ಕೋಲಾರ : ತಾಲೂಕಿನ ನರಸಾಪುರ ಗ್ರಾಮದ ಶ್ರೀ ಧರ್ಮರಾಯ ಸ್ವಾಮಿ ದ್ರೌಪದಮ್ಮ ಕರಗ ಮಹೋತ್ಸವದ ಅಭಿವೃದ್ಧಿ ಟ್ರಸ್ಟ್ ಹಾಗೂ ತಿಗಳ ಯುವಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ, ಶ್ರೀ ಧರ್ಮರಾಯ ಸ್ವಾಮಿ ಮತ್ತು ದ್ರೌಪದಮ್ಮ ಕರಗ ಮಹೋತ್ಸವದ ಅಂಗವಾಗಿ ಭಾನುವಾರ ರಾತ್ರಿ ನಡೆದ 93ನೇ ವರ್ಷದ ಹೂವಿನ ಕರಗಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಚಾಲನೆ ನೀಡಿ ಸಾವಿರಾರು ಜನರ ಸಮೂಹದಲ್ಲಿ ಅದ್ಧೂರಿಯಾಗಿ ನಡೆಯಿತು.
ಕರಗ ಹೊತ್ತು ಪೂಜಾರಿ ಕುಪ್ಪಂ ಬಾಲಾಜಿ ದೇವಾಲಯದಿಂದ ಹೊರಟು ನೃತ್ಯಕ್ಕಾಗಿ ಏರ್ಪಡಿಸಿದ್ದ ವೇದಿಕೆಯ ಮೇಲೆ ಕರಗದ ಪೂಜಾರಿ ಕುಪ್ಪಂ ಬಾಲಾಜಿ ರವರು ವಾದ್ಯ ಹಾಗೂ ತಮಟೆ ಮೇಳಗಳಿಂದ ವಿವಿಧ ರೀತಿಯ ನೃತ್ಯಗಳನ್ನು ಸಾವಿರಾರು ಜನರ ಕಣ್ಣಿಗೆ ಆಕರ್ಷಕವಾಗಿ ಕಂಗೊಳಿಸುವಂತೆ ಪ್ರದರ್ಶಿಸಿದರು. ಹೂವಿನ ಕರಗಕ್ಕೆ ನರಸಾಪುರ ಗ್ರಾಮದ ಪ್ರತಿಯೊಂದು ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು ಹಾಗೂ ಮನೆ ಮನೆಗಳಲ್ಲಿ ಮತ್ತು ಇಡೀ ಗ್ರಾಮದಲ್ಲಿ ಹಬ್ಬದ ವಾತಾವರಣ ತುಂಬಿತ್ತು.
ಕರಗ ಮಹೋತ್ಸವ ಹಿನ್ನೆಲೆಯಲ್ಲಿ ಶ್ರೀ ಧರ್ಮರಾಯ ಸ್ವಾಮಿ ದ್ರೌಪದಮ್ಮ ದೇವಾಲಯದಲ್ಲಿ ದೇವರುಗಳಿಗೆ ಹೂವಿನ ಅಲಂಕಾರ, ವಿಶೇಷ ಪೂಜೆ, ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯಿತು. ಮತ್ತೆ ಊರಿನಲ್ಲಿ ದೀಪಾಲಂಕಾರ ಹಾಗೂ ದೇವರುಗಳ ಪಲ್ಲಕ್ಕಿ ಉತ್ಸವ, ಮಹಿಳೆಯರಿಂದ ದೀಪಾರಾಧನೆ ಸೇರಿದಂತೆ ವಿವಿಧ ದೈವಿಕ ಕೈಂಕರ್ಯಗಳು ನಡೆದವು. ಅದೇ ರೀತಿ ಸೋಮವಾರ ಅಗ್ನಿಕುಂಡ ಪ್ರವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಅದ್ಧೂರಿ ಕರಗ ಮಹೋತ್ಸವ ಕಾರ್ಯಕ್ರಮದಲ್ಲಿ ಎಂಎಲ್ಸಿ ಎಂ.ಎಲ್. ಅನಿಲ್ ಕುಮಾರ್, ಎಲ್ ಜಿ ಪೌಂಡೇಶನ್ ಸಂಸ್ಥಾಪಕ ಹಾಗೂ ಅಧ್ಯಕ್ಷ ಲಕ್ಷ್ಮಣ್ ಗೌಡ ಮಾಲೂರು ಸಮಾಜ ಸೇವಕ ಹೂಡಿ ವಿಜಯ ಕುಮಾರ್, ನರಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಪದ್ಮಮ್ಮ, ಧರ್ಮರಾಯಸ್ವಾಮಿ ದ್ರೌಪದಮ್ಮ ಕರಗ ಮಹೋತ್ಸವದ ಅಭಿವೃದ್ಧಿ ಟ್ರಸ್ಟ್ ಹಾಗೂ ತಿಗಳ ಯುವಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ನರಸಾಪುರ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…