Categories: ಕೋಲಾರ

ನರೇಗಾ 365 ದಿನಗಳ ಕೂಲಿಗೆ ಒತ್ತಾಯಿಸಿ ಫೆ.6 ರಂದು ರೈತ ಸಂಘದಿಂದ ಬಂಗಾರಪೇಟೆ ರೈಲ್ವೆ ಇಲಾಖೆ ಮುತ್ತಿಗೆ

ಕೋಲಾರ: ಉಚಿತ ಗ್ಯಾರಂಟಿಗಳನ್ನು ರದ್ದು ಮಾಡಿ ದುಡಿಯುವ ಕೈಗೆ ಉದ್ಯೋಗ ನೀಡಿ ಸ್ಥಗಿತಮಾಡಿರುವ ನಬಾರ್ಡ್ ಸಾಲ ಯೋಜನೆಯ ಆದೇಶವನ್ನು ವಾಪಸ್ ಪಡೆದು ನರೇಗಾದಲ್ಲಿ 365 ದಿನ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಫೆ.6 ರ ಗುರುವಾರ ತಲೆ ಮೇಲೆ ಕಲ್ಲು ಹೊತ್ತುಕೊಂಡು ಬಂಗಾರಪೇಟೆ ರೈಲ್ವೆ ಇಲಾಖೆ ಮುತ್ತಿಗೆ ಹಾಕಲು ನಗರದ ಇಂದಿರಾ ಕ್ಯಾಂಟಿನ್ ಉದ್ಯಾನವನದಲ್ಲಿ ಕರೆದಿದ ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.

ದುಡಿಯುವ ಕೈಗೆ ಕೆಲಸ ನೀಡದೆ ಅಧಿಕಾರದ ಆಸೆ ಮೈಗೂಡಿಸಿಕೊಂಡು ಮತಬಾಂಧವರಿಗೆ ಚುನಾವಣೆಯಲ್ಲಿ ಉಚಿತ ಗ್ಯಾರಂಟಿಗಳನ್ನು ನೀಡಲು ರಾಜಕೀಯ ಪಕ್ಷಗಳು ತಾ ಮುಂದು ನಾ ಮುಂದು ಎಂದು ಪೈಪೋಟಿ ನಡೆಸಿ ಬಿಕ್ಷೆ ರೀತಿಯಲ್ಲಿ ಎರಡು ಸಾವಿರ ರೂಪಾಯಿ ಭಾಗ್ಯ ನೀಡಿ ಸೊಂಬೇರಿಗಳ್ಳನ್ನಾಗಿ ಮಾಡಿ ಕೃಷಿ ಕೇತ್ರಕ್ಕೆ ಕೂಲಿಕಾರ್ಮಿಕರ ಅಭಾವ ಸೃಷ್ಠಿ ಮಾಡಿ ಬಹುರಾಷ್ಟ್ರೀಯ ಕಂಪನಿಗಳ ಕಪಿ ಮುಷ್ಠಿಗೆ ದೇಶವನ್ನು ಅಡವಿಟ್ಟು ಬಡವರ ಆರೋಗ್ಯ ಶಿಕ್ಷಣವನ್ನು ದುಬಾರಿ ಮಾಡಿ ಇಡೀ ವ್ಯವಸ್ಥೆಯನ್ನು ನಾಶ ಮಾಡುತ್ತಿರುವ ಸರ್ಕಾರಗಳ ಜನ ವಿರೋದಿ ನೀತಿ ವಿರುದ್ದ ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು.

ಬೆಂಬಲ ಬೆಲೆಗಾಗಿ ಸರ್ಕಾರದ ವಿರುದ್ದ ಹೋರಾಟ ನಡೆಸುತ್ತಿರುವ ರೈತರ ಸಮಸ್ಯೆಯನ್ನು ಸರ್ಕಾರ ಗಂಬೀರವಾಗಿ ಪರಿಗಣಿಸುತ್ತಿಲ್ಲ ಕಷ್ಟಪಟ್ಟು ಬೆಳೆಯುವ ರೈತರ ಉತ್ಪನ್ನಗಳಿಗೆ ಖರ್ಚು ವೆಚ್ಚದ ಮೇಲೆ ಬೆಲೆ ನಿಗದಿ ಮಾಡುವ ತಾಕತ್ತು ಸರ್ಕಾರಗಳಿಗೆ ಇಲ್ಲದಂತಾಗಿದೆ ಕಾರ್ಖಾನೆ ಮಾಲೀಕನು ತಯಾರು ಮಾಡುವ ವಸ್ತುವಿಗೆ ಅವನೇ ಬೆಲೆ ನಿಗದಿ ಮಾಡುವಂತೆ ರೈತರ ಬೆವರಿನ ಕೃಷಿ ಬೆಳೆಗಳಿಗೆ ರೈತರೇ ಬೆಲೆ ನಿಗದಿ ಮಾಡುವ ಕಾನೂನು ಜಾರಿ ಮಾಡಲು ರೈತರು ಬೀದಿಗೆ ಇಳಿದು ಹೋರಾಟ ಮಾಡುವ ದೈರ್ಯ ತೋರಬೇಕೆಂದು ಸಲಹೆ ನೀಡಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ ನರೇಗಾ ಎಂಬುದು ಬಡವರ ಪಾಲಿಗೆ ಸ್ವಾಭಿಮಾನ ನೀಡುವ ಉದ್ಯೋಗವಾಗಿದೆ ಕೇಂದ್ರ ಸರ್ಕಾರ ಉಚಿತ ಭಾಗ್ಯಗಳನ್ನು ರದ್ದು ಮಾಡಿ ದುಡಿಯುವ ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರಿಗೆ 365 ದಿನ ಕೆಲಸ ನೀಡಿ ಪ್ರತಿ ವ್ಯಕ್ತಿಗೆ ಪ್ರತಿ ದಿನ 1500 ಕೂಲಿ ನೀಡುವ ಮುಖಾಂತರ ಬಡವರ ಬದುಕನ್ನು ರಕ್ಷಣೆ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಲಕ್ಷಾಂತರ ರೈತ ಕುಟುಂಬಗಳು ಕೃಷಿಯನ್ನೇ ನಂಬಿ ಸ್ವಾಭಿಮಾನದ ಬದುಕನ್ನು ಕಷ್ಟ ನಷ್ಟ ಲಾಭದಲ್ಲಿ ಕಟ್ಟಿಕೊಳ್ಳುತ್ತಿದ್ದಾರೆ. ಅದರೆ ಗುಬ್ಬಚ್ಚಿ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ಕೇಂದ್ರ ಸರ್ಕಾರ ಹಣ ಕಾಸು ಸಚಿವರಾದ ನಿರ್ಮಲಾ ಸಿತಾರಾಮನ್ ರವರು ನಬಾರ್ಡ್ ನಿಂದ ಸಹಕಾರ ಬ್ಯಾಂಕ್‌ಗಳಿಗೆ ನೀಡುತ್ತಿದ್ದ ಅನುದಾನವನ್ನು ಸ್ಥಗಿತಗೊಳಿಸಿ ರೈತರ ಬದುಕನ್ನು ಖಾಸಗಿ ಪೈನಾನ್ಸ್ ಹಾವಳಿಗೆ ಬಲಿ ಕೊಡಲು ಮುಂದಾಗಿರುವುದನ್ನು ಖಂಡಿಸಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಫೆ.6ರ ಗುರುವಾರ ತಲೆ ಮೇಲೆ ಕಲ್ಲು ಹೊತ್ತುಕೊಂಡು ರೈಲ್ವೆ ಇಲಾಖೆ ಮುತ್ತಿಗೆ ಹಾಕಿ ನ್ಯಾಯ ಪಡೆದುಕೊಳ್ಳಲು ಸಭೆಯಲ್ಲಿ ತಿರ್ಮಾನಿಸಲಾಗಿದೆ ಎಂದರು.

ಸಭೆಯಲ್ಲಿ ತಾಲ್ಲೂಕಾದ್ಯಕ್ಷ ಕದರಿನತ್ತ ಅಪ್ಪೋಜಿರಾವ್, ಲಕ್ಷಣ್, ಈಕಂಬಳ್ಳಿ ಮಂಜುನಾಥ್, ಶಿವಾರೆಡ್ಡಿ, ಕಿರಣ್, ಚಾಂದ್‌ಪಾಷ, ಬಾಬಾಜಾನ್, ವಿಶ್ವ, ಮುನಿಕೃಷ್ಣ, ರತ್ನಮ್ಮ, ಶೈಲಜ, ರಾಧ ಮುಂತಾದವರಿದ್ದರು.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

2 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

13 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

18 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago