Categories: ಕೋಲಾರ

ನರೇಗಾ 365 ದಿನಗಳ ಕೂಲಿಗೆ ಒತ್ತಾಯಿಸಿ ಫೆ.6 ರಂದು ರೈತ ಸಂಘದಿಂದ ಬಂಗಾರಪೇಟೆ ರೈಲ್ವೆ ಇಲಾಖೆ ಮುತ್ತಿಗೆ

ಕೋಲಾರ: ಉಚಿತ ಗ್ಯಾರಂಟಿಗಳನ್ನು ರದ್ದು ಮಾಡಿ ದುಡಿಯುವ ಕೈಗೆ ಉದ್ಯೋಗ ನೀಡಿ ಸ್ಥಗಿತಮಾಡಿರುವ ನಬಾರ್ಡ್ ಸಾಲ ಯೋಜನೆಯ ಆದೇಶವನ್ನು ವಾಪಸ್ ಪಡೆದು ನರೇಗಾದಲ್ಲಿ 365 ದಿನ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಫೆ.6 ರ ಗುರುವಾರ ತಲೆ ಮೇಲೆ ಕಲ್ಲು ಹೊತ್ತುಕೊಂಡು ಬಂಗಾರಪೇಟೆ ರೈಲ್ವೆ ಇಲಾಖೆ ಮುತ್ತಿಗೆ ಹಾಕಲು ನಗರದ ಇಂದಿರಾ ಕ್ಯಾಂಟಿನ್ ಉದ್ಯಾನವನದಲ್ಲಿ ಕರೆದಿದ ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.

ದುಡಿಯುವ ಕೈಗೆ ಕೆಲಸ ನೀಡದೆ ಅಧಿಕಾರದ ಆಸೆ ಮೈಗೂಡಿಸಿಕೊಂಡು ಮತಬಾಂಧವರಿಗೆ ಚುನಾವಣೆಯಲ್ಲಿ ಉಚಿತ ಗ್ಯಾರಂಟಿಗಳನ್ನು ನೀಡಲು ರಾಜಕೀಯ ಪಕ್ಷಗಳು ತಾ ಮುಂದು ನಾ ಮುಂದು ಎಂದು ಪೈಪೋಟಿ ನಡೆಸಿ ಬಿಕ್ಷೆ ರೀತಿಯಲ್ಲಿ ಎರಡು ಸಾವಿರ ರೂಪಾಯಿ ಭಾಗ್ಯ ನೀಡಿ ಸೊಂಬೇರಿಗಳ್ಳನ್ನಾಗಿ ಮಾಡಿ ಕೃಷಿ ಕೇತ್ರಕ್ಕೆ ಕೂಲಿಕಾರ್ಮಿಕರ ಅಭಾವ ಸೃಷ್ಠಿ ಮಾಡಿ ಬಹುರಾಷ್ಟ್ರೀಯ ಕಂಪನಿಗಳ ಕಪಿ ಮುಷ್ಠಿಗೆ ದೇಶವನ್ನು ಅಡವಿಟ್ಟು ಬಡವರ ಆರೋಗ್ಯ ಶಿಕ್ಷಣವನ್ನು ದುಬಾರಿ ಮಾಡಿ ಇಡೀ ವ್ಯವಸ್ಥೆಯನ್ನು ನಾಶ ಮಾಡುತ್ತಿರುವ ಸರ್ಕಾರಗಳ ಜನ ವಿರೋದಿ ನೀತಿ ವಿರುದ್ದ ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು.

ಬೆಂಬಲ ಬೆಲೆಗಾಗಿ ಸರ್ಕಾರದ ವಿರುದ್ದ ಹೋರಾಟ ನಡೆಸುತ್ತಿರುವ ರೈತರ ಸಮಸ್ಯೆಯನ್ನು ಸರ್ಕಾರ ಗಂಬೀರವಾಗಿ ಪರಿಗಣಿಸುತ್ತಿಲ್ಲ ಕಷ್ಟಪಟ್ಟು ಬೆಳೆಯುವ ರೈತರ ಉತ್ಪನ್ನಗಳಿಗೆ ಖರ್ಚು ವೆಚ್ಚದ ಮೇಲೆ ಬೆಲೆ ನಿಗದಿ ಮಾಡುವ ತಾಕತ್ತು ಸರ್ಕಾರಗಳಿಗೆ ಇಲ್ಲದಂತಾಗಿದೆ ಕಾರ್ಖಾನೆ ಮಾಲೀಕನು ತಯಾರು ಮಾಡುವ ವಸ್ತುವಿಗೆ ಅವನೇ ಬೆಲೆ ನಿಗದಿ ಮಾಡುವಂತೆ ರೈತರ ಬೆವರಿನ ಕೃಷಿ ಬೆಳೆಗಳಿಗೆ ರೈತರೇ ಬೆಲೆ ನಿಗದಿ ಮಾಡುವ ಕಾನೂನು ಜಾರಿ ಮಾಡಲು ರೈತರು ಬೀದಿಗೆ ಇಳಿದು ಹೋರಾಟ ಮಾಡುವ ದೈರ್ಯ ತೋರಬೇಕೆಂದು ಸಲಹೆ ನೀಡಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ ನರೇಗಾ ಎಂಬುದು ಬಡವರ ಪಾಲಿಗೆ ಸ್ವಾಭಿಮಾನ ನೀಡುವ ಉದ್ಯೋಗವಾಗಿದೆ ಕೇಂದ್ರ ಸರ್ಕಾರ ಉಚಿತ ಭಾಗ್ಯಗಳನ್ನು ರದ್ದು ಮಾಡಿ ದುಡಿಯುವ ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರಿಗೆ 365 ದಿನ ಕೆಲಸ ನೀಡಿ ಪ್ರತಿ ವ್ಯಕ್ತಿಗೆ ಪ್ರತಿ ದಿನ 1500 ಕೂಲಿ ನೀಡುವ ಮುಖಾಂತರ ಬಡವರ ಬದುಕನ್ನು ರಕ್ಷಣೆ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಲಕ್ಷಾಂತರ ರೈತ ಕುಟುಂಬಗಳು ಕೃಷಿಯನ್ನೇ ನಂಬಿ ಸ್ವಾಭಿಮಾನದ ಬದುಕನ್ನು ಕಷ್ಟ ನಷ್ಟ ಲಾಭದಲ್ಲಿ ಕಟ್ಟಿಕೊಳ್ಳುತ್ತಿದ್ದಾರೆ. ಅದರೆ ಗುಬ್ಬಚ್ಚಿ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ಕೇಂದ್ರ ಸರ್ಕಾರ ಹಣ ಕಾಸು ಸಚಿವರಾದ ನಿರ್ಮಲಾ ಸಿತಾರಾಮನ್ ರವರು ನಬಾರ್ಡ್ ನಿಂದ ಸಹಕಾರ ಬ್ಯಾಂಕ್‌ಗಳಿಗೆ ನೀಡುತ್ತಿದ್ದ ಅನುದಾನವನ್ನು ಸ್ಥಗಿತಗೊಳಿಸಿ ರೈತರ ಬದುಕನ್ನು ಖಾಸಗಿ ಪೈನಾನ್ಸ್ ಹಾವಳಿಗೆ ಬಲಿ ಕೊಡಲು ಮುಂದಾಗಿರುವುದನ್ನು ಖಂಡಿಸಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಫೆ.6ರ ಗುರುವಾರ ತಲೆ ಮೇಲೆ ಕಲ್ಲು ಹೊತ್ತುಕೊಂಡು ರೈಲ್ವೆ ಇಲಾಖೆ ಮುತ್ತಿಗೆ ಹಾಕಿ ನ್ಯಾಯ ಪಡೆದುಕೊಳ್ಳಲು ಸಭೆಯಲ್ಲಿ ತಿರ್ಮಾನಿಸಲಾಗಿದೆ ಎಂದರು.

ಸಭೆಯಲ್ಲಿ ತಾಲ್ಲೂಕಾದ್ಯಕ್ಷ ಕದರಿನತ್ತ ಅಪ್ಪೋಜಿರಾವ್, ಲಕ್ಷಣ್, ಈಕಂಬಳ್ಳಿ ಮಂಜುನಾಥ್, ಶಿವಾರೆಡ್ಡಿ, ಕಿರಣ್, ಚಾಂದ್‌ಪಾಷ, ಬಾಬಾಜಾನ್, ವಿಶ್ವ, ಮುನಿಕೃಷ್ಣ, ರತ್ನಮ್ಮ, ಶೈಲಜ, ರಾಧ ಮುಂತಾದವರಿದ್ದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

8 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

8 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

9 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

11 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

18 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

19 hours ago