ದೊಡ್ಡಬಳ್ಳಾಪುರ : ನಮ್ಮ ಸಂವಿಧಾನದ ಆಶಯಗಳಾದ ಭ್ರಾತೃತ್ವ, ಸೋದರತೆ, ಸಮಾನತೆಯನ್ನು ಕಾಯ್ದುಕೊಳ್ಳುವುದು ಮತ್ತು ಕೋಮುವಾದವನ್ನು ಅಳಿಸುವುದು ನಮ್ಮ ಆದ್ಯ ಕರ್ತವ್ಯವಾಗಬೇಕು, ಇಂದು ಕೋಮುವಾದ ಹಾಗೂ ಮೂಲಭೂತವಾದಗಳು ಬೆಳೆದು ನಿಂತಿದೆ, ಅದು ಯಾವುದೇ ಧರ್ಮದ ಮೂಲಭೂತವಾದರೂ ಮಾನವ ವಿರೋಧಿಯಾದುದು, ಇಂತಹ ವಿಷಯಗಳು ಹೆಚ್ಚಾದಾಗ ಮನುಷ್ಯ ಮನುಷ್ಯನ ನಡುವೆ ಭೇದ ಉಂಟಾಗುತ್ತದೆ ಎಂದು ಹಿರಿಯ ವಕೀಲ ರುದ್ರಾರಾಧ್ಯ ಅವರು ಹೇಳಿದರು.
ರಾಮನಗರದ ಐಜೂರು ಪೊಲೀಸ್ ಇನ್ಸ್ಪೆಕ್ಟರ್ ವಿನಾಕಾರಣ ವಕೀಲರ ಮೇಲೆ ಎಫ್ಐಆರ್ ದಾಖಲಿಸಿರುವುದನ್ನು ಕೂಡಲೇ ರದ್ದು ಮಾಡಬೇಕು ಎಂದು ತಾಲ್ಲೂಕು ವಕೀಲರ ಸಂಘದ ನೇತೃತ್ವದಲ್ಲಿ ನಡೆದ ಕಲಾಪ ಬಹಿಷ್ಕಾರ ಹಾಗೂ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನ್ಯಾಯಾವಾದಿಗಳಿಗೆ ಯಾವುದೇ ಧರ್ಮವಿಲ್ಲ, ಕಕ್ಷಿದಾರನಿಗೆ ಕಾನೂನು ರೀತಿಯ ನ್ಯಾಯ ಒದಗಿಸುವುದೇ ನಮ್ಮ ಧರ್ಮ ಎಂದು ಹೇಳಿದರು.
ನ್ಯಾಯಾಲಯಗಳು ನೀಡುವ ಆದೇಶವನ್ನು ಟೀಕಿಸುವ ಹಕ್ಕು ಇದೆ. ಆದರೆ, ಅದು ಕಾನೂನು ವ್ಯಾಪ್ತಿಯನ್ನು ಮೀರಿರಬಾರದು ಎಂದ ಅವರು, ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಂಚಿಕೊಂಡವರು ತಪ್ಪು ಮಾಡಿದ್ದರೆ ಅವರ ವಿರುದ್ಧ ಕೇಸು ದಾಖಲು ಮಾಡಬೇಕಿತ್ತು. ಆದರೆ, ಈವರೆಗೂ ಆತನ ಮೇಲೆ ಕೇಸು ದಾಖಲು ಮಾಡಿಲ್ಲ. ಬದಲಿಗೆ ಇಡೀ ವಕೀಲ ಸಮುದಾಯದ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ ಎಂದರು.
ವಕೀಲರ ಮೇಲೆ ದಾಖಲು ಮಾಡಿರುವ ಎಫ್ಐಆರ್ ಈ ಕೂಡಲೇ ವಜಾ ಮಾಡಬೇಕು, ವಕೀಲರ ನಡುವೆ ಸಾಮರಸ್ಯ ಕಾಪಾಡಬೇಕು, ಹಾಗೂ ಜಿಲ್ಲಾಡಳಿತ ಮಧ್ಯೆ ಪ್ರವೇಶ ಮಾಡಿ ಸೂಕ್ತ ತನಿಖೆ ನಡೆಸಿ ಪ್ರಕರಣವನ್ನು ಶಾಂತ ರೀತಿಯಲ್ಲಿ ಬಗೆ ಹರಿಸಬೇಕು ಎಂದು ಒತ್ತಾಯಿಸಿದರು.
ನಂತರ ವಕೀಲರ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ ಮಾತನಾಡಿ, ವಕೀಲರ ರಕ್ಷಣಾ ಕಾಯ್ದೆ ಜಾರಿಯಾದರೂ ವಕೀಲರ ಮೇಲಿನ ದೌರ್ಜನ್ಯಗಳು ನಿಲ್ಲುತ್ತಿಲ್ಲ, ಪೊಲೀಸರು 40 ಜನ ವಕೀಲರ ಮೇಲೆ ಎಫ್ಐಆರ್ ದಾಖಲು ಮಾಡಿದೆ, ಪೊಲೀಸರ ಈ ನಿಲುವನ್ನು ಖಂಡಿಸಿ ರಾಜ್ಯದಾದ್ಯಂತ 190 ತಾಲ್ಲೂಕುಗಳ ವಕೀಲರ ಸಂಘಗಳು ಇಂದು ಕೋರ್ಟ್ ಕಲಾಪಗಳನ್ನು ಬಹಿಷ್ಕಾರ ಮಾಡಿ ರಾಮನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿವೆ ಎಂದರು.
ಈ ಸಂದರ್ಭದಲ್ಲಿ ಸಂಘದ ತಾಲ್ಲೂಕು ಉಪಾಧ್ಯಕ್ಷ ಎಂ.ಆರ್.ಸುರೇಶ್, ನಿರ್ದೇಶಕರುಗಳಾದ ಆರ್.ಪ್ರಭಾಕರ್. ಎನ್.ಲೀಲಾವತಿ, ನಾಝಿಮ್, ಮಮ್ತಾಜ್ ಅನಿತ, ಶಿವಣ್ಣ, ಚಂದೇಶ್, ಮೋಹನ್ ಕುಮಾರ್, ಪ್ರವೀಣ್ ಕುಮಾರ್ ಗುಪ್ತಾ, ಉಮೇಶ, ಸೇರಿದಂತೆ ನೂರಾರು ವಕೀಲರು ಪಾಲ್ಗೊಂಡಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…