Categories: ಕೋಲಾರ

ನರಸಾಪುರ ಕೆರೆ ಒತ್ತುವರಿಗೆ ಅಧಿಕಾರಿಗಳೇ ಕುಮ್ಮಕ್ಕು ಆರೋಪ: ಕೆರೆ ಉಳಿವಿಗಾಗಿ ಧರಣಿ

ಕೋಲಾರ: ತಾಲೂಕಿನ ನರಸಾಪುರದ ಕೆರೆಯ ಜಾಗವನ್ನು ಬೆಂಗಳೂರಿನ ಭೂಗಳ್ಳರು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳುತ್ತಿದ್ದು, ಕೂಡಲೇ ತೆರವುಗೊಳಿಸಬೇಕೆಂದು ಆಗ್ರಹಿಸಿ ಈ ಭಾಗದ ಗ್ರಾಮಸ್ಥರು, ವಿವಿಧ ಸಂಘಟನೆಗಳ ಮುಖಂಡರು ಗುರುವಾರ ಪ್ರತಿಭಟನಾ ಧರಣಿ ನಡೆಸಿದರು.

ಕಳೆದ ಒಂದೂವರೆ ತಿಂಗಳಿಂದಲೂ ಅಧಿಕಾರಿಗಳ ಗಮನಕ್ಕೆ ತರಲಾಗುತ್ತಿದ್ದರೂ ಸಹ ಬೆಳ್ಳೂರು ಸರ್ವೇ ನಂ.257ರ ನರಸಾಪುರ ಕೆರೆಯ ಬಳಿ ಅಕ್ರಮವಾಗಿ ಮಾಡಿಕೊಳ್ಳುತ್ತಿರುವ ಒತ್ತುವರಿ ಕಾರ್ಯ ನಿಂತಿಲ್ಲ. ಜೋಡಿ ಕೃಷ್ಣಾಪುರ ಗ್ರಾಮದ ಸರ್ವೇ ನಂ.೪೦ರ ಮಾಲೀಕರು ದೌರ್ಜನ್ಯವಾಗಿ ಕೆರೆಯಲ್ಲಿ ಮಣ್ಣು ತೆಗೆದು ಕೆರೆಯನ್ನು ಮುಚ್ಚಿ ಒತ್ತುವರಿ ಮಾಡಿಕೊಳ್ಳುತ್ತಿದ್ದು, ಕೂಡಲೇ ತೆರವುಗೊಳಿಸಿ ಕೆರೆಯನ್ನು ಉಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಯುವ ಮುಖಂಡ ಖಾಜಿಕಲ್ಲಹಳ್ಳಿ ಹರೀಶ್‌ಗೌಡ, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಜೋಡಿಕೃಷ್ಣಾಪುರ ಗ್ರಾಮದ ಸರ್ವೇ ನಂ.೪೦ರ ಜಾಗವನ್ನು ಬೆಂಗಳೂರಿನ ಕೆಲ ಪ್ರಭಾವಿ ವ್ಯಕ್ತಿಗಳು ಖರೀದಿಸಿದ್ದು, ಇದೀಗ ಕೆರೆಯ ಜಾಗವನ್ನು ಒತ್ತುವರಿ ಮಾಡಿಕೊಳ್ಳುವುದಕ್ಕೆ ಮುಂದಾಗಿ ಜಾಗ ಸರಿಪಡಿಸಿಕೊಳ್ಳುತ್ತಿದ್ದಾರೆ ಈ ಹಿಂದೆ ನಾವು ಅಧಿಕಾರಿಗಳ ಗಮನಕ್ಕೆ ತಂದಿದ್ದೆವು, ಚುನಾವಣೆ ಒತ್ತಡದಲ್ಲಿ ಅಧಿಕಾರಿಗಳಿದ್ದರಿಂದ ಸರಿಯಾಗಿ ಇತ್ತ ಆದ್ಯತೆ ನೀಡಿರಲಿಲ್ಲ. ಆದರೆ, ಒತ್ತುವರಿದಾರರು ಯಾರಿಗೂ ಅಂಜದೆ ರಾತ್ರೋರಾತ್ರಿ ಲೋಡ್‌ಗಟ್ಟಲೇ ಮಣ್ಣು ಹಾಕಿ ಸಮತಟ್ಟು ಮಾಡಿಕೊಂಡು, ಕೆರೆಯ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.

ಬೆಂಗಳೂರಿನ ಹಾಗೂ ಸ್ಥಳೀಯ ಕೆಲವು ಪುಡಾರಿಗಳಿಂದಾಗಿ ಕೆರೆ ಜಾಗ ಭೂಗಳ್ಳರ ಪಾಲಾಗುತ್ತಿದ್ದು ರಾಜ್ಯದ ಪ್ರಭಾವಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಗ್ರಾಮದ ಪಕ್ಕದಲ್ಲೇ ಸರಕಾರಿ ಕಂದಾಯ ಜಾಗವನ್ನು ಒತ್ತುವರಿ ನಡೆಯುತ್ತಾ ಇದ್ದರೂ ಜಿಲ್ಲಾಡಳಿತ, ತಾಲೂಕು ಆಡಳಿತ, ಜನಪ್ರತಿನಿಧಿಗಳು ಯಾವುದೇ ಸೂಕ್ತ ಕ್ರಮಕೈಗೊಂಡಿಲ್ಲ ಕೂಡಲೇ ಸರಕಾರಿ ಜಾಗ ಉಳಿಸುವ ಮೂಲಕ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ಕಡಗಟ್ಟೂರು ವಿಜಯ್‌ಕುಮಾರ್ ಮಾತನಾಡಿ, ಕೆರೆಯ ಜಾಗವನ್ನು ಕೆರೆಗೆ ಉಳಿಸಿಕೊಡುವುದಾಗಿ ಭರವಸೆ ನೀಡಿದ್ದ ಅಧಿಕಾರಿಗಳು ಮಾತಿಗಷ್ಟೇ ಸೀಮಿತರಾಗಿದ್ದಾರೆ. ನಾವು ಕಚೇರಿಗಳಿಗೆ ಅಲೆದು ಅಲೆದು ಸಾಕಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ನದಿನಾಲೆಗಳಿಲ್ಲದೆ ಮಳೆಯ ನೀರಿನ ಮೇಲೆ ಅವಲಂಭಿತವಾಗಿರುವ ಜಿಲ್ಲೆಯಲ್ಲಿ ಕೆರೆಗಳು ಉತ್ತಮವಾಗಿದ್ದರೆ ನೀರಿನ ಶೇಖರಣೆಗೂ ಸಹಕಾರಿಯಾಗುತ್ತದೆ. ಆದರೆ, ಈ ರೀತಿ ಒತ್ತುವರಿ ಕಾರ್ಯಗಳಾಗುತ್ತಿದ್ದರೆ ಕೆರೆಯ ಸ್ವರೂಪವೇ ಹಾಳಾಗುತ್ತದೆ. ನಾವು ತರಕಾರಿ ಬೆಳೆದು ಬೇರೆಯ ಜಿಲ್ಲೆಗಳಿಗೆ ನೀಡುತ್ತಿದ್ದೆವು ಆದರೆ ಇಂದು ನೀರಿನ ಸಮಸ್ಯೆಯಿಂದಾಗಿ ಬೇರೆ ಜಿಲ್ಲೆಯವರ ಬಳಿ ಖರೀದಿಸಬೇಕಾದ ಪರಿಸ್ಥಿತಿ ಬರಲು ಕೆರೆ ಒತ್ತುವರಿಗಳೇ ಕಾರಣವಾಗಿದೆ ಎಂದು ಕಿಡಿಕಾರಿದರು.

ಅಧಿಕಾರಿಗಳ ಕುಮ್ಮಕ್ಕಿನಿಂದಲೇ ಬೆಂಗಳೂರಿನವರು ಬಂದು ಇಲ್ಲಿ ಒತ್ತುವರಿ ಮಾಡುತ್ತಿದ್ದು, ಇದನ್ನು ಮಟ್ಟ ಹಾಕಲೇಬೇಕಾಗಿದೆ. ಅದಕ್ಕಾಗಿ ಪ್ರತಿಯೊಬ್ಬರೂ ಹೋರಾಟಕ್ಕೆ ಸಹಕಾರ ನೀಡಬೇಕು ಎಂದು ಕೋರಿದ ಅವರು, ನಮ್ಮ ಹೋರಾಟವನ್ನು ಅಧಿಕಾರಿಗಳು ನಿರ್ಲಕ್ಷಿಸಿದ್ದೇ ಆದಲ್ಲಿ ವಿಭಿನ್ನ ರೀತಿಯಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಬೆಳಮಾರನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ್, ಬೆಳ್ಳೂರು ಗ್ರಾಮದ ಮುರಳಿ, ಮಂಜುನಾಥ್, ಸತೀಶ್, ಶಾಂತಕುಮಾರ್, ದಿನ್ನೇಹೊಸಹಳ್ಳಿ ಅಂಜಿನಪ್ಪ, ಶಶಿಕುಮಾರ್, ಮನು, ಸಂದೀಪ್ ರೈತ ಸಂಘದ ಕಲ್ವಮಂಜಲಿ ರಾಮು ಶಿವಣ್ಣ, ಜಿ.ನಾರಾಯಣಸ್ವಾಮಿ, ವಿಶ್ವನಾಥ್, ಮಂಜುನಾಥ್, ನಾಗರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 hour ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

2 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago