Categories: ಕೋಲಾರ

ನರೇಗಾ 365 ದಿನಗಳ ಕೂಲಿಗೆ ಒತ್ತಾಯಿಸಿ ಫೆ.6 ರಂದು ರೈತ ಸಂಘದಿಂದ ಬಂಗಾರಪೇಟೆ ರೈಲ್ವೆ ಇಲಾಖೆ ಮುತ್ತಿಗೆ

ಕೋಲಾರ: ಉಚಿತ ಗ್ಯಾರಂಟಿಗಳನ್ನು ರದ್ದು ಮಾಡಿ ದುಡಿಯುವ ಕೈಗೆ ಉದ್ಯೋಗ ನೀಡಿ ಸ್ಥಗಿತಮಾಡಿರುವ ನಬಾರ್ಡ್ ಸಾಲ ಯೋಜನೆಯ ಆದೇಶವನ್ನು ವಾಪಸ್ ಪಡೆದು ನರೇಗಾದಲ್ಲಿ 365 ದಿನ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಫೆ.6 ರ ಗುರುವಾರ ತಲೆ ಮೇಲೆ ಕಲ್ಲು ಹೊತ್ತುಕೊಂಡು ಬಂಗಾರಪೇಟೆ ರೈಲ್ವೆ ಇಲಾಖೆ ಮುತ್ತಿಗೆ ಹಾಕಲು ನಗರದ ಇಂದಿರಾ ಕ್ಯಾಂಟಿನ್ ಉದ್ಯಾನವನದಲ್ಲಿ ಕರೆದಿದ ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.

ದುಡಿಯುವ ಕೈಗೆ ಕೆಲಸ ನೀಡದೆ ಅಧಿಕಾರದ ಆಸೆ ಮೈಗೂಡಿಸಿಕೊಂಡು ಮತಬಾಂಧವರಿಗೆ ಚುನಾವಣೆಯಲ್ಲಿ ಉಚಿತ ಗ್ಯಾರಂಟಿಗಳನ್ನು ನೀಡಲು ರಾಜಕೀಯ ಪಕ್ಷಗಳು ತಾ ಮುಂದು ನಾ ಮುಂದು ಎಂದು ಪೈಪೋಟಿ ನಡೆಸಿ ಬಿಕ್ಷೆ ರೀತಿಯಲ್ಲಿ ಎರಡು ಸಾವಿರ ರೂಪಾಯಿ ಭಾಗ್ಯ ನೀಡಿ ಸೊಂಬೇರಿಗಳ್ಳನ್ನಾಗಿ ಮಾಡಿ ಕೃಷಿ ಕೇತ್ರಕ್ಕೆ ಕೂಲಿಕಾರ್ಮಿಕರ ಅಭಾವ ಸೃಷ್ಠಿ ಮಾಡಿ ಬಹುರಾಷ್ಟ್ರೀಯ ಕಂಪನಿಗಳ ಕಪಿ ಮುಷ್ಠಿಗೆ ದೇಶವನ್ನು ಅಡವಿಟ್ಟು ಬಡವರ ಆರೋಗ್ಯ ಶಿಕ್ಷಣವನ್ನು ದುಬಾರಿ ಮಾಡಿ ಇಡೀ ವ್ಯವಸ್ಥೆಯನ್ನು ನಾಶ ಮಾಡುತ್ತಿರುವ ಸರ್ಕಾರಗಳ ಜನ ವಿರೋದಿ ನೀತಿ ವಿರುದ್ದ ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು.

ಬೆಂಬಲ ಬೆಲೆಗಾಗಿ ಸರ್ಕಾರದ ವಿರುದ್ದ ಹೋರಾಟ ನಡೆಸುತ್ತಿರುವ ರೈತರ ಸಮಸ್ಯೆಯನ್ನು ಸರ್ಕಾರ ಗಂಬೀರವಾಗಿ ಪರಿಗಣಿಸುತ್ತಿಲ್ಲ ಕಷ್ಟಪಟ್ಟು ಬೆಳೆಯುವ ರೈತರ ಉತ್ಪನ್ನಗಳಿಗೆ ಖರ್ಚು ವೆಚ್ಚದ ಮೇಲೆ ಬೆಲೆ ನಿಗದಿ ಮಾಡುವ ತಾಕತ್ತು ಸರ್ಕಾರಗಳಿಗೆ ಇಲ್ಲದಂತಾಗಿದೆ ಕಾರ್ಖಾನೆ ಮಾಲೀಕನು ತಯಾರು ಮಾಡುವ ವಸ್ತುವಿಗೆ ಅವನೇ ಬೆಲೆ ನಿಗದಿ ಮಾಡುವಂತೆ ರೈತರ ಬೆವರಿನ ಕೃಷಿ ಬೆಳೆಗಳಿಗೆ ರೈತರೇ ಬೆಲೆ ನಿಗದಿ ಮಾಡುವ ಕಾನೂನು ಜಾರಿ ಮಾಡಲು ರೈತರು ಬೀದಿಗೆ ಇಳಿದು ಹೋರಾಟ ಮಾಡುವ ದೈರ್ಯ ತೋರಬೇಕೆಂದು ಸಲಹೆ ನೀಡಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ ನರೇಗಾ ಎಂಬುದು ಬಡವರ ಪಾಲಿಗೆ ಸ್ವಾಭಿಮಾನ ನೀಡುವ ಉದ್ಯೋಗವಾಗಿದೆ ಕೇಂದ್ರ ಸರ್ಕಾರ ಉಚಿತ ಭಾಗ್ಯಗಳನ್ನು ರದ್ದು ಮಾಡಿ ದುಡಿಯುವ ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರಿಗೆ 365 ದಿನ ಕೆಲಸ ನೀಡಿ ಪ್ರತಿ ವ್ಯಕ್ತಿಗೆ ಪ್ರತಿ ದಿನ 1500 ಕೂಲಿ ನೀಡುವ ಮುಖಾಂತರ ಬಡವರ ಬದುಕನ್ನು ರಕ್ಷಣೆ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಲಕ್ಷಾಂತರ ರೈತ ಕುಟುಂಬಗಳು ಕೃಷಿಯನ್ನೇ ನಂಬಿ ಸ್ವಾಭಿಮಾನದ ಬದುಕನ್ನು ಕಷ್ಟ ನಷ್ಟ ಲಾಭದಲ್ಲಿ ಕಟ್ಟಿಕೊಳ್ಳುತ್ತಿದ್ದಾರೆ. ಅದರೆ ಗುಬ್ಬಚ್ಚಿ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ಕೇಂದ್ರ ಸರ್ಕಾರ ಹಣ ಕಾಸು ಸಚಿವರಾದ ನಿರ್ಮಲಾ ಸಿತಾರಾಮನ್ ರವರು ನಬಾರ್ಡ್ ನಿಂದ ಸಹಕಾರ ಬ್ಯಾಂಕ್‌ಗಳಿಗೆ ನೀಡುತ್ತಿದ್ದ ಅನುದಾನವನ್ನು ಸ್ಥಗಿತಗೊಳಿಸಿ ರೈತರ ಬದುಕನ್ನು ಖಾಸಗಿ ಪೈನಾನ್ಸ್ ಹಾವಳಿಗೆ ಬಲಿ ಕೊಡಲು ಮುಂದಾಗಿರುವುದನ್ನು ಖಂಡಿಸಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಫೆ.6ರ ಗುರುವಾರ ತಲೆ ಮೇಲೆ ಕಲ್ಲು ಹೊತ್ತುಕೊಂಡು ರೈಲ್ವೆ ಇಲಾಖೆ ಮುತ್ತಿಗೆ ಹಾಕಿ ನ್ಯಾಯ ಪಡೆದುಕೊಳ್ಳಲು ಸಭೆಯಲ್ಲಿ ತಿರ್ಮಾನಿಸಲಾಗಿದೆ ಎಂದರು.

ಸಭೆಯಲ್ಲಿ ತಾಲ್ಲೂಕಾದ್ಯಕ್ಷ ಕದರಿನತ್ತ ಅಪ್ಪೋಜಿರಾವ್, ಲಕ್ಷಣ್, ಈಕಂಬಳ್ಳಿ ಮಂಜುನಾಥ್, ಶಿವಾರೆಡ್ಡಿ, ಕಿರಣ್, ಚಾಂದ್‌ಪಾಷ, ಬಾಬಾಜಾನ್, ವಿಶ್ವ, ಮುನಿಕೃಷ್ಣ, ರತ್ನಮ್ಮ, ಶೈಲಜ, ರಾಧ ಮುಂತಾದವರಿದ್ದರು.

Ramesh Babu

Journalist

Recent Posts

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

10 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

19 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

19 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

1 day ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

1 day ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

1 day ago