ನಮ್ಮ ಸಮುದಾಯದ ಅಭಿವೃದ್ದಿಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ-ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ನರೇಶ್

ರಾಜ್ಯದಲ್ಲಿ ಛಲವಾದಿ ಸಮುದಾಯ ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅದನ್ನು ಸರಕಾರದ ಗಮನಕ್ಕೆ ತರುವ ಮೂಲಕ ಅದನ್ನು ಪರಿಹರಿಸಿ, ಸಮುದಾಯದ ಅಭಿವೃದ್ದಿಗೆ ಕೆಲಸ ಮಾಡೋಣ ಎಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ನರೇಶ್ ತಿಳಿಸಿದರು.

ದೊಡ್ಡಬಳ್ಳಾಪುರದ ಪ್ರವಾಸಿಮಂದಿರಲ್ಲಿ ಛಲವಾದಿ ಮಹಾಸಭಾ ವತಿಯಿಂದ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಬೇರೆ ಬೇರೆ ಸಮುದಾಯಗಳ ಅಭಿವೃದ್ದಿಗಾಗಿ ನಿಗಮ ಮಂಡಳಿಗಳಿವೆ. ಆದರೆ ನಮ್ಮ ಸಮುದಾಯಕ್ಕಿಲ್ಲ. ನಮ್ಮಲ್ಲಿ ಭಿನ್ನಾಭಿಪ್ರಾಯ ಇದ್ದರೂ ಕೂಡ ಎಲ್ಲರೂ ಒಟ್ಟಿಗೆ ಇರಬೇಕು. ಜಿಲ್ಲಾಧ್ಯಕ್ಷ ಸ್ಥಾನಕ್ಕೆ 4 ತಾಲೂಕುಗಳಿಂದ ಅರ್ಜಿ ಬಂದಿತ್ತು. ನನ್ನನ್ನ ಆಯ್ಕೆ ಮಾಡಿದ್ದಾಗಿ ಧನ್ಯವಾದಗಳು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸಮಾಡಲಾಗುತ್ತದೆ. ರಾಜ್ಯದಲ್ಲಿ ಸಾಕಷ್ಟು ಸಮಸ್ಯೆ ಗಳನ್ನು ಸಮುದಾಯ ಎದುರಿಸಲಾಗುತ್ತಿದೆ. ಸಮುದಾಯದಲ್ಲಿ ಒಗ್ಗಟ್ಟಿನ ಕೊರತೆ ಇದೆ. ನಮ್ಮಲ್ಲಿ ಮುಖ್ಯಮಂತ್ರಿ ಆಗುವ ಸಾಮರ್ಥ್ಯವಿದೆ. ಆದರೂ ರಾಜಕೀಯ, ಶೈಕ್ಷಣಿಕ, ಸಾಮಾಜಿಕವಾಗಿ ಹಿನ್ನಡೆಯಾಗಿದೆ. ಸಮುದಾಯದ ಅಭಿವೃದ್ದಿಗಾಗಿ ಎಲ್ಲರೂ ಶ್ರಮಿಸೋಣ ಎಂದರು.

ಸಮುದಾಯದ ಮುಖಂಡ ತಿಮ್ಮರಾಯಪ್ಪ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 8-10 ವರ್ಷದಿಂದ ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷರ ಹುದ್ದೆ ಖಾಲಿ ಇತ್ತು. ತಾಲೂಕು ಮಟ್ಟದ ಪದಾಧಿಕಾರಿಗಳೇ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜ್ಯ ಸಮಿತಿಯೂ ತಾಲೂಕು ಪದಾಧಿಕಾರಿಗಳಿಂದ ಅರ್ಜಿ ಪಡೆದು, ಜ.೨೪ ರಂದು ಸಮುದಾಯದ ಮುಖಂಡ ನೇತ್ರತ್ವದಲ್ಲಿ ನರೇಶ್ ಅವರನ್ನು ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದ್ದರು. ಅವರು 4 ತಾಲೂಕಿನ ಸಮುದಾಯ ಮುಖಂಡರ ಭೇಟಿ ಮಾಡಿ, ತಾಲೂಕಿನ ಪದಾಧಿಕಾರಿಗಳ ಆಯ್ಕೆ ಮಾಡಬೇಕು. ಅಧ್ಯಕ್ಷರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡಬೇಕು. ಛಲವಾದಿ ಮಹಾಸಭಾ ಜತೆಗೆ ಕರ್ನಾಟಕ ಛಲವಾದಿ ಮಹಾ ಸಭಾ ವಿಲೀನ ಮಾಡಲು ತೀರ್ಮಾನಿಸಲಾಗಿದೆ. ಎಲ್ಲರೂ ಒಗ್ಗಟ್ಟಾಗಿ ಹೋಗಬೇಕು ಎಂದರು.

ಈ ವೇಳೆಯಲ್ಲಿ ಮುಖಂಡರಾದ ಗೂಳ್ಯ ಹನುಮಣ್ಣ, ರಾಜಶೇಖರ್, ನಾರಾಯಣ, ಮರಿಯಪ್ಪಣ್ಣ, ತಿಮ್ಮರಾಯಪ್ಪ, ಮದ್ದೂರಣ್ಣ, ಸುರೇಶ್ ನಾರಾಯಣ, ಅಜಯ್, ರಾಮಣ್ಣ ಸೇರಿದಂತೆ ಅನೇಕರು ಹಾಜರಿದ್ದರು.

Ramesh Babu

Journalist

Recent Posts

ಮಳೆಗಾಗಿ ಕಾದ ರೈತರಿಗೆ ಹೊಸ ಸಂಕಷ್ಟ: ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದ ಬಿತ್ತನೆ ಸ್ಥಗಿತ: ಬರದ ಭೀತಿ ಬಳಿಕ ಅತಿವೃಷ್ಟಿ ಕಾಟ: ಹೊಲಗಳಲ್ಲಿ ನೀರು ನಿಂತು ಕೃಷಿ ಚಟುವಟಿಕೆ ಅಸ್ತವ್ಯಸ್ತ

ತಿಂಗಳುಗಳ ಕಾಲ ಮಳೆಗಾಗಿ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ರೈತರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಇಷ್ಟು ದಿನ ಸಮರ್ಪಕ…

2 hours ago

ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ

ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…

12 hours ago

ಬೈಕ್‌–ಕ್ಯಾಂಟರ್ ನಡುವೆ ಭೀಕರ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ದೊಡ್ಡಬಳ್ಳಾಪುರ: ತ್ರಿಬಲ್‌ ರೈಡಿಂಗ್‌ನಲ್ಲಿ ತೆರಳುತ್ತಿದ್ದ ಬೈಕ್‌ ಹಾಗೂ ಹಾಲಿನ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…

14 hours ago

ಓದು, ಪ್ರವಾಸ ಮತ್ತು ಧ್ಯಾನಸ್ಥ ಮನಸ್ಥಿತಿ……..

ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…

1 day ago

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

2 days ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

2 days ago