಲವರಿಗೆ ಭಯವಾಗಬಹುದು, ಕೆಲವರಿಗೆ ಮಾನಸಿಕ ಒತ್ತಡ ಹೆಚ್ಚಾಗಬಹುದು, ಕೆಲವರಿಗೆ ವೈರಾಗ್ಯ ಮೂಡಬಹುದು, ಕೆಲವರಿಗೆ ಬದುಕಿನ ನಶ್ವರತೆ ಆವರಿಸಬಹುದು, ಕೆಲವರಿಗೆ ಸಂಬಂಧಗಳ ಪ್ರಾಮುಖ್ಯತೆ ಅರಿವಾಗಬಹುದು, ಕೆಲವರಿಗೆ ತಮ್ಮ ತಮ್ಮ ಗೆಳೆಯರು, ನೆಂಟರ ನೆನಪಾಗಬಹುದು, ಹಲವರಿಗೆ ಅನಾಥ ಪ್ರಜ್ಞೆ ಕಾಡಬಹುದು, ಇನ್ನೂ ಕೆಲವರಿಗೆ ಈ ರೀತಿಯ ಘಟನೆ ನಮಗೇ ಆದರೆ ಏನಾಗಬಹುದು ಎಂದೂ ಕಾಡಬಹುದು, ನಮ್ಮ ಹತ್ತಿರದವರು ಹೀಗೆಯೇ ಇಲ್ಲವಾದರೆ ಹೇಗಾಗಬಹುದು ಎನ್ನುವ ಕಲ್ಪನೆಗೂ ಜಾರಬಹುದು……

ಸಾಮಾನ್ಯವಾಗಿ ರಸ್ತೆ, ರೈಲು, ಅಗ್ನಿ, ಪ್ರವಾಹ, ಭೂಕಂಪ, ಸಾಂಕ್ರಾಮಿಕ ರೋಗ ಮುಂತಾದ ಅವಘಡಗಳು ಆಗಾಗ ನಡೆಯುತ್ತಲೇ ಇರುತ್ತದೆ. ಇದರಿಂದ ನಾವು ಕಲಿಯಬಹುದಾದ ಬಹುದೊಡ್ಡ ಪಾಠವೆಂದರೆ, ಎಲ್ಲಾ ಸಾಧ್ಯತೆಗಳನ್ನೂ ಒಳಗೊಂಡಿರುವ, ಬದುಕಿನಲ್ಲಿ ಅದನ್ನು ಸಹಜವಾಗಿ ಸ್ವೀಕರಿಸುವ ಸ್ಥಿತಪ್ರಜ್ಞ ಮನಸ್ಥಿತಿ. ಅಂದರೆ ಸಾವು ನೋವುಗಳು ಬದುಕಿನ ಅತ್ಯಂತ ಸ್ವಾಭಾವಿಕ, ಅನಿವಾರ್ಯ ವಿಧಿ. ಕಾಲ ಮತ್ತು ಸಮಯ ಮಾತ್ರ ಎಷ್ಟು ಮತ್ತು ಯಾವಾಗ ಎಂಬುದಷ್ಟೇ ನಿರ್ಧಾರವಾಗಬೇಕಾಗಿರುತ್ತದೆ……

ಇಂತಹ ಸಂದರ್ಭದಲ್ಲಿ ಒಂದಷ್ಟು ಜನ ಹಿಂದೆ, ಮತ್ತೊಂದಿಷ್ಟು ಜನ ಮುಂದೆ, ಕೆಲವೊಂದಿಷ್ಟು ಜನ ನಮ್ಮೊಂದಿಗೆ ಸಾಯುತ್ತಲೇ ಇರುತ್ತಾರೆ. ಸತ್ತವರು ಅಪರಿಚಿತರಾದರೆ ಒಂದಷ್ಟು ನಿರ್ಲಕ್ಷ್ಯ, ಸತ್ತವರು ಪರಿಚಿತರಾದರೆ ಸಣ್ಣಮಟ್ಟದ ವಿಷಾದ, ಸತ್ತವರು ನಮ್ಮವರೇ ಆದರೆ ಕೆಲದಿನಗಳ ದುಃಖ, ಮತ್ತೆ ಎಂದಿನಂತೆ ಸಹಜ ಸ್ಥಿತಿ. ನಮ್ಮ ಕರ್ತವ್ಯ ನೆನಪು ಮಾಡಿಕೊಂಡು ಮುನ್ನಡೆಯಬೇಕು. ಜೊತೆಗೆ ಸಾವು ಸದಾ ನಮ್ಮ ಬೆನ್ನ ಹಿಂದೆ ಇದೆ ಎಂಬ ಭಾವದೊಡನೆ ನಮ್ಮೊಳಗಿನ ಮಾನವೀಯತೆಯನ್ನು ಸದಾ ಜೀವಂತವಾಗಿಟ್ಟುಕೊಳ್ಳಬೇಕು…..

ತುಂಬಾ ಭ್ರಷ್ಟರಾಗಿದ್ದರೆ ಅದನ್ನು ಆದಷ್ಟು ಕಡಿಮೆ ಮಾಡಿಕೊಳ್ಳಬೇಕು. ತುಂಬಾ ಜಾತಿ ಧರ್ಮದ ಅಂದಾಭಿಮಾನಿಗಳಾಗಿದ್ದರೆ ಅದನ್ನೂ ಕಡಿಮೆ ಮಾಡಿಕೊಳ್ಳಬೇಕು. ಸಂಬಂಧಗಳ ಬಗ್ಗೆ ತೀವ್ರ ಭಾವನೆಗಳನ್ನು ಬೆಳೆಸಿಕೊಂಡಿದ್ದರೆ ಆ ತೀವ್ರತೆ ಅಥವಾ ಗಾಢತೆಯನ್ನು ಕಡಿಮೆ ಮಾಡಿಕೊಳ್ಳಬೇಕು. ಮನೆ, ಆಸ್ತಿ, ವಾಹನ ಮುಂತಾದವುಗಳ ಬಗ್ಗೆ ಅತಿಯಾದ ಮೋಹವಿದ್ದರೆ ಅದನ್ನೂ ಕಡಿಮೆ ಮಾಡಿಕೊಳ್ಳಬೇಕು. ಒಟ್ಟಿನಲ್ಲಿ ಒಂದಷ್ಟು ಉದಾರವಾದ, ವಿಶಾಲವಾದ, ಸಮಗ್ರವಾದ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಆಗ ನಮಗೆ ಆ ಘಟನೆ ಆದಾಗ ಆಗಬಹುದಾದ ನೋವಿನ ತೀವ್ರತೆ ಕಡಿಮೆಯಾಗುತ್ತದೆ…..

ನಾವು ಎಷ್ಟು ಹೆಚ್ಚು ನೋವನ್ನು ಅನುಭವಿಸುತ್ತೇವೆಯೋ ಅಷ್ಟರಮಟ್ಟಿಗೆ ನಾವಿನ್ನು ಅಜ್ಞಾನಿಗಳು ಎಂದೇ ಭಾವಿಸಬೇಕು. ನೋವಿನ ತೀವ್ರತೆ ಕಡಿಮೆಯಾದರೆ ನಮ್ಮಲ್ಲೂ ಒಂದಷ್ಟು ಅರಿವು ಉಂಟಾಗಿದೆ ಎಂದು ಅರ್ಥೈಸಿಕೊಳ್ಳಬಹುದು. ಏಕೆಂದರೆ ಸಾವು ಬಹುತೇಕ ನಮ್ಮ ವ್ಯಾಪ್ತಿಗೆ ಮೀರಿದ್ದು. ಅದಕ್ಕಾಗಿ ಚಿಂತಿಸಿ ಫಲವಿಲ್ಲ. ಆದ್ದರಿಂದ ಈ ರೀತಿಯ ಆಘಾತಗಳು ನಮ್ಮನ್ನು ಹೆಚ್ಚು ಭಾದಿಸದಂತೆ ಕಾಪಾಡಿಕೊಳ್ಳುವ ಮನಸ್ಥಿತಿ ಸಾಧ್ಯವಾದಷ್ಟು ಬೆಳೆಸಿಕೊಳ್ಳೋಣ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

22 hours ago