ಕೋಲಾರ: ತಾಲ್ಲೂಕಿನ ನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ವರ್ಚುವಲ್ ವೇದಿಕೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿದರು.
ನವದೆಹಲಿಯ ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಸೇರಿದಂತೆ ಸಚಿವರು ಭಾಷಣ ಮಾಡಿದರು.
ನರಸಾಪುರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರ ಭಾಷಣವನ್ನು ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು
ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ವೇಮಗಲ್ ಮತ್ತು ನರಸಾಪುರ ಭಾಗದಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಿದ್ದು, ಇಲ್ಲಿನ ಕಾರ್ಮಿಕರಿಗೆ ಆರೋಗ್ಯ ಭಾಗ್ಯವನ್ನು ಕಲ್ಪಿಸುವ ಉದ್ದೇಶದಿಂದ ಇಎಸ್ಐ ಆಸ್ಪತ್ರೆಯನ್ನು ಪ್ರಾರಂಭಿಸಲಾಗಿದೆ ಇಲ್ಲಿ ಚಿಕಿತ್ಸೆ ಸೌಲಭ್ಯ ಇಲ್ಲದಿದ್ದರೆ ಬೇರೆ ಕಡೆ ಚಿಕಿತ್ಸೆಗೆ ಶಿಫಾರಸ್ಸು ಮಾಡುತ್ತದೆ. ಈ ಆಸ್ಪತ್ರೆಯನ್ನು ಮಗುವಿನಂತೆ ಕಾಪಾಡಿಕೊಳ್ಳಬೇಕು. ನೀರು, ವಿದ್ಯುತ್ ಸೌಲಭ್ಯವನ್ನು ಪಂಚಾಯಿತಿಯಿಂದ ಒದಗಿಸಬೇಕು. ಗುತ್ತಿಗೆದಾರರು ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ಕೈಗಾರಿಕಾ ಪ್ರದೇಶ ಇರುವುದರಿಂದ ಹೆಚ್ಚು ಕಾರ್ಮಿಕರು ಇದ್ದು, ಇಂಥ ಆಸ್ಪತ್ರೆ ಅಗತ್ಯವಿತ್ತು. ಸದ್ಯ 100 ಬೆಡ್ ಇರುವ ಆಸ್ಪತ್ರೆ ಇದಾಗಿದೆ. ಮುಂದೆ 200 ಬೆಡ್ ಆಸ್ಪತ್ರೆ ಆಗಬೇಕು. ಬೇಗನೇ ಲೋಕಾರ್ಪಣೆ ಆಗಲು ಎಲ್ಲರೂ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ ಈ ಆಸ್ಪತ್ರೆ ಪ್ರಾರಂಭದ ಹಿಂದೆ ಮಾಜಿ ಸಂಸದ ಎಸ್. ಮುನಿಸ್ವಾಮಿ ಅವರ ಪರಿಶ್ರಮವೂ ಇದೆ. ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ಕೂಡ ಒತ್ತು ನೀಡಿತ್ತು. ಮುಂದಿನ ದಿನಗಳಲ್ಲಿ ಕಾರ್ಮಿಕರಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಸಿಗಲಿದೆ ಅಧಿಕಾರಿಗಳು, ಜನಪ್ರತಿನಿಧಿಗಳು, ವೈದ್ಯರು ತಿಳುವಳಿಕೆ ಮೂಡಿಸಬೇಕು. ಇಲ್ಲದಿದ್ದರೆ ಚಿಕಿತ್ಸೆಗೆ ಕಾರ್ಮಿಕರು ಬರಲ್ಲ. ನರ್ಸಿಂಗ್ ಹೋಂಗೆ ಹೋಗುತ್ತಾರೆ. ಹಾಗೆಯೇ ಗುಣಮಟ್ಟ ಕಾಯ್ದುಕೊಳ್ಳಬೇಕು. 32 ತಿಂಗಳಲ್ಲಿ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಬೆಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಚಂಜಿಮಲೆ ರಮೇಶ್, ಮೈಲಾಂಡಹಳ್ಳಿ ಮುರಳಿ, ಕೇಂದ್ರ ಸರ್ಕಾರದ ಕಾರ್ಮಿಕ ರಾಜ್ಯ ವಿಮಾ ನಿಗಮದ (ಇಎಸ್ಐಸಿ) ಅಧಿಕಾರಿ ರಾಜೇಶ್ ಕುಮಾರ್, ಅಕ್ಷತಾ, ಜಿಲ್ಲಾ ಅಧೀಕ್ಷಕ ಕೆಜಿಎಫ್ನ ರವಿ ಚಂದ್ರಶೇಖರ್ ಇದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…