‘ನರೇಂದ್ರ ಮೋದಿಯವರು ಹೇಳಿದ ಸುಳ್ಳುಗಳು…..’: ಸುಳ್ಳಗಳನ್ನು ಪಟ್ಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು. ಸುಮ್ಮನೆ ಲೆಕ್ಕ ಹಾಕತೊಡಗಿದೆ. ಸದ್ಯಕ್ಕೆ ಇಷ್ಟು ನೆನಪಾಯಿತು. ಹೆಚ್ಚುವರಿಯಾಗಿ ನಿಮಗೆ ನೆನಪಾದರೆ ಇದಕ್ಕೆ ಸೇರಿಸಿಕೊಳ್ಳಿ. ಈ ಸುಳ್ಳುಗಳ ಸರಮಾಲೆ ಇಲ್ಲಿಗೆ ನಿಲ್ಲಲಾರದು, ಮುಂದುವರಿಯಲಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವ ಪ್ರಧಾನಮಂತ್ರಿಯೂ ಇಷ್ಟೊಂದು ನಿರ್ಲಜ್ಜವಾಗಿ ಈ ರೀತಿ ಹಸಿಹಸಿ ಸುಳ್ಳುಗಳನ್ನು ಹೇಳಿರಲಾರರು. ಯಾರೂ ಕೂಡಾ  ಪ್ರಧಾನಮಂತ್ರಿ ಕುರ್ಚಿಯ ಘನತೆಯನ್ನು  ಈ ರೀತಿ ಮಣ್ಣು ಪಾಲು ಮಾಡಿರಲಾರರು. ಮತದಾನದ ದಿನ ದೇಶದ ಜನರಿಗೆ ಸತ್ಯ-ಸುಳ್ಳುಗಳನ್ನು ಅರಿತುಕೊಳ್ಳುವ ಸದ್ಬುದ್ದಿಯನ್ನು ದೇವರು ಕರುಣಿಸಲಿ ಎಂದು ಬೇಡಿಕೊಳ್ಳುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನರೇಂದ್ರ ಮೋದಿಯವರು ಹೇಳಿದ ಸುಳ್ಳುಗಳು…..

1. ಎಸ್‌ಸಿ/ಎಸ್‌ಟಿ, ಒಬಿಸಿ ಮೀಸಲಾತಿ ಕಿತ್ತುಕೊಂಡು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ.

2. ಸಂಪತ್ತಿನ ಸಮಾನ ಹಂಚಿಕೆಯ ನೆಪದಲ್ಲಿ ಕಾಂಗ್ರೆಸ್ ಪಕ್ಷ ಹಿಂದೂಗಳ ಆಸ್ತಿಯನ್ನು ಕಬಳಿಸಿ ಮುಸ್ಲಿಮರಿಗೆ ನೀಡಲಿದೆ.

3. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಸೇರಿದಂತೆ ಜನರ ಚಿನ್ನ, ಆಸ್ತಿಯನ್ನು ಕಿತ್ತುಕೊಂಡು ಹೆಚ್ಚು ಮಕ್ಕಳು ಇರುವವರಿಗೆ, ನುಸುಳುಕೋರರಿಗೆ (ಮುಸ್ಲಿಮರಿಗೆ) ನೀಡಲಿದೆ.

4. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಬಗ್ಗೆ ಸುಪ್ರಿಂ ಕೋರ್ಟ್‌ ನೀಡಿದ ತೀರ್ಪನ್ನು ಬದಲಾಯಿಸುತ್ತದೆ.

5. ದೇಶದ ಸಂಪತ್ತಿನ ಮೊದಲ ಹಕ್ಕು ಮುಸ್ಲಿಮರಿಗೆ ಎಂದು ಪ್ರಧಾನಿ ಮನಮೋಹನ್‌ ಸಿಂಗ್‌ ಹೇಳಿದ್ದರು.

6. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಜನರ ಪಿತ್ರಾರ್ಜಿತ ಆಸ್ತಿಗೆ ಶೇ.55ರಷ್ಟು ತೆರಿಗೆ ಹೇರಲಿದೆ.

7. ಛತ್ರಪತಿ ಶಿವಾಜಿ ಮಹಾರಾಜ, ಕಿತ್ತೂರು ರಾಣಿ ಚೆನ್ನಮ್ಮ, ಮೈಸೂರಿನ ದೊರೆಗಳನ್ನು ಕಾಂಗ್ರೆಸ್‌‌ನವರು ನಿಂದಿಸುತ್ತಾರೆ.

8. ಲೋಕಸಭಾ ಚುನಾವಣೆಯನ್ನು ವಿದೇಶಿ ಶಕ್ತಿಗಳು ನಿಯಂತ್ರಿಸುತ್ತಿದೆ.

9. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಉಗ್ರರಿಗೆ ಪ್ರಧಾನಮಂತ್ರಿಯವರ ನಿವಾಸದಲ್ಲಿ ಸ್ವಾಗತ ಕೋರಲಾಗಿತ್ತು.

10. 2008ರಲ್ಲಿ ಮುಂಬೈ ಪ್ರವೇಶಿಸಿದ ಹತ್ತು ಉಗ್ರರ ಜೊತೆಗೆ ಕಾಂಗ್ರೆಸ್‌ ಸಂಪರ್ಕ ಹೊಂದಿತ್ತು.

11. ರಾಜ, ಮಹಾರಾಜರನ್ನು ಟೀಕಿಸುವ ಕಾಂಗ್ರೆಸ್‌ ನವಾಬರನ್ನು ಟೀಕಿಸುವುದಿಲ್ಲ.

12. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮೆಲ್ಲರ ಮನೆ ಮನೆಗೂ ದಾಳಿ ನಡೆಸಿ ನೀವು ಕೂಡಿಟ್ಟ ಸಂಪತ್ತನ್ನು ವಶಪಡಿಸಿ, ಅದನ್ನು ತನ್ನ ವೋಟ್ ಬ್ಯಾಂಕ್‌ಗೆ (ಮುಸ್ಲಿಮರಿಗೆ) ಮರು ಹಂಚಿಕೆ ಮಾಡುತ್ತದೆ.

13. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರಕ್ಕೆ ಬಾಬ್ರಿ ಬೀಗ ಹಾಕುತ್ತದೆ.

14. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತದ ಕ್ರಿಕೆಟ್ ತಂಡದಲ್ಲಿ ಬರೀ ಮುಸ್ಲಿಮರೇ ಇರುತ್ತಾರೆ.

15. ಕಳೆದ ಐದು ವರ್ಷಗಳಿಂದ ಅದಾನಿ-ಅಂಬಾನಿಗಳನ್ನು ಪ್ರಶ್ನೆ ಮಾಡುತ್ತಿದ್ದ ರಾಹುಲ್ ಗಾಂಧಿ ಏಕಾಏಕಿ ಪ್ರಶ್ನೆ ಮಾಡುವುದನ್ನು ನಿಲ್ಲಿಸಿದ್ದೇಕೆ? ಹಣ ತುಂಬಿದ ಟೆಂಪೋಗಳು ಕಾಂಗ್ರೆಸ್ ಮನೆಗೆ ತಲುಪಿದೆ.

ಸುಳ್ಳುಗಳು ಮುಂದುವರಿಯಲಿದೆ… ಎಂದಿದ್ದಾರೆ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

14 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

19 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago