ದೊಡ್ಡಬಳ್ಳಾಪುರ : ನಮ್ಮ ಸಂವಿಧಾನದ ಆಶಯಗಳಾದ ಭ್ರಾತೃತ್ವ, ಸೋದರತೆ, ಸಮಾನತೆಯನ್ನು ಕಾಯ್ದುಕೊಳ್ಳುವುದು ಮತ್ತು ಕೋಮುವಾದವನ್ನು ಅಳಿಸುವುದು ನಮ್ಮ ಆದ್ಯ ಕರ್ತವ್ಯವಾಗಬೇಕು, ಇಂದು ಕೋಮುವಾದ ಹಾಗೂ ಮೂಲಭೂತವಾದಗಳು ಬೆಳೆದು ನಿಂತಿದೆ, ಅದು ಯಾವುದೇ ಧರ್ಮದ ಮೂಲಭೂತವಾದರೂ ಮಾನವ ವಿರೋಧಿಯಾದುದು, ಇಂತಹ ವಿಷಯಗಳು ಹೆಚ್ಚಾದಾಗ ಮನುಷ್ಯ ಮನುಷ್ಯನ ನಡುವೆ ಭೇದ ಉಂಟಾಗುತ್ತದೆ ಎಂದು ಹಿರಿಯ ವಕೀಲ ರುದ್ರಾರಾಧ್ಯ ಅವರು ಹೇಳಿದರು.
ರಾಮನಗರದ ಐಜೂರು ಪೊಲೀಸ್ ಇನ್ಸ್ಪೆಕ್ಟರ್ ವಿನಾಕಾರಣ ವಕೀಲರ ಮೇಲೆ ಎಫ್ಐಆರ್ ದಾಖಲಿಸಿರುವುದನ್ನು ಕೂಡಲೇ ರದ್ದು ಮಾಡಬೇಕು ಎಂದು ತಾಲ್ಲೂಕು ವಕೀಲರ ಸಂಘದ ನೇತೃತ್ವದಲ್ಲಿ ನಡೆದ ಕಲಾಪ ಬಹಿಷ್ಕಾರ ಹಾಗೂ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನ್ಯಾಯಾವಾದಿಗಳಿಗೆ ಯಾವುದೇ ಧರ್ಮವಿಲ್ಲ, ಕಕ್ಷಿದಾರನಿಗೆ ಕಾನೂನು ರೀತಿಯ ನ್ಯಾಯ ಒದಗಿಸುವುದೇ ನಮ್ಮ ಧರ್ಮ ಎಂದು ಹೇಳಿದರು.
ನ್ಯಾಯಾಲಯಗಳು ನೀಡುವ ಆದೇಶವನ್ನು ಟೀಕಿಸುವ ಹಕ್ಕು ಇದೆ. ಆದರೆ, ಅದು ಕಾನೂನು ವ್ಯಾಪ್ತಿಯನ್ನು ಮೀರಿರಬಾರದು ಎಂದ ಅವರು, ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಂಚಿಕೊಂಡವರು ತಪ್ಪು ಮಾಡಿದ್ದರೆ ಅವರ ವಿರುದ್ಧ ಕೇಸು ದಾಖಲು ಮಾಡಬೇಕಿತ್ತು. ಆದರೆ, ಈವರೆಗೂ ಆತನ ಮೇಲೆ ಕೇಸು ದಾಖಲು ಮಾಡಿಲ್ಲ. ಬದಲಿಗೆ ಇಡೀ ವಕೀಲ ಸಮುದಾಯದ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ ಎಂದರು.
ವಕೀಲರ ಮೇಲೆ ದಾಖಲು ಮಾಡಿರುವ ಎಫ್ಐಆರ್ ಈ ಕೂಡಲೇ ವಜಾ ಮಾಡಬೇಕು, ವಕೀಲರ ನಡುವೆ ಸಾಮರಸ್ಯ ಕಾಪಾಡಬೇಕು, ಹಾಗೂ ಜಿಲ್ಲಾಡಳಿತ ಮಧ್ಯೆ ಪ್ರವೇಶ ಮಾಡಿ ಸೂಕ್ತ ತನಿಖೆ ನಡೆಸಿ ಪ್ರಕರಣವನ್ನು ಶಾಂತ ರೀತಿಯಲ್ಲಿ ಬಗೆ ಹರಿಸಬೇಕು ಎಂದು ಒತ್ತಾಯಿಸಿದರು.
ನಂತರ ವಕೀಲರ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ ಮಾತನಾಡಿ, ವಕೀಲರ ರಕ್ಷಣಾ ಕಾಯ್ದೆ ಜಾರಿಯಾದರೂ ವಕೀಲರ ಮೇಲಿನ ದೌರ್ಜನ್ಯಗಳು ನಿಲ್ಲುತ್ತಿಲ್ಲ, ಪೊಲೀಸರು 40 ಜನ ವಕೀಲರ ಮೇಲೆ ಎಫ್ಐಆರ್ ದಾಖಲು ಮಾಡಿದೆ, ಪೊಲೀಸರ ಈ ನಿಲುವನ್ನು ಖಂಡಿಸಿ ರಾಜ್ಯದಾದ್ಯಂತ 190 ತಾಲ್ಲೂಕುಗಳ ವಕೀಲರ ಸಂಘಗಳು ಇಂದು ಕೋರ್ಟ್ ಕಲಾಪಗಳನ್ನು ಬಹಿಷ್ಕಾರ ಮಾಡಿ ರಾಮನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿವೆ ಎಂದರು.
ಈ ಸಂದರ್ಭದಲ್ಲಿ ಸಂಘದ ತಾಲ್ಲೂಕು ಉಪಾಧ್ಯಕ್ಷ ಎಂ.ಆರ್.ಸುರೇಶ್, ನಿರ್ದೇಶಕರುಗಳಾದ ಆರ್.ಪ್ರಭಾಕರ್. ಎನ್.ಲೀಲಾವತಿ, ನಾಝಿಮ್, ಮಮ್ತಾಜ್ ಅನಿತ, ಶಿವಣ್ಣ, ಚಂದೇಶ್, ಮೋಹನ್ ಕುಮಾರ್, ಪ್ರವೀಣ್ ಕುಮಾರ್ ಗುಪ್ತಾ, ಉಮೇಶ, ಸೇರಿದಂತೆ ನೂರಾರು ವಕೀಲರು ಪಾಲ್ಗೊಂಡಿದ್ದರು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…