Categories: ಕೋಲಾರ

ನರಸಾಪುರ ಕೆರೆ ಒತ್ತುವರಿಗೆ ಅಧಿಕಾರಿಗಳೇ ಕುಮ್ಮಕ್ಕು ಆರೋಪ: ಕೆರೆ ಉಳಿವಿಗಾಗಿ ಧರಣಿ

ಕೋಲಾರ: ತಾಲೂಕಿನ ನರಸಾಪುರದ ಕೆರೆಯ ಜಾಗವನ್ನು ಬೆಂಗಳೂರಿನ ಭೂಗಳ್ಳರು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳುತ್ತಿದ್ದು, ಕೂಡಲೇ ತೆರವುಗೊಳಿಸಬೇಕೆಂದು ಆಗ್ರಹಿಸಿ ಈ ಭಾಗದ ಗ್ರಾಮಸ್ಥರು, ವಿವಿಧ ಸಂಘಟನೆಗಳ ಮುಖಂಡರು ಗುರುವಾರ ಪ್ರತಿಭಟನಾ ಧರಣಿ ನಡೆಸಿದರು.

ಕಳೆದ ಒಂದೂವರೆ ತಿಂಗಳಿಂದಲೂ ಅಧಿಕಾರಿಗಳ ಗಮನಕ್ಕೆ ತರಲಾಗುತ್ತಿದ್ದರೂ ಸಹ ಬೆಳ್ಳೂರು ಸರ್ವೇ ನಂ.257ರ ನರಸಾಪುರ ಕೆರೆಯ ಬಳಿ ಅಕ್ರಮವಾಗಿ ಮಾಡಿಕೊಳ್ಳುತ್ತಿರುವ ಒತ್ತುವರಿ ಕಾರ್ಯ ನಿಂತಿಲ್ಲ. ಜೋಡಿ ಕೃಷ್ಣಾಪುರ ಗ್ರಾಮದ ಸರ್ವೇ ನಂ.೪೦ರ ಮಾಲೀಕರು ದೌರ್ಜನ್ಯವಾಗಿ ಕೆರೆಯಲ್ಲಿ ಮಣ್ಣು ತೆಗೆದು ಕೆರೆಯನ್ನು ಮುಚ್ಚಿ ಒತ್ತುವರಿ ಮಾಡಿಕೊಳ್ಳುತ್ತಿದ್ದು, ಕೂಡಲೇ ತೆರವುಗೊಳಿಸಿ ಕೆರೆಯನ್ನು ಉಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಯುವ ಮುಖಂಡ ಖಾಜಿಕಲ್ಲಹಳ್ಳಿ ಹರೀಶ್‌ಗೌಡ, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಜೋಡಿಕೃಷ್ಣಾಪುರ ಗ್ರಾಮದ ಸರ್ವೇ ನಂ.೪೦ರ ಜಾಗವನ್ನು ಬೆಂಗಳೂರಿನ ಕೆಲ ಪ್ರಭಾವಿ ವ್ಯಕ್ತಿಗಳು ಖರೀದಿಸಿದ್ದು, ಇದೀಗ ಕೆರೆಯ ಜಾಗವನ್ನು ಒತ್ತುವರಿ ಮಾಡಿಕೊಳ್ಳುವುದಕ್ಕೆ ಮುಂದಾಗಿ ಜಾಗ ಸರಿಪಡಿಸಿಕೊಳ್ಳುತ್ತಿದ್ದಾರೆ ಈ ಹಿಂದೆ ನಾವು ಅಧಿಕಾರಿಗಳ ಗಮನಕ್ಕೆ ತಂದಿದ್ದೆವು, ಚುನಾವಣೆ ಒತ್ತಡದಲ್ಲಿ ಅಧಿಕಾರಿಗಳಿದ್ದರಿಂದ ಸರಿಯಾಗಿ ಇತ್ತ ಆದ್ಯತೆ ನೀಡಿರಲಿಲ್ಲ. ಆದರೆ, ಒತ್ತುವರಿದಾರರು ಯಾರಿಗೂ ಅಂಜದೆ ರಾತ್ರೋರಾತ್ರಿ ಲೋಡ್‌ಗಟ್ಟಲೇ ಮಣ್ಣು ಹಾಕಿ ಸಮತಟ್ಟು ಮಾಡಿಕೊಂಡು, ಕೆರೆಯ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.

ಬೆಂಗಳೂರಿನ ಹಾಗೂ ಸ್ಥಳೀಯ ಕೆಲವು ಪುಡಾರಿಗಳಿಂದಾಗಿ ಕೆರೆ ಜಾಗ ಭೂಗಳ್ಳರ ಪಾಲಾಗುತ್ತಿದ್ದು ರಾಜ್ಯದ ಪ್ರಭಾವಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಗ್ರಾಮದ ಪಕ್ಕದಲ್ಲೇ ಸರಕಾರಿ ಕಂದಾಯ ಜಾಗವನ್ನು ಒತ್ತುವರಿ ನಡೆಯುತ್ತಾ ಇದ್ದರೂ ಜಿಲ್ಲಾಡಳಿತ, ತಾಲೂಕು ಆಡಳಿತ, ಜನಪ್ರತಿನಿಧಿಗಳು ಯಾವುದೇ ಸೂಕ್ತ ಕ್ರಮಕೈಗೊಂಡಿಲ್ಲ ಕೂಡಲೇ ಸರಕಾರಿ ಜಾಗ ಉಳಿಸುವ ಮೂಲಕ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ಕಡಗಟ್ಟೂರು ವಿಜಯ್‌ಕುಮಾರ್ ಮಾತನಾಡಿ, ಕೆರೆಯ ಜಾಗವನ್ನು ಕೆರೆಗೆ ಉಳಿಸಿಕೊಡುವುದಾಗಿ ಭರವಸೆ ನೀಡಿದ್ದ ಅಧಿಕಾರಿಗಳು ಮಾತಿಗಷ್ಟೇ ಸೀಮಿತರಾಗಿದ್ದಾರೆ. ನಾವು ಕಚೇರಿಗಳಿಗೆ ಅಲೆದು ಅಲೆದು ಸಾಕಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ನದಿನಾಲೆಗಳಿಲ್ಲದೆ ಮಳೆಯ ನೀರಿನ ಮೇಲೆ ಅವಲಂಭಿತವಾಗಿರುವ ಜಿಲ್ಲೆಯಲ್ಲಿ ಕೆರೆಗಳು ಉತ್ತಮವಾಗಿದ್ದರೆ ನೀರಿನ ಶೇಖರಣೆಗೂ ಸಹಕಾರಿಯಾಗುತ್ತದೆ. ಆದರೆ, ಈ ರೀತಿ ಒತ್ತುವರಿ ಕಾರ್ಯಗಳಾಗುತ್ತಿದ್ದರೆ ಕೆರೆಯ ಸ್ವರೂಪವೇ ಹಾಳಾಗುತ್ತದೆ. ನಾವು ತರಕಾರಿ ಬೆಳೆದು ಬೇರೆಯ ಜಿಲ್ಲೆಗಳಿಗೆ ನೀಡುತ್ತಿದ್ದೆವು ಆದರೆ ಇಂದು ನೀರಿನ ಸಮಸ್ಯೆಯಿಂದಾಗಿ ಬೇರೆ ಜಿಲ್ಲೆಯವರ ಬಳಿ ಖರೀದಿಸಬೇಕಾದ ಪರಿಸ್ಥಿತಿ ಬರಲು ಕೆರೆ ಒತ್ತುವರಿಗಳೇ ಕಾರಣವಾಗಿದೆ ಎಂದು ಕಿಡಿಕಾರಿದರು.

ಅಧಿಕಾರಿಗಳ ಕುಮ್ಮಕ್ಕಿನಿಂದಲೇ ಬೆಂಗಳೂರಿನವರು ಬಂದು ಇಲ್ಲಿ ಒತ್ತುವರಿ ಮಾಡುತ್ತಿದ್ದು, ಇದನ್ನು ಮಟ್ಟ ಹಾಕಲೇಬೇಕಾಗಿದೆ. ಅದಕ್ಕಾಗಿ ಪ್ರತಿಯೊಬ್ಬರೂ ಹೋರಾಟಕ್ಕೆ ಸಹಕಾರ ನೀಡಬೇಕು ಎಂದು ಕೋರಿದ ಅವರು, ನಮ್ಮ ಹೋರಾಟವನ್ನು ಅಧಿಕಾರಿಗಳು ನಿರ್ಲಕ್ಷಿಸಿದ್ದೇ ಆದಲ್ಲಿ ವಿಭಿನ್ನ ರೀತಿಯಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಬೆಳಮಾರನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ್, ಬೆಳ್ಳೂರು ಗ್ರಾಮದ ಮುರಳಿ, ಮಂಜುನಾಥ್, ಸತೀಶ್, ಶಾಂತಕುಮಾರ್, ದಿನ್ನೇಹೊಸಹಳ್ಳಿ ಅಂಜಿನಪ್ಪ, ಶಶಿಕುಮಾರ್, ಮನು, ಸಂದೀಪ್ ರೈತ ಸಂಘದ ಕಲ್ವಮಂಜಲಿ ರಾಮು ಶಿವಣ್ಣ, ಜಿ.ನಾರಾಯಣಸ್ವಾಮಿ, ವಿಶ್ವನಾಥ್, ಮಂಜುನಾಥ್, ನಾಗರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

23 minutes ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

7 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

7 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

13 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

1 day ago