ನಮ್ಮ ಸಮುದಾಯದ ಅಭಿವೃದ್ದಿಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ-ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ನರೇಶ್

ರಾಜ್ಯದಲ್ಲಿ ಛಲವಾದಿ ಸಮುದಾಯ ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅದನ್ನು ಸರಕಾರದ ಗಮನಕ್ಕೆ ತರುವ ಮೂಲಕ ಅದನ್ನು ಪರಿಹರಿಸಿ, ಸಮುದಾಯದ ಅಭಿವೃದ್ದಿಗೆ ಕೆಲಸ ಮಾಡೋಣ ಎಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ನರೇಶ್ ತಿಳಿಸಿದರು.

ದೊಡ್ಡಬಳ್ಳಾಪುರದ ಪ್ರವಾಸಿಮಂದಿರಲ್ಲಿ ಛಲವಾದಿ ಮಹಾಸಭಾ ವತಿಯಿಂದ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಬೇರೆ ಬೇರೆ ಸಮುದಾಯಗಳ ಅಭಿವೃದ್ದಿಗಾಗಿ ನಿಗಮ ಮಂಡಳಿಗಳಿವೆ. ಆದರೆ ನಮ್ಮ ಸಮುದಾಯಕ್ಕಿಲ್ಲ. ನಮ್ಮಲ್ಲಿ ಭಿನ್ನಾಭಿಪ್ರಾಯ ಇದ್ದರೂ ಕೂಡ ಎಲ್ಲರೂ ಒಟ್ಟಿಗೆ ಇರಬೇಕು. ಜಿಲ್ಲಾಧ್ಯಕ್ಷ ಸ್ಥಾನಕ್ಕೆ 4 ತಾಲೂಕುಗಳಿಂದ ಅರ್ಜಿ ಬಂದಿತ್ತು. ನನ್ನನ್ನ ಆಯ್ಕೆ ಮಾಡಿದ್ದಾಗಿ ಧನ್ಯವಾದಗಳು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸಮಾಡಲಾಗುತ್ತದೆ. ರಾಜ್ಯದಲ್ಲಿ ಸಾಕಷ್ಟು ಸಮಸ್ಯೆ ಗಳನ್ನು ಸಮುದಾಯ ಎದುರಿಸಲಾಗುತ್ತಿದೆ. ಸಮುದಾಯದಲ್ಲಿ ಒಗ್ಗಟ್ಟಿನ ಕೊರತೆ ಇದೆ. ನಮ್ಮಲ್ಲಿ ಮುಖ್ಯಮಂತ್ರಿ ಆಗುವ ಸಾಮರ್ಥ್ಯವಿದೆ. ಆದರೂ ರಾಜಕೀಯ, ಶೈಕ್ಷಣಿಕ, ಸಾಮಾಜಿಕವಾಗಿ ಹಿನ್ನಡೆಯಾಗಿದೆ. ಸಮುದಾಯದ ಅಭಿವೃದ್ದಿಗಾಗಿ ಎಲ್ಲರೂ ಶ್ರಮಿಸೋಣ ಎಂದರು.

ಸಮುದಾಯದ ಮುಖಂಡ ತಿಮ್ಮರಾಯಪ್ಪ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 8-10 ವರ್ಷದಿಂದ ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷರ ಹುದ್ದೆ ಖಾಲಿ ಇತ್ತು. ತಾಲೂಕು ಮಟ್ಟದ ಪದಾಧಿಕಾರಿಗಳೇ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜ್ಯ ಸಮಿತಿಯೂ ತಾಲೂಕು ಪದಾಧಿಕಾರಿಗಳಿಂದ ಅರ್ಜಿ ಪಡೆದು, ಜ.೨೪ ರಂದು ಸಮುದಾಯದ ಮುಖಂಡ ನೇತ್ರತ್ವದಲ್ಲಿ ನರೇಶ್ ಅವರನ್ನು ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದ್ದರು. ಅವರು 4 ತಾಲೂಕಿನ ಸಮುದಾಯ ಮುಖಂಡರ ಭೇಟಿ ಮಾಡಿ, ತಾಲೂಕಿನ ಪದಾಧಿಕಾರಿಗಳ ಆಯ್ಕೆ ಮಾಡಬೇಕು. ಅಧ್ಯಕ್ಷರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡಬೇಕು. ಛಲವಾದಿ ಮಹಾಸಭಾ ಜತೆಗೆ ಕರ್ನಾಟಕ ಛಲವಾದಿ ಮಹಾ ಸಭಾ ವಿಲೀನ ಮಾಡಲು ತೀರ್ಮಾನಿಸಲಾಗಿದೆ. ಎಲ್ಲರೂ ಒಗ್ಗಟ್ಟಾಗಿ ಹೋಗಬೇಕು ಎಂದರು.

ಈ ವೇಳೆಯಲ್ಲಿ ಮುಖಂಡರಾದ ಗೂಳ್ಯ ಹನುಮಣ್ಣ, ರಾಜಶೇಖರ್, ನಾರಾಯಣ, ಮರಿಯಪ್ಪಣ್ಣ, ತಿಮ್ಮರಾಯಪ್ಪ, ಮದ್ದೂರಣ್ಣ, ಸುರೇಶ್ ನಾರಾಯಣ, ಅಜಯ್, ರಾಮಣ್ಣ ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

10 hours ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

20 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

23 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

2 days ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

2 days ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago