ನವರಾತ್ರಿ ಉತ್ಸವ: ಒಂಭತ್ತನೆ ದಿನದಂದು ಸ್ವರ್ಣಲಂಕಾರದಿಂದ ಕಂಗೊಳಿಸಿದ ಶ್ರೀ ಮುತ್ಯಾಲಮ್ಮ ದೇವಿ: ದೇವಿಯ ದರ್ಶನ ಪಡೆದು ಪುನೀತರಾದ ಭಕ್ತರು

ನವರಾತ್ರಿಯ ಉತ್ಸವ ನಾಡಿನೆಲ್ಲೆಡೆ ಅದ್ಧೂರಿಯಾಗಿ ನಡೆಯುತ್ತಿದೆ. ವಿಶೇಷವಾಗಿ ದೇವತೆಗಳಿಗೆ ಶರನ್ನವರಾತ್ರಿ ಪೂಜೆ, ಹೋಮವನ್ನು ಅರ್ಪಿಸಲಾಗುತ್ತಿದೆ. ನಗರದ ದೇವತೆ ಶ್ರೀ ಮುತ್ಯಾಲಮ್ಮ ದೇವಿಗೆ ನವರಾತ್ರಿಯ ಒಂಭತ್ತನೇ ದಿನದಂದು ಬಂಗಾರದ ಸ್ವರ್ಣಲಂಕಾರ ಮಾಡಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಯಿತು.

ಇಂದು ಬೆಳಗ್ಗೆಯಿಂದಲೇ ದೇವಿಯ ದರ್ಶನ ಪಡೆಯಲು ಭಕ್ತಾಧಿಗಳ ದಂಡು ಹರಿದು ಬರುತ್ತಿದೆ. ಈ ಬಾರಿಯ ನವರಾತ್ರಿಯು ಅಕ್ಟೋಬರ್‌ 3 ರಿಂದ ಪ್ರಾರಂಭವಾಗಿತ್ತು. ಚಾಮುಂಡೇಶ್ವರಿ ದೇವಿಗೆ ಒಂಭತ್ತು ದಿನ ಯಾವ ರೀತಿ‌ ಅಲಂಕಾರ ಮಾಡಿ ಪೂಜಿಸಲಾಗುವುದೋ ಅದೇರೀತಿ ಶ್ರೀ ಮುತ್ಯಾಲಮ್ಮ ದೇವಿಗೂ ಅಲಂಕರಿಸಿ ಪೂಜಿಸಲಾಗುತ್ತಿದೆ.

ದೇವಿಗೆ ಈ ಒಂಭತ್ತು‌ ದಿನಗಳಿಂದಲೂ ವಿಧವಿಧವಾದ ಅಲಂಕಾರ ಮಾಡಲಾಗಿತ್ತು, ಮೊದಲನೇ ದಿನದಂದು ಕರಗದ ಅಲಂಕಾರ, ಎರಡನೇ ದಿನ ಮುತ್ತಿನ ಅಲಂಕಾರ, ಮೂರನೇ ದಿನ ಹೂವಿನ ಅಲಂಕಾರ, ನಾಲ್ಕನೇ ದಿನ ಅರ್ಧನಾದೇಶ್ವರ ಅಲಂಕಾರ, ಐದನೇ ದಿನ ಲಿಂಗದಾಲಂಕಾರ, ಆರನೇ ದಿನ ಚಾಮುಂಡೇಶ್ವರಿ ಅಲಂಕಾರ, ಏಳನೇ ದಿನ ಶಾರದಾಂಬೆ ಅಲಂಕಾರ, ಎಂಟನೇ ದಿನ ನವ ಹೂಗಳ ಅಲಂಕಾರ, ಇಂದು ಸ್ವರ್ಣಾಲಂಕಾರ ಮಾಡಲಾಗಿದೆ. ಈ ಒಂಭತ್ತು ದಿನಗಳ ಕಾಲ ದೇವಿಯ ಒಂಭತ್ತು ರೂಪಗಳನ್ನು ಪೂಜಿಸಲಾಗುತ್ತಿದೆ.

ನವರಾತ್ರಿಯ ಪ್ರತೀ ದಿನದ ದೇವಿಯ ಅಲಂಕಾರ, ಆಕೆಗೆ ಇಷ್ಟವಾದ ಹೂವು, ಅಂದು ಇಷ್ಟವಾದ ನೈವೇದ್ಯ. ರಂಗೋಲಿ, ದೇವಿಯನ್ನು ಒಲಿಸಿಕೊಳ್ಳಲು ಹಾಡುಗಳನ್ನು ಹಾಡಲಾಗುತ್ತದೆ. ಆ ತಾಯಿ ಎಲ್ಲರಿಗೂ ಸುಖ ಶಾಂತಿ ನೆಮ್ಮದಿ ಸಿರಿ ಸಂಪತ್ತು ಆಯಸ್ಸು ಆರೋಗ್ಯ ಎಲ್ಲವನ್ನು ಕೊಟ್ಟು ಕಾಪಾಡಲಿ ಎಂದು ಪೂಜಿಸಲಾಗುತ್ತಿದೆ…

Ramesh Babu

Journalist

Recent Posts

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

43 minutes ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

2 hours ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

3 hours ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

5 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

6 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

17 hours ago