ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನೋಂದಾಯಿತ ಕೂಲಿಕಾರರಿಗೆ ದಿನಗೂಲಿಯನ್ನು 370 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ. ಅನುರಾಧ ಕೆ ಎನ್ ಅವರು ತಿಳಸಿದರು.
ನರೇಗಾ ಯೋಜನೆಯಲ್ಲಿ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ತಾಲ್ಲೂಕಿನಲ್ಲಿ ಒಟ್ಟು 1,19,669 ಉದ್ಯೋಗ ಚೀಟಿಯನ್ನು ಹೊಂದಿರುವ ನೋಂದಾಯಿತ ಕುಟುಂಬಗಳಿದ್ದು, ಅದರಲ್ಲಿ 2,61,128 ಕೂಲಿಕಾರರಿದ್ದಾರೆ. ಏಪ್ರಿಲ್ 01 ರಿಂದ 370 ರೂಗಳನ್ನು ಹೆಚ್ಚಿಸಲಾಗಿದ್ದು ಯೋಜನೆಯ ಸದುಪಯೋಗವನ್ನು ಗ್ರಾಮೀಣ ಭಾಗದ ಜನರು ಪಡೆದುಕೊಳ್ಳಲು ತಿಳಿಸಿದ್ದಾರೆ.
ಉದ್ಯೋಗ ಚೀಟಿಯನ್ನು ಹೊಂದಿರುವ ಕುಟುಂಬಗಳು 100 ದಿನಗಳು ಕೆಲಸ ಮಾಡುವುದು, ಆರ್ಥಿಕವಾಗಿ ಸಬಲರಾಗಲು ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ನಡೆಯುತ್ತಿರುವ ಸಮುದಾಯ ಕಾಮಗಾರಿಗಳು ಮತ್ತು ವೈಯಕ್ತಿಕ ಕಾಮಗಾರಿಗಳಾದ ಹಸು, ಕುರಿ, ಹಂದಿ, ಕೋಳಿ ಶೆಡ್ ಮತ್ತು ವಸತಿ ಯೋಜನೆಗಳು ನರೇಗಾ ಯೋಜನೆಯಡಿ ಬರುತ್ತವೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ ಹಾಗೂ ಉಚಿತ ನರೇಗಾ ಸಹಾಯವಾಣಿ ಸಂಖ್ಯೆ 8277506000 ಕ್ಕೆ ಸಂಪರ್ಕಿಸಿ ಮಾಹಿತಿ ಮತ್ತು ದೂರುಗಳನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…