ನಮ್ಮ ಸಂವಿಧಾನ ಆಶಯಗಳನ್ನ ಎತ್ತಿಹಿಡಿಯಬೇಕು- ಹಿರಿಯ ವಕೀಲ ರುದ್ರಾರಾಧ್ಯ

ದೊಡ್ಡಬಳ್ಳಾಪುರ : ನಮ್ಮ ಸಂವಿಧಾನದ ಆಶಯಗಳಾದ ಭ್ರಾತೃತ್ವ, ಸೋದರತೆ, ಸಮಾನತೆಯನ್ನು ಕಾಯ್ದುಕೊಳ್ಳುವುದು ಮತ್ತು ಕೋಮುವಾದವನ್ನು ಅಳಿಸುವುದು ನಮ್ಮ ಆದ್ಯ ಕರ್ತವ್ಯವಾಗಬೇಕು, ಇಂದು ಕೋಮುವಾದ ಹಾಗೂ ಮೂಲಭೂತವಾದಗಳು ಬೆಳೆದು ನಿಂತಿದೆ, ಅದು ಯಾವುದೇ ಧರ್ಮದ ಮೂಲಭೂತವಾದರೂ ಮಾನವ ವಿರೋಧಿಯಾದುದು, ಇಂತಹ ವಿಷಯಗಳು ಹೆಚ್ಚಾದಾಗ ಮನುಷ್ಯ ಮನುಷ್ಯನ ನಡುವೆ ಭೇದ ಉಂಟಾಗುತ್ತದೆ ಎಂದು ಹಿರಿಯ ವಕೀಲ ರುದ್ರಾರಾಧ್ಯ ಅವರು ಹೇಳಿದರು.

ರಾಮನಗರದ ಐಜೂರು ಪೊಲೀಸ್ ಇನ್ಸ್ಪೆಕ್ಟರ್ ವಿನಾಕಾರಣ ವಕೀಲರ ಮೇಲೆ ಎಫ್‌ಐಆರ್ ದಾಖಲಿಸಿರುವುದನ್ನು ಕೂಡಲೇ ರದ್ದು ಮಾಡಬೇಕು ಎಂದು ತಾಲ್ಲೂಕು ವಕೀಲರ ಸಂಘದ ನೇತೃತ್ವದಲ್ಲಿ ನಡೆದ ಕಲಾಪ ಬಹಿಷ್ಕಾರ ಹಾಗೂ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನ್ಯಾಯಾವಾದಿಗಳಿಗೆ ಯಾವುದೇ ಧರ್ಮವಿಲ್ಲ, ಕಕ್ಷಿದಾರನಿಗೆ ಕಾನೂನು ರೀತಿಯ ನ್ಯಾಯ ಒದಗಿಸುವುದೇ ನಮ್ಮ ಧರ್ಮ ಎಂದು ಹೇಳಿದರು.

ನ್ಯಾಯಾಲಯಗಳು ನೀಡುವ ಆದೇಶವನ್ನು ಟೀಕಿಸುವ ಹಕ್ಕು ಇದೆ. ಆದರೆ, ಅದು ಕಾನೂನು ವ್ಯಾಪ್ತಿಯನ್ನು ಮೀರಿರಬಾರದು ಎಂದ ಅವರು, ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಂಚಿಕೊಂಡವರು ತಪ್ಪು ಮಾಡಿದ್ದರೆ ಅವರ ವಿರುದ್ಧ ಕೇಸು ದಾಖಲು ಮಾಡಬೇಕಿತ್ತು. ಆದರೆ, ಈವರೆಗೂ ಆತನ ಮೇಲೆ ಕೇಸು ದಾಖಲು‌ ಮಾಡಿಲ್ಲ. ಬದಲಿಗೆ ಇಡೀ ವಕೀಲ ಸಮುದಾಯದ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ ಎಂದರು.

ವಕೀಲರ ಮೇಲೆ ದಾಖಲು ಮಾಡಿರುವ ಎಫ್‌ಐಆರ್ ಈ ಕೂಡಲೇ ವಜಾ ಮಾಡಬೇಕು, ವಕೀಲರ ನಡುವೆ ಸಾಮರಸ್ಯ ಕಾಪಾಡಬೇಕು, ಹಾಗೂ ಜಿಲ್ಲಾಡಳಿತ ಮಧ್ಯೆ ಪ್ರವೇಶ ಮಾಡಿ ಸೂಕ್ತ ತನಿಖೆ ನಡೆಸಿ ಪ್ರಕರಣವನ್ನು ಶಾಂತ ರೀತಿಯಲ್ಲಿ ಬಗೆ ಹರಿಸಬೇಕು ಎಂದು ಒತ್ತಾಯಿಸಿದರು.

ನಂತರ ವಕೀಲರ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ ಮಾತನಾಡಿ, ವಕೀಲರ ರಕ್ಷಣಾ ಕಾಯ್ದೆ ಜಾರಿಯಾದರೂ ವಕೀಲರ ಮೇಲಿನ ದೌರ್ಜನ್ಯಗಳು ನಿಲ್ಲುತ್ತಿಲ್ಲ, ಪೊಲೀಸರು 40 ಜನ ವಕೀಲರ ಮೇಲೆ ಎಫ್‌ಐಆರ್ ದಾಖಲು ಮಾಡಿದೆ, ಪೊಲೀಸರ ಈ ನಿಲುವನ್ನು ಖಂಡಿಸಿ ರಾಜ್ಯದಾದ್ಯಂತ 190 ತಾಲ್ಲೂಕುಗಳ ವಕೀಲರ ಸಂಘಗಳು ಇಂದು ಕೋರ್ಟ್ ಕಲಾಪಗಳನ್ನು ಬಹಿಷ್ಕಾರ ಮಾಡಿ ರಾಮನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿವೆ ಎಂದರು.

ಈ ಸಂದರ್ಭದಲ್ಲಿ ಸಂಘದ ತಾಲ್ಲೂಕು ಉಪಾಧ್ಯಕ್ಷ ಎಂ.ಆರ್.ಸುರೇಶ್, ನಿರ್ದೇಶಕರುಗಳಾದ ಆರ್.ಪ್ರಭಾಕರ್. ಎನ್.ಲೀಲಾವತಿ, ನಾಝಿಮ್, ಮಮ್ತಾಜ್ ಅನಿತ, ಶಿವಣ್ಣ, ಚಂದೇಶ್, ಮೋಹನ್ ಕುಮಾರ್, ಪ್ರವೀಣ್ ಕುಮಾರ್ ಗುಪ್ತಾ, ಉಮೇಶ, ಸೇರಿದಂತೆ ನೂರಾರು ವಕೀಲರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

17 minutes ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

2 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

10 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

19 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

20 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

22 hours ago