ನಮ್ಮ ಸಂವಿಧಾನ ಆಶಯಗಳನ್ನ ಎತ್ತಿಹಿಡಿಯಬೇಕು- ಹಿರಿಯ ವಕೀಲ ರುದ್ರಾರಾಧ್ಯ

ದೊಡ್ಡಬಳ್ಳಾಪುರ : ನಮ್ಮ ಸಂವಿಧಾನದ ಆಶಯಗಳಾದ ಭ್ರಾತೃತ್ವ, ಸೋದರತೆ, ಸಮಾನತೆಯನ್ನು ಕಾಯ್ದುಕೊಳ್ಳುವುದು ಮತ್ತು ಕೋಮುವಾದವನ್ನು ಅಳಿಸುವುದು ನಮ್ಮ ಆದ್ಯ ಕರ್ತವ್ಯವಾಗಬೇಕು, ಇಂದು ಕೋಮುವಾದ ಹಾಗೂ ಮೂಲಭೂತವಾದಗಳು ಬೆಳೆದು ನಿಂತಿದೆ, ಅದು ಯಾವುದೇ ಧರ್ಮದ ಮೂಲಭೂತವಾದರೂ ಮಾನವ ವಿರೋಧಿಯಾದುದು, ಇಂತಹ ವಿಷಯಗಳು ಹೆಚ್ಚಾದಾಗ ಮನುಷ್ಯ ಮನುಷ್ಯನ ನಡುವೆ ಭೇದ ಉಂಟಾಗುತ್ತದೆ ಎಂದು ಹಿರಿಯ ವಕೀಲ ರುದ್ರಾರಾಧ್ಯ ಅವರು ಹೇಳಿದರು.

ರಾಮನಗರದ ಐಜೂರು ಪೊಲೀಸ್ ಇನ್ಸ್ಪೆಕ್ಟರ್ ವಿನಾಕಾರಣ ವಕೀಲರ ಮೇಲೆ ಎಫ್‌ಐಆರ್ ದಾಖಲಿಸಿರುವುದನ್ನು ಕೂಡಲೇ ರದ್ದು ಮಾಡಬೇಕು ಎಂದು ತಾಲ್ಲೂಕು ವಕೀಲರ ಸಂಘದ ನೇತೃತ್ವದಲ್ಲಿ ನಡೆದ ಕಲಾಪ ಬಹಿಷ್ಕಾರ ಹಾಗೂ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನ್ಯಾಯಾವಾದಿಗಳಿಗೆ ಯಾವುದೇ ಧರ್ಮವಿಲ್ಲ, ಕಕ್ಷಿದಾರನಿಗೆ ಕಾನೂನು ರೀತಿಯ ನ್ಯಾಯ ಒದಗಿಸುವುದೇ ನಮ್ಮ ಧರ್ಮ ಎಂದು ಹೇಳಿದರು.

ನ್ಯಾಯಾಲಯಗಳು ನೀಡುವ ಆದೇಶವನ್ನು ಟೀಕಿಸುವ ಹಕ್ಕು ಇದೆ. ಆದರೆ, ಅದು ಕಾನೂನು ವ್ಯಾಪ್ತಿಯನ್ನು ಮೀರಿರಬಾರದು ಎಂದ ಅವರು, ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಂಚಿಕೊಂಡವರು ತಪ್ಪು ಮಾಡಿದ್ದರೆ ಅವರ ವಿರುದ್ಧ ಕೇಸು ದಾಖಲು ಮಾಡಬೇಕಿತ್ತು. ಆದರೆ, ಈವರೆಗೂ ಆತನ ಮೇಲೆ ಕೇಸು ದಾಖಲು‌ ಮಾಡಿಲ್ಲ. ಬದಲಿಗೆ ಇಡೀ ವಕೀಲ ಸಮುದಾಯದ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ ಎಂದರು.

ವಕೀಲರ ಮೇಲೆ ದಾಖಲು ಮಾಡಿರುವ ಎಫ್‌ಐಆರ್ ಈ ಕೂಡಲೇ ವಜಾ ಮಾಡಬೇಕು, ವಕೀಲರ ನಡುವೆ ಸಾಮರಸ್ಯ ಕಾಪಾಡಬೇಕು, ಹಾಗೂ ಜಿಲ್ಲಾಡಳಿತ ಮಧ್ಯೆ ಪ್ರವೇಶ ಮಾಡಿ ಸೂಕ್ತ ತನಿಖೆ ನಡೆಸಿ ಪ್ರಕರಣವನ್ನು ಶಾಂತ ರೀತಿಯಲ್ಲಿ ಬಗೆ ಹರಿಸಬೇಕು ಎಂದು ಒತ್ತಾಯಿಸಿದರು.

ನಂತರ ವಕೀಲರ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ ಮಾತನಾಡಿ, ವಕೀಲರ ರಕ್ಷಣಾ ಕಾಯ್ದೆ ಜಾರಿಯಾದರೂ ವಕೀಲರ ಮೇಲಿನ ದೌರ್ಜನ್ಯಗಳು ನಿಲ್ಲುತ್ತಿಲ್ಲ, ಪೊಲೀಸರು 40 ಜನ ವಕೀಲರ ಮೇಲೆ ಎಫ್‌ಐಆರ್ ದಾಖಲು ಮಾಡಿದೆ, ಪೊಲೀಸರ ಈ ನಿಲುವನ್ನು ಖಂಡಿಸಿ ರಾಜ್ಯದಾದ್ಯಂತ 190 ತಾಲ್ಲೂಕುಗಳ ವಕೀಲರ ಸಂಘಗಳು ಇಂದು ಕೋರ್ಟ್ ಕಲಾಪಗಳನ್ನು ಬಹಿಷ್ಕಾರ ಮಾಡಿ ರಾಮನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿವೆ ಎಂದರು.

ಈ ಸಂದರ್ಭದಲ್ಲಿ ಸಂಘದ ತಾಲ್ಲೂಕು ಉಪಾಧ್ಯಕ್ಷ ಎಂ.ಆರ್.ಸುರೇಶ್, ನಿರ್ದೇಶಕರುಗಳಾದ ಆರ್.ಪ್ರಭಾಕರ್. ಎನ್.ಲೀಲಾವತಿ, ನಾಝಿಮ್, ಮಮ್ತಾಜ್ ಅನಿತ, ಶಿವಣ್ಣ, ಚಂದೇಶ್, ಮೋಹನ್ ಕುಮಾರ್, ಪ್ರವೀಣ್ ಕುಮಾರ್ ಗುಪ್ತಾ, ಉಮೇಶ, ಸೇರಿದಂತೆ ನೂರಾರು ವಕೀಲರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

10 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

1 day ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago