Categories: ಕೋಲಾರ

ನರೇಗಾ 365 ದಿನಗಳ ಕೂಲಿಗೆ ಒತ್ತಾಯಿಸಿ ಫೆ.6 ರಂದು ರೈತ ಸಂಘದಿಂದ ಬಂಗಾರಪೇಟೆ ರೈಲ್ವೆ ಇಲಾಖೆ ಮುತ್ತಿಗೆ

ಕೋಲಾರ: ಉಚಿತ ಗ್ಯಾರಂಟಿಗಳನ್ನು ರದ್ದು ಮಾಡಿ ದುಡಿಯುವ ಕೈಗೆ ಉದ್ಯೋಗ ನೀಡಿ ಸ್ಥಗಿತಮಾಡಿರುವ ನಬಾರ್ಡ್ ಸಾಲ ಯೋಜನೆಯ ಆದೇಶವನ್ನು ವಾಪಸ್ ಪಡೆದು ನರೇಗಾದಲ್ಲಿ 365 ದಿನ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಫೆ.6 ರ ಗುರುವಾರ ತಲೆ ಮೇಲೆ ಕಲ್ಲು ಹೊತ್ತುಕೊಂಡು ಬಂಗಾರಪೇಟೆ ರೈಲ್ವೆ ಇಲಾಖೆ ಮುತ್ತಿಗೆ ಹಾಕಲು ನಗರದ ಇಂದಿರಾ ಕ್ಯಾಂಟಿನ್ ಉದ್ಯಾನವನದಲ್ಲಿ ಕರೆದಿದ ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.

ದುಡಿಯುವ ಕೈಗೆ ಕೆಲಸ ನೀಡದೆ ಅಧಿಕಾರದ ಆಸೆ ಮೈಗೂಡಿಸಿಕೊಂಡು ಮತಬಾಂಧವರಿಗೆ ಚುನಾವಣೆಯಲ್ಲಿ ಉಚಿತ ಗ್ಯಾರಂಟಿಗಳನ್ನು ನೀಡಲು ರಾಜಕೀಯ ಪಕ್ಷಗಳು ತಾ ಮುಂದು ನಾ ಮುಂದು ಎಂದು ಪೈಪೋಟಿ ನಡೆಸಿ ಬಿಕ್ಷೆ ರೀತಿಯಲ್ಲಿ ಎರಡು ಸಾವಿರ ರೂಪಾಯಿ ಭಾಗ್ಯ ನೀಡಿ ಸೊಂಬೇರಿಗಳ್ಳನ್ನಾಗಿ ಮಾಡಿ ಕೃಷಿ ಕೇತ್ರಕ್ಕೆ ಕೂಲಿಕಾರ್ಮಿಕರ ಅಭಾವ ಸೃಷ್ಠಿ ಮಾಡಿ ಬಹುರಾಷ್ಟ್ರೀಯ ಕಂಪನಿಗಳ ಕಪಿ ಮುಷ್ಠಿಗೆ ದೇಶವನ್ನು ಅಡವಿಟ್ಟು ಬಡವರ ಆರೋಗ್ಯ ಶಿಕ್ಷಣವನ್ನು ದುಬಾರಿ ಮಾಡಿ ಇಡೀ ವ್ಯವಸ್ಥೆಯನ್ನು ನಾಶ ಮಾಡುತ್ತಿರುವ ಸರ್ಕಾರಗಳ ಜನ ವಿರೋದಿ ನೀತಿ ವಿರುದ್ದ ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು.

ಬೆಂಬಲ ಬೆಲೆಗಾಗಿ ಸರ್ಕಾರದ ವಿರುದ್ದ ಹೋರಾಟ ನಡೆಸುತ್ತಿರುವ ರೈತರ ಸಮಸ್ಯೆಯನ್ನು ಸರ್ಕಾರ ಗಂಬೀರವಾಗಿ ಪರಿಗಣಿಸುತ್ತಿಲ್ಲ ಕಷ್ಟಪಟ್ಟು ಬೆಳೆಯುವ ರೈತರ ಉತ್ಪನ್ನಗಳಿಗೆ ಖರ್ಚು ವೆಚ್ಚದ ಮೇಲೆ ಬೆಲೆ ನಿಗದಿ ಮಾಡುವ ತಾಕತ್ತು ಸರ್ಕಾರಗಳಿಗೆ ಇಲ್ಲದಂತಾಗಿದೆ ಕಾರ್ಖಾನೆ ಮಾಲೀಕನು ತಯಾರು ಮಾಡುವ ವಸ್ತುವಿಗೆ ಅವನೇ ಬೆಲೆ ನಿಗದಿ ಮಾಡುವಂತೆ ರೈತರ ಬೆವರಿನ ಕೃಷಿ ಬೆಳೆಗಳಿಗೆ ರೈತರೇ ಬೆಲೆ ನಿಗದಿ ಮಾಡುವ ಕಾನೂನು ಜಾರಿ ಮಾಡಲು ರೈತರು ಬೀದಿಗೆ ಇಳಿದು ಹೋರಾಟ ಮಾಡುವ ದೈರ್ಯ ತೋರಬೇಕೆಂದು ಸಲಹೆ ನೀಡಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ ನರೇಗಾ ಎಂಬುದು ಬಡವರ ಪಾಲಿಗೆ ಸ್ವಾಭಿಮಾನ ನೀಡುವ ಉದ್ಯೋಗವಾಗಿದೆ ಕೇಂದ್ರ ಸರ್ಕಾರ ಉಚಿತ ಭಾಗ್ಯಗಳನ್ನು ರದ್ದು ಮಾಡಿ ದುಡಿಯುವ ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರಿಗೆ 365 ದಿನ ಕೆಲಸ ನೀಡಿ ಪ್ರತಿ ವ್ಯಕ್ತಿಗೆ ಪ್ರತಿ ದಿನ 1500 ಕೂಲಿ ನೀಡುವ ಮುಖಾಂತರ ಬಡವರ ಬದುಕನ್ನು ರಕ್ಷಣೆ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಲಕ್ಷಾಂತರ ರೈತ ಕುಟುಂಬಗಳು ಕೃಷಿಯನ್ನೇ ನಂಬಿ ಸ್ವಾಭಿಮಾನದ ಬದುಕನ್ನು ಕಷ್ಟ ನಷ್ಟ ಲಾಭದಲ್ಲಿ ಕಟ್ಟಿಕೊಳ್ಳುತ್ತಿದ್ದಾರೆ. ಅದರೆ ಗುಬ್ಬಚ್ಚಿ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ಕೇಂದ್ರ ಸರ್ಕಾರ ಹಣ ಕಾಸು ಸಚಿವರಾದ ನಿರ್ಮಲಾ ಸಿತಾರಾಮನ್ ರವರು ನಬಾರ್ಡ್ ನಿಂದ ಸಹಕಾರ ಬ್ಯಾಂಕ್‌ಗಳಿಗೆ ನೀಡುತ್ತಿದ್ದ ಅನುದಾನವನ್ನು ಸ್ಥಗಿತಗೊಳಿಸಿ ರೈತರ ಬದುಕನ್ನು ಖಾಸಗಿ ಪೈನಾನ್ಸ್ ಹಾವಳಿಗೆ ಬಲಿ ಕೊಡಲು ಮುಂದಾಗಿರುವುದನ್ನು ಖಂಡಿಸಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಫೆ.6ರ ಗುರುವಾರ ತಲೆ ಮೇಲೆ ಕಲ್ಲು ಹೊತ್ತುಕೊಂಡು ರೈಲ್ವೆ ಇಲಾಖೆ ಮುತ್ತಿಗೆ ಹಾಕಿ ನ್ಯಾಯ ಪಡೆದುಕೊಳ್ಳಲು ಸಭೆಯಲ್ಲಿ ತಿರ್ಮಾನಿಸಲಾಗಿದೆ ಎಂದರು.

ಸಭೆಯಲ್ಲಿ ತಾಲ್ಲೂಕಾದ್ಯಕ್ಷ ಕದರಿನತ್ತ ಅಪ್ಪೋಜಿರಾವ್, ಲಕ್ಷಣ್, ಈಕಂಬಳ್ಳಿ ಮಂಜುನಾಥ್, ಶಿವಾರೆಡ್ಡಿ, ಕಿರಣ್, ಚಾಂದ್‌ಪಾಷ, ಬಾಬಾಜಾನ್, ವಿಶ್ವ, ಮುನಿಕೃಷ್ಣ, ರತ್ನಮ್ಮ, ಶೈಲಜ, ರಾಧ ಮುಂತಾದವರಿದ್ದರು.

Ramesh Babu

Journalist

Recent Posts

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…

7 hours ago

ಪೂರ್ವ ವೈಷಮ್ಯದ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…

7 hours ago

ಮೊಹರಂ ಅಂಗವಾಗಿ ಕಿಲ್ಲಾ ಮಸೀದಿಯಲ್ಲಿ ಶಿಯಾ ಮುಸ್ಲಿಮರ ಹಸೇನ್–ಹುಸೇನ್ ಆಚರಣೆ

ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ಶಿಯಾ ಮುಸ್ಲಿಂ ಸಮುದಾಯದವರ ಹಸೇನ್–ಹುಸೇನ್ ಆಚರಣೆ ಶುಕ್ರವಾರ ಶ್ರದ್ಧಾಭಕ್ತಿಯಿಂದ…

9 hours ago

ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ: ಆರ್.ಆರ್. ನಗರದ SPARSH ಆಸ್ಪತ್ರೆಯಲ್ಲಿ 5 ವಿಶೇಷ ಪ್ಲಾಸ್ಟಿಕ್ ಸರ್ಜರಿ ಕ್ಲಿನಿಕ್‌ಗಳ ಆರಂಭ

ಬೆಂಗಳೂರು, ಜುಲೈ 2026: ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ-2026ರ ಅಂಗವಾಗಿ, ಬೆಂಗಳೂರಿನ ಆರ್.ಆರ್. ನಗರದ ಸ್ಪರ್ಶ್ ಆಸ್ಪತ್ರೆ ಸಂಕೀರ್ಣ ಪುನರ್‌ನಿರ್ಮಾಣ,…

12 hours ago

ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ; ಲಂಚ ಕೇಳಿದರೆ ನೇರವಾಗಿ ನನಗೆ ದೂರು ನೀಡಿ- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಅಧಿಕಾರಿ ಸಾರ್ವಜನಿಕರಿಂದ ಹಣ ಅಥವಾ ಲಂಚಕ್ಕೆ…

14 hours ago

ಮಕ್ಕಳ ನಡುವೆ ಕಾಣಿಸಿಕೊಂಡ 5 ಅಡಿ ನಾಗರಹಾವು: ಉರಗ ರಕ್ಷಕರಿಂದ ಸುರಕ್ಷಿತ ರಕ್ಷಣೆ: ಮಕ್ಕಳು ಸುರಕ್ಷಿತ

ಬೆಂಗಳೂರು: ಹೆಸರಘಟ್ಟ ಹೋಬಳಿಯ ತೋಟಗೆರೆ ಗ್ರಾಮದಲ್ಲಿ ಗುರುವಾರ ರಾತ್ರಿ ಸುಮಾರು 10.50ರ ವೇಳೆಗೆ ಮನೆಯೊಳಗೆ ನುಗ್ಗಿದ್ದ ಸುಮಾರು 5 ಅಡಿ…

19 hours ago