ನವರಾತ್ರಿ ಉತ್ಸವ: ಒಂಭತ್ತನೆ ದಿನದಂದು ಸ್ವರ್ಣಲಂಕಾರದಿಂದ ಕಂಗೊಳಿಸಿದ ಶ್ರೀ ಮುತ್ಯಾಲಮ್ಮ ದೇವಿ: ದೇವಿಯ ದರ್ಶನ ಪಡೆದು ಪುನೀತರಾದ ಭಕ್ತರು

ನವರಾತ್ರಿಯ ಉತ್ಸವ ನಾಡಿನೆಲ್ಲೆಡೆ ಅದ್ಧೂರಿಯಾಗಿ ನಡೆಯುತ್ತಿದೆ. ವಿಶೇಷವಾಗಿ ದೇವತೆಗಳಿಗೆ ಶರನ್ನವರಾತ್ರಿ ಪೂಜೆ, ಹೋಮವನ್ನು ಅರ್ಪಿಸಲಾಗುತ್ತಿದೆ. ನಗರದ ದೇವತೆ ಶ್ರೀ ಮುತ್ಯಾಲಮ್ಮ ದೇವಿಗೆ ನವರಾತ್ರಿಯ ಒಂಭತ್ತನೇ ದಿನದಂದು ಬಂಗಾರದ ಸ್ವರ್ಣಲಂಕಾರ ಮಾಡಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಯಿತು.

ಇಂದು ಬೆಳಗ್ಗೆಯಿಂದಲೇ ದೇವಿಯ ದರ್ಶನ ಪಡೆಯಲು ಭಕ್ತಾಧಿಗಳ ದಂಡು ಹರಿದು ಬರುತ್ತಿದೆ. ಈ ಬಾರಿಯ ನವರಾತ್ರಿಯು ಅಕ್ಟೋಬರ್‌ 3 ರಿಂದ ಪ್ರಾರಂಭವಾಗಿತ್ತು. ಚಾಮುಂಡೇಶ್ವರಿ ದೇವಿಗೆ ಒಂಭತ್ತು ದಿನ ಯಾವ ರೀತಿ‌ ಅಲಂಕಾರ ಮಾಡಿ ಪೂಜಿಸಲಾಗುವುದೋ ಅದೇರೀತಿ ಶ್ರೀ ಮುತ್ಯಾಲಮ್ಮ ದೇವಿಗೂ ಅಲಂಕರಿಸಿ ಪೂಜಿಸಲಾಗುತ್ತಿದೆ.

ದೇವಿಗೆ ಈ ಒಂಭತ್ತು‌ ದಿನಗಳಿಂದಲೂ ವಿಧವಿಧವಾದ ಅಲಂಕಾರ ಮಾಡಲಾಗಿತ್ತು, ಮೊದಲನೇ ದಿನದಂದು ಕರಗದ ಅಲಂಕಾರ, ಎರಡನೇ ದಿನ ಮುತ್ತಿನ ಅಲಂಕಾರ, ಮೂರನೇ ದಿನ ಹೂವಿನ ಅಲಂಕಾರ, ನಾಲ್ಕನೇ ದಿನ ಅರ್ಧನಾದೇಶ್ವರ ಅಲಂಕಾರ, ಐದನೇ ದಿನ ಲಿಂಗದಾಲಂಕಾರ, ಆರನೇ ದಿನ ಚಾಮುಂಡೇಶ್ವರಿ ಅಲಂಕಾರ, ಏಳನೇ ದಿನ ಶಾರದಾಂಬೆ ಅಲಂಕಾರ, ಎಂಟನೇ ದಿನ ನವ ಹೂಗಳ ಅಲಂಕಾರ, ಇಂದು ಸ್ವರ್ಣಾಲಂಕಾರ ಮಾಡಲಾಗಿದೆ. ಈ ಒಂಭತ್ತು ದಿನಗಳ ಕಾಲ ದೇವಿಯ ಒಂಭತ್ತು ರೂಪಗಳನ್ನು ಪೂಜಿಸಲಾಗುತ್ತಿದೆ.

ನವರಾತ್ರಿಯ ಪ್ರತೀ ದಿನದ ದೇವಿಯ ಅಲಂಕಾರ, ಆಕೆಗೆ ಇಷ್ಟವಾದ ಹೂವು, ಅಂದು ಇಷ್ಟವಾದ ನೈವೇದ್ಯ. ರಂಗೋಲಿ, ದೇವಿಯನ್ನು ಒಲಿಸಿಕೊಳ್ಳಲು ಹಾಡುಗಳನ್ನು ಹಾಡಲಾಗುತ್ತದೆ. ಆ ತಾಯಿ ಎಲ್ಲರಿಗೂ ಸುಖ ಶಾಂತಿ ನೆಮ್ಮದಿ ಸಿರಿ ಸಂಪತ್ತು ಆಯಸ್ಸು ಆರೋಗ್ಯ ಎಲ್ಲವನ್ನು ಕೊಟ್ಟು ಕಾಪಾಡಲಿ ಎಂದು ಪೂಜಿಸಲಾಗುತ್ತಿದೆ…

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

17 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

19 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

2 days ago