ನವರಾತ್ರಿಯ ಉತ್ಸವ ನಾಡಿನೆಲ್ಲೆಡೆ ಅದ್ಧೂರಿಯಾಗಿ ನಡೆಯುತ್ತಿದೆ. ವಿಶೇಷವಾಗಿ ದೇವತೆಗಳಿಗೆ ಶರನ್ನವರಾತ್ರಿ ಪೂಜೆ, ಹೋಮವನ್ನು ಅರ್ಪಿಸಲಾಗುತ್ತಿದೆ. ನಗರದ ದೇವತೆ ಶ್ರೀ ಮುತ್ಯಾಲಮ್ಮ ದೇವಿಗೆ ನವರಾತ್ರಿಯ ಒಂಭತ್ತನೇ ದಿನದಂದು ಬಂಗಾರದ ಸ್ವರ್ಣಲಂಕಾರ ಮಾಡಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಯಿತು.
ಇಂದು ಬೆಳಗ್ಗೆಯಿಂದಲೇ ದೇವಿಯ ದರ್ಶನ ಪಡೆಯಲು ಭಕ್ತಾಧಿಗಳ ದಂಡು ಹರಿದು ಬರುತ್ತಿದೆ. ಈ ಬಾರಿಯ ನವರಾತ್ರಿಯು ಅಕ್ಟೋಬರ್ 3 ರಿಂದ ಪ್ರಾರಂಭವಾಗಿತ್ತು. ಚಾಮುಂಡೇಶ್ವರಿ ದೇವಿಗೆ ಒಂಭತ್ತು ದಿನ ಯಾವ ರೀತಿ ಅಲಂಕಾರ ಮಾಡಿ ಪೂಜಿಸಲಾಗುವುದೋ ಅದೇರೀತಿ ಶ್ರೀ ಮುತ್ಯಾಲಮ್ಮ ದೇವಿಗೂ ಅಲಂಕರಿಸಿ ಪೂಜಿಸಲಾಗುತ್ತಿದೆ.
ದೇವಿಗೆ ಈ ಒಂಭತ್ತು ದಿನಗಳಿಂದಲೂ ವಿಧವಿಧವಾದ ಅಲಂಕಾರ ಮಾಡಲಾಗಿತ್ತು, ಮೊದಲನೇ ದಿನದಂದು ಕರಗದ ಅಲಂಕಾರ, ಎರಡನೇ ದಿನ ಮುತ್ತಿನ ಅಲಂಕಾರ, ಮೂರನೇ ದಿನ ಹೂವಿನ ಅಲಂಕಾರ, ನಾಲ್ಕನೇ ದಿನ ಅರ್ಧನಾದೇಶ್ವರ ಅಲಂಕಾರ, ಐದನೇ ದಿನ ಲಿಂಗದಾಲಂಕಾರ, ಆರನೇ ದಿನ ಚಾಮುಂಡೇಶ್ವರಿ ಅಲಂಕಾರ, ಏಳನೇ ದಿನ ಶಾರದಾಂಬೆ ಅಲಂಕಾರ, ಎಂಟನೇ ದಿನ ನವ ಹೂಗಳ ಅಲಂಕಾರ, ಇಂದು ಸ್ವರ್ಣಾಲಂಕಾರ ಮಾಡಲಾಗಿದೆ. ಈ ಒಂಭತ್ತು ದಿನಗಳ ಕಾಲ ದೇವಿಯ ಒಂಭತ್ತು ರೂಪಗಳನ್ನು ಪೂಜಿಸಲಾಗುತ್ತಿದೆ.
ನವರಾತ್ರಿಯ ಪ್ರತೀ ದಿನದ ದೇವಿಯ ಅಲಂಕಾರ, ಆಕೆಗೆ ಇಷ್ಟವಾದ ಹೂವು, ಅಂದು ಇಷ್ಟವಾದ ನೈವೇದ್ಯ. ರಂಗೋಲಿ, ದೇವಿಯನ್ನು ಒಲಿಸಿಕೊಳ್ಳಲು ಹಾಡುಗಳನ್ನು ಹಾಡಲಾಗುತ್ತದೆ. ಆ ತಾಯಿ ಎಲ್ಲರಿಗೂ ಸುಖ ಶಾಂತಿ ನೆಮ್ಮದಿ ಸಿರಿ ಸಂಪತ್ತು ಆಯಸ್ಸು ಆರೋಗ್ಯ ಎಲ್ಲವನ್ನು ಕೊಟ್ಟು ಕಾಪಾಡಲಿ ಎಂದು ಪೂಜಿಸಲಾಗುತ್ತಿದೆ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…