Categories: ಕೋಲಾರ

ನರಸಾಪುರ ಕೆರೆ ಒತ್ತುವರಿಗೆ ಅಧಿಕಾರಿಗಳೇ ಕುಮ್ಮಕ್ಕು ಆರೋಪ: ಕೆರೆ ಉಳಿವಿಗಾಗಿ ಧರಣಿ

ಕೋಲಾರ: ತಾಲೂಕಿನ ನರಸಾಪುರದ ಕೆರೆಯ ಜಾಗವನ್ನು ಬೆಂಗಳೂರಿನ ಭೂಗಳ್ಳರು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳುತ್ತಿದ್ದು, ಕೂಡಲೇ ತೆರವುಗೊಳಿಸಬೇಕೆಂದು ಆಗ್ರಹಿಸಿ ಈ ಭಾಗದ ಗ್ರಾಮಸ್ಥರು, ವಿವಿಧ ಸಂಘಟನೆಗಳ ಮುಖಂಡರು ಗುರುವಾರ ಪ್ರತಿಭಟನಾ ಧರಣಿ ನಡೆಸಿದರು.

ಕಳೆದ ಒಂದೂವರೆ ತಿಂಗಳಿಂದಲೂ ಅಧಿಕಾರಿಗಳ ಗಮನಕ್ಕೆ ತರಲಾಗುತ್ತಿದ್ದರೂ ಸಹ ಬೆಳ್ಳೂರು ಸರ್ವೇ ನಂ.257ರ ನರಸಾಪುರ ಕೆರೆಯ ಬಳಿ ಅಕ್ರಮವಾಗಿ ಮಾಡಿಕೊಳ್ಳುತ್ತಿರುವ ಒತ್ತುವರಿ ಕಾರ್ಯ ನಿಂತಿಲ್ಲ. ಜೋಡಿ ಕೃಷ್ಣಾಪುರ ಗ್ರಾಮದ ಸರ್ವೇ ನಂ.೪೦ರ ಮಾಲೀಕರು ದೌರ್ಜನ್ಯವಾಗಿ ಕೆರೆಯಲ್ಲಿ ಮಣ್ಣು ತೆಗೆದು ಕೆರೆಯನ್ನು ಮುಚ್ಚಿ ಒತ್ತುವರಿ ಮಾಡಿಕೊಳ್ಳುತ್ತಿದ್ದು, ಕೂಡಲೇ ತೆರವುಗೊಳಿಸಿ ಕೆರೆಯನ್ನು ಉಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಯುವ ಮುಖಂಡ ಖಾಜಿಕಲ್ಲಹಳ್ಳಿ ಹರೀಶ್‌ಗೌಡ, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಜೋಡಿಕೃಷ್ಣಾಪುರ ಗ್ರಾಮದ ಸರ್ವೇ ನಂ.೪೦ರ ಜಾಗವನ್ನು ಬೆಂಗಳೂರಿನ ಕೆಲ ಪ್ರಭಾವಿ ವ್ಯಕ್ತಿಗಳು ಖರೀದಿಸಿದ್ದು, ಇದೀಗ ಕೆರೆಯ ಜಾಗವನ್ನು ಒತ್ತುವರಿ ಮಾಡಿಕೊಳ್ಳುವುದಕ್ಕೆ ಮುಂದಾಗಿ ಜಾಗ ಸರಿಪಡಿಸಿಕೊಳ್ಳುತ್ತಿದ್ದಾರೆ ಈ ಹಿಂದೆ ನಾವು ಅಧಿಕಾರಿಗಳ ಗಮನಕ್ಕೆ ತಂದಿದ್ದೆವು, ಚುನಾವಣೆ ಒತ್ತಡದಲ್ಲಿ ಅಧಿಕಾರಿಗಳಿದ್ದರಿಂದ ಸರಿಯಾಗಿ ಇತ್ತ ಆದ್ಯತೆ ನೀಡಿರಲಿಲ್ಲ. ಆದರೆ, ಒತ್ತುವರಿದಾರರು ಯಾರಿಗೂ ಅಂಜದೆ ರಾತ್ರೋರಾತ್ರಿ ಲೋಡ್‌ಗಟ್ಟಲೇ ಮಣ್ಣು ಹಾಕಿ ಸಮತಟ್ಟು ಮಾಡಿಕೊಂಡು, ಕೆರೆಯ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.

ಬೆಂಗಳೂರಿನ ಹಾಗೂ ಸ್ಥಳೀಯ ಕೆಲವು ಪುಡಾರಿಗಳಿಂದಾಗಿ ಕೆರೆ ಜಾಗ ಭೂಗಳ್ಳರ ಪಾಲಾಗುತ್ತಿದ್ದು ರಾಜ್ಯದ ಪ್ರಭಾವಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಗ್ರಾಮದ ಪಕ್ಕದಲ್ಲೇ ಸರಕಾರಿ ಕಂದಾಯ ಜಾಗವನ್ನು ಒತ್ತುವರಿ ನಡೆಯುತ್ತಾ ಇದ್ದರೂ ಜಿಲ್ಲಾಡಳಿತ, ತಾಲೂಕು ಆಡಳಿತ, ಜನಪ್ರತಿನಿಧಿಗಳು ಯಾವುದೇ ಸೂಕ್ತ ಕ್ರಮಕೈಗೊಂಡಿಲ್ಲ ಕೂಡಲೇ ಸರಕಾರಿ ಜಾಗ ಉಳಿಸುವ ಮೂಲಕ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ಕಡಗಟ್ಟೂರು ವಿಜಯ್‌ಕುಮಾರ್ ಮಾತನಾಡಿ, ಕೆರೆಯ ಜಾಗವನ್ನು ಕೆರೆಗೆ ಉಳಿಸಿಕೊಡುವುದಾಗಿ ಭರವಸೆ ನೀಡಿದ್ದ ಅಧಿಕಾರಿಗಳು ಮಾತಿಗಷ್ಟೇ ಸೀಮಿತರಾಗಿದ್ದಾರೆ. ನಾವು ಕಚೇರಿಗಳಿಗೆ ಅಲೆದು ಅಲೆದು ಸಾಕಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ನದಿನಾಲೆಗಳಿಲ್ಲದೆ ಮಳೆಯ ನೀರಿನ ಮೇಲೆ ಅವಲಂಭಿತವಾಗಿರುವ ಜಿಲ್ಲೆಯಲ್ಲಿ ಕೆರೆಗಳು ಉತ್ತಮವಾಗಿದ್ದರೆ ನೀರಿನ ಶೇಖರಣೆಗೂ ಸಹಕಾರಿಯಾಗುತ್ತದೆ. ಆದರೆ, ಈ ರೀತಿ ಒತ್ತುವರಿ ಕಾರ್ಯಗಳಾಗುತ್ತಿದ್ದರೆ ಕೆರೆಯ ಸ್ವರೂಪವೇ ಹಾಳಾಗುತ್ತದೆ. ನಾವು ತರಕಾರಿ ಬೆಳೆದು ಬೇರೆಯ ಜಿಲ್ಲೆಗಳಿಗೆ ನೀಡುತ್ತಿದ್ದೆವು ಆದರೆ ಇಂದು ನೀರಿನ ಸಮಸ್ಯೆಯಿಂದಾಗಿ ಬೇರೆ ಜಿಲ್ಲೆಯವರ ಬಳಿ ಖರೀದಿಸಬೇಕಾದ ಪರಿಸ್ಥಿತಿ ಬರಲು ಕೆರೆ ಒತ್ತುವರಿಗಳೇ ಕಾರಣವಾಗಿದೆ ಎಂದು ಕಿಡಿಕಾರಿದರು.

ಅಧಿಕಾರಿಗಳ ಕುಮ್ಮಕ್ಕಿನಿಂದಲೇ ಬೆಂಗಳೂರಿನವರು ಬಂದು ಇಲ್ಲಿ ಒತ್ತುವರಿ ಮಾಡುತ್ತಿದ್ದು, ಇದನ್ನು ಮಟ್ಟ ಹಾಕಲೇಬೇಕಾಗಿದೆ. ಅದಕ್ಕಾಗಿ ಪ್ರತಿಯೊಬ್ಬರೂ ಹೋರಾಟಕ್ಕೆ ಸಹಕಾರ ನೀಡಬೇಕು ಎಂದು ಕೋರಿದ ಅವರು, ನಮ್ಮ ಹೋರಾಟವನ್ನು ಅಧಿಕಾರಿಗಳು ನಿರ್ಲಕ್ಷಿಸಿದ್ದೇ ಆದಲ್ಲಿ ವಿಭಿನ್ನ ರೀತಿಯಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಬೆಳಮಾರನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ್, ಬೆಳ್ಳೂರು ಗ್ರಾಮದ ಮುರಳಿ, ಮಂಜುನಾಥ್, ಸತೀಶ್, ಶಾಂತಕುಮಾರ್, ದಿನ್ನೇಹೊಸಹಳ್ಳಿ ಅಂಜಿನಪ್ಪ, ಶಶಿಕುಮಾರ್, ಮನು, ಸಂದೀಪ್ ರೈತ ಸಂಘದ ಕಲ್ವಮಂಜಲಿ ರಾಮು ಶಿವಣ್ಣ, ಜಿ.ನಾರಾಯಣಸ್ವಾಮಿ, ವಿಶ್ವನಾಥ್, ಮಂಜುನಾಥ್, ನಾಗರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

6 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

14 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

15 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago