ನರೇಗಾ ಕೂಲಿ ಮೊತ್ತ 370 ರೂ.ಗಳಿಗೆ ಹೆಚ್ಚಳ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನೋಂದಾಯಿತ ಕೂಲಿಕಾರರಿಗೆ ದಿನಗೂಲಿಯನ್ನು 370 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ. ಅನುರಾಧ ಕೆ ಎನ್ ಅವರು ತಿಳಸಿದರು.

ನರೇಗಾ ಯೋಜನೆಯಲ್ಲಿ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ತಾಲ್ಲೂಕಿನಲ್ಲಿ ಒಟ್ಟು 1,19,669 ಉದ್ಯೋಗ ಚೀಟಿಯನ್ನು ಹೊಂದಿರುವ ನೋಂದಾಯಿತ ಕುಟುಂಬಗಳಿದ್ದು, ಅದರಲ್ಲಿ 2,61,128 ಕೂಲಿಕಾರರಿದ್ದಾರೆ. ಏಪ್ರಿಲ್ 01 ರಿಂದ 370 ರೂಗಳನ್ನು ಹೆಚ್ಚಿಸಲಾಗಿದ್ದು ಯೋಜನೆಯ ಸದುಪಯೋಗವನ್ನು ಗ್ರಾಮೀಣ ಭಾಗದ ಜನರು ಪಡೆದುಕೊಳ್ಳಲು ತಿಳಿಸಿದ್ದಾರೆ.

ಉದ್ಯೋಗ ಚೀಟಿಯನ್ನು ಹೊಂದಿರುವ ಕುಟುಂಬಗಳು 100 ದಿನಗಳು ಕೆಲಸ ಮಾಡುವುದು, ಆರ್ಥಿಕವಾಗಿ ಸಬಲರಾಗಲು ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ನಡೆಯುತ್ತಿರುವ ಸಮುದಾಯ ಕಾಮಗಾರಿಗಳು ಮತ್ತು ವೈಯಕ್ತಿಕ ಕಾಮಗಾರಿಗಳಾದ ಹಸು, ಕುರಿ, ಹಂದಿ, ಕೋಳಿ ಶೆಡ್ ಮತ್ತು ವಸತಿ ಯೋಜನೆಗಳು ನರೇಗಾ ಯೋಜನೆಯಡಿ ಬರುತ್ತವೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ ಹಾಗೂ ಉಚಿತ ನರೇಗಾ ಸಹಾಯವಾಣಿ ಸಂಖ್ಯೆ 8277506000 ಕ್ಕೆ ಸಂಪರ್ಕಿಸಿ ಮಾಹಿತಿ ಮತ್ತು ದೂರುಗಳನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

14 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

17 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

22 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

24 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago