ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತನಾಡಿದರು.

ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು ಎಂದರು.

ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ – ಬದ್ಧತೆ ಇಟ್ಟುಕೊಂಡಿದ್ದೇನೆ.
ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದು ಹೇಳಿದರು.

ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ, ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ. ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ ಎಂದರು.

ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದೆ ಎಂದು ತಿಳಿಸಿದರು.

ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯವಾದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ ಎಂದರು.

ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಆಗುತ್ತೇವೆ ಎಂದು ಹೇಳಿದರು.

ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

2 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago