ನಮ್ಮ ಸಂವಿಧಾನ ಆಶಯಗಳನ್ನ ಎತ್ತಿಹಿಡಿಯಬೇಕು- ಹಿರಿಯ ವಕೀಲ ರುದ್ರಾರಾಧ್ಯ

ದೊಡ್ಡಬಳ್ಳಾಪುರ : ನಮ್ಮ ಸಂವಿಧಾನದ ಆಶಯಗಳಾದ ಭ್ರಾತೃತ್ವ, ಸೋದರತೆ, ಸಮಾನತೆಯನ್ನು ಕಾಯ್ದುಕೊಳ್ಳುವುದು ಮತ್ತು ಕೋಮುವಾದವನ್ನು ಅಳಿಸುವುದು ನಮ್ಮ ಆದ್ಯ ಕರ್ತವ್ಯವಾಗಬೇಕು, ಇಂದು ಕೋಮುವಾದ ಹಾಗೂ ಮೂಲಭೂತವಾದಗಳು ಬೆಳೆದು ನಿಂತಿದೆ, ಅದು ಯಾವುದೇ ಧರ್ಮದ ಮೂಲಭೂತವಾದರೂ ಮಾನವ ವಿರೋಧಿಯಾದುದು, ಇಂತಹ ವಿಷಯಗಳು ಹೆಚ್ಚಾದಾಗ ಮನುಷ್ಯ ಮನುಷ್ಯನ ನಡುವೆ ಭೇದ ಉಂಟಾಗುತ್ತದೆ ಎಂದು ಹಿರಿಯ ವಕೀಲ ರುದ್ರಾರಾಧ್ಯ ಅವರು ಹೇಳಿದರು.

ರಾಮನಗರದ ಐಜೂರು ಪೊಲೀಸ್ ಇನ್ಸ್ಪೆಕ್ಟರ್ ವಿನಾಕಾರಣ ವಕೀಲರ ಮೇಲೆ ಎಫ್‌ಐಆರ್ ದಾಖಲಿಸಿರುವುದನ್ನು ಕೂಡಲೇ ರದ್ದು ಮಾಡಬೇಕು ಎಂದು ತಾಲ್ಲೂಕು ವಕೀಲರ ಸಂಘದ ನೇತೃತ್ವದಲ್ಲಿ ನಡೆದ ಕಲಾಪ ಬಹಿಷ್ಕಾರ ಹಾಗೂ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನ್ಯಾಯಾವಾದಿಗಳಿಗೆ ಯಾವುದೇ ಧರ್ಮವಿಲ್ಲ, ಕಕ್ಷಿದಾರನಿಗೆ ಕಾನೂನು ರೀತಿಯ ನ್ಯಾಯ ಒದಗಿಸುವುದೇ ನಮ್ಮ ಧರ್ಮ ಎಂದು ಹೇಳಿದರು.

ನ್ಯಾಯಾಲಯಗಳು ನೀಡುವ ಆದೇಶವನ್ನು ಟೀಕಿಸುವ ಹಕ್ಕು ಇದೆ. ಆದರೆ, ಅದು ಕಾನೂನು ವ್ಯಾಪ್ತಿಯನ್ನು ಮೀರಿರಬಾರದು ಎಂದ ಅವರು, ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಂಚಿಕೊಂಡವರು ತಪ್ಪು ಮಾಡಿದ್ದರೆ ಅವರ ವಿರುದ್ಧ ಕೇಸು ದಾಖಲು ಮಾಡಬೇಕಿತ್ತು. ಆದರೆ, ಈವರೆಗೂ ಆತನ ಮೇಲೆ ಕೇಸು ದಾಖಲು‌ ಮಾಡಿಲ್ಲ. ಬದಲಿಗೆ ಇಡೀ ವಕೀಲ ಸಮುದಾಯದ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ ಎಂದರು.

ವಕೀಲರ ಮೇಲೆ ದಾಖಲು ಮಾಡಿರುವ ಎಫ್‌ಐಆರ್ ಈ ಕೂಡಲೇ ವಜಾ ಮಾಡಬೇಕು, ವಕೀಲರ ನಡುವೆ ಸಾಮರಸ್ಯ ಕಾಪಾಡಬೇಕು, ಹಾಗೂ ಜಿಲ್ಲಾಡಳಿತ ಮಧ್ಯೆ ಪ್ರವೇಶ ಮಾಡಿ ಸೂಕ್ತ ತನಿಖೆ ನಡೆಸಿ ಪ್ರಕರಣವನ್ನು ಶಾಂತ ರೀತಿಯಲ್ಲಿ ಬಗೆ ಹರಿಸಬೇಕು ಎಂದು ಒತ್ತಾಯಿಸಿದರು.

ನಂತರ ವಕೀಲರ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ ಮಾತನಾಡಿ, ವಕೀಲರ ರಕ್ಷಣಾ ಕಾಯ್ದೆ ಜಾರಿಯಾದರೂ ವಕೀಲರ ಮೇಲಿನ ದೌರ್ಜನ್ಯಗಳು ನಿಲ್ಲುತ್ತಿಲ್ಲ, ಪೊಲೀಸರು 40 ಜನ ವಕೀಲರ ಮೇಲೆ ಎಫ್‌ಐಆರ್ ದಾಖಲು ಮಾಡಿದೆ, ಪೊಲೀಸರ ಈ ನಿಲುವನ್ನು ಖಂಡಿಸಿ ರಾಜ್ಯದಾದ್ಯಂತ 190 ತಾಲ್ಲೂಕುಗಳ ವಕೀಲರ ಸಂಘಗಳು ಇಂದು ಕೋರ್ಟ್ ಕಲಾಪಗಳನ್ನು ಬಹಿಷ್ಕಾರ ಮಾಡಿ ರಾಮನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿವೆ ಎಂದರು.

ಈ ಸಂದರ್ಭದಲ್ಲಿ ಸಂಘದ ತಾಲ್ಲೂಕು ಉಪಾಧ್ಯಕ್ಷ ಎಂ.ಆರ್.ಸುರೇಶ್, ನಿರ್ದೇಶಕರುಗಳಾದ ಆರ್.ಪ್ರಭಾಕರ್. ಎನ್.ಲೀಲಾವತಿ, ನಾಝಿಮ್, ಮಮ್ತಾಜ್ ಅನಿತ, ಶಿವಣ್ಣ, ಚಂದೇಶ್, ಮೋಹನ್ ಕುಮಾರ್, ಪ್ರವೀಣ್ ಕುಮಾರ್ ಗುಪ್ತಾ, ಉಮೇಶ, ಸೇರಿದಂತೆ ನೂರಾರು ವಕೀಲರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

7 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

8 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

2 days ago