ರಾಜ್ಯದಲ್ಲಿ ಛಲವಾದಿ ಸಮುದಾಯ ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅದನ್ನು ಸರಕಾರದ ಗಮನಕ್ಕೆ ತರುವ ಮೂಲಕ ಅದನ್ನು ಪರಿಹರಿಸಿ, ಸಮುದಾಯದ ಅಭಿವೃದ್ದಿಗೆ ಕೆಲಸ ಮಾಡೋಣ ಎಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ನರೇಶ್ ತಿಳಿಸಿದರು.
ದೊಡ್ಡಬಳ್ಳಾಪುರದ ಪ್ರವಾಸಿಮಂದಿರಲ್ಲಿ ಛಲವಾದಿ ಮಹಾಸಭಾ ವತಿಯಿಂದ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಬೇರೆ ಬೇರೆ ಸಮುದಾಯಗಳ ಅಭಿವೃದ್ದಿಗಾಗಿ ನಿಗಮ ಮಂಡಳಿಗಳಿವೆ. ಆದರೆ ನಮ್ಮ ಸಮುದಾಯಕ್ಕಿಲ್ಲ. ನಮ್ಮಲ್ಲಿ ಭಿನ್ನಾಭಿಪ್ರಾಯ ಇದ್ದರೂ ಕೂಡ ಎಲ್ಲರೂ ಒಟ್ಟಿಗೆ ಇರಬೇಕು. ಜಿಲ್ಲಾಧ್ಯಕ್ಷ ಸ್ಥಾನಕ್ಕೆ 4 ತಾಲೂಕುಗಳಿಂದ ಅರ್ಜಿ ಬಂದಿತ್ತು. ನನ್ನನ್ನ ಆಯ್ಕೆ ಮಾಡಿದ್ದಾಗಿ ಧನ್ಯವಾದಗಳು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸಮಾಡಲಾಗುತ್ತದೆ. ರಾಜ್ಯದಲ್ಲಿ ಸಾಕಷ್ಟು ಸಮಸ್ಯೆ ಗಳನ್ನು ಸಮುದಾಯ ಎದುರಿಸಲಾಗುತ್ತಿದೆ. ಸಮುದಾಯದಲ್ಲಿ ಒಗ್ಗಟ್ಟಿನ ಕೊರತೆ ಇದೆ. ನಮ್ಮಲ್ಲಿ ಮುಖ್ಯಮಂತ್ರಿ ಆಗುವ ಸಾಮರ್ಥ್ಯವಿದೆ. ಆದರೂ ರಾಜಕೀಯ, ಶೈಕ್ಷಣಿಕ, ಸಾಮಾಜಿಕವಾಗಿ ಹಿನ್ನಡೆಯಾಗಿದೆ. ಸಮುದಾಯದ ಅಭಿವೃದ್ದಿಗಾಗಿ ಎಲ್ಲರೂ ಶ್ರಮಿಸೋಣ ಎಂದರು.
ಸಮುದಾಯದ ಮುಖಂಡ ತಿಮ್ಮರಾಯಪ್ಪ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 8-10 ವರ್ಷದಿಂದ ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷರ ಹುದ್ದೆ ಖಾಲಿ ಇತ್ತು. ತಾಲೂಕು ಮಟ್ಟದ ಪದಾಧಿಕಾರಿಗಳೇ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜ್ಯ ಸಮಿತಿಯೂ ತಾಲೂಕು ಪದಾಧಿಕಾರಿಗಳಿಂದ ಅರ್ಜಿ ಪಡೆದು, ಜ.೨೪ ರಂದು ಸಮುದಾಯದ ಮುಖಂಡ ನೇತ್ರತ್ವದಲ್ಲಿ ನರೇಶ್ ಅವರನ್ನು ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದ್ದರು. ಅವರು 4 ತಾಲೂಕಿನ ಸಮುದಾಯ ಮುಖಂಡರ ಭೇಟಿ ಮಾಡಿ, ತಾಲೂಕಿನ ಪದಾಧಿಕಾರಿಗಳ ಆಯ್ಕೆ ಮಾಡಬೇಕು. ಅಧ್ಯಕ್ಷರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡಬೇಕು. ಛಲವಾದಿ ಮಹಾಸಭಾ ಜತೆಗೆ ಕರ್ನಾಟಕ ಛಲವಾದಿ ಮಹಾ ಸಭಾ ವಿಲೀನ ಮಾಡಲು ತೀರ್ಮಾನಿಸಲಾಗಿದೆ. ಎಲ್ಲರೂ ಒಗ್ಗಟ್ಟಾಗಿ ಹೋಗಬೇಕು ಎಂದರು.
ಈ ವೇಳೆಯಲ್ಲಿ ಮುಖಂಡರಾದ ಗೂಳ್ಯ ಹನುಮಣ್ಣ, ರಾಜಶೇಖರ್, ನಾರಾಯಣ, ಮರಿಯಪ್ಪಣ್ಣ, ತಿಮ್ಮರಾಯಪ್ಪ, ಮದ್ದೂರಣ್ಣ, ಸುರೇಶ್ ನಾರಾಯಣ, ಅಜಯ್, ರಾಮಣ್ಣ ಸೇರಿದಂತೆ ಅನೇಕರು ಹಾಜರಿದ್ದರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…
ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…
ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…