ಅರಳುಮಲ್ಲಿಗೆ ಕೆರೆಯಲ್ಲಿ ನವಿಲು ಬೇಟೆಯಾಡಿದ ಇಬ್ಬರನ್ನ ದೊಡ್ಡಬಳ್ಳಾಪುರ ಪೊಲೀಸರು ವಶಕ್ಕೆ ಪಡೆದು ಆರೋಪಿಗಳಿಂದ ಬೇಟೆಯಾಡಿದ ಮೂರು ನವಿಲುಗಳು, ನಾಡ ಬಂದೂಕು ಮತ್ತು ಟಿವಿಎಸ್ ಮೊಪೇಡ್ ವಾಹನವನ್ನ ಜಪ್ತಿ ಮಾಡಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮದಲ್ಲಿ ನವಿಲು ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಮುನಿಕೃಷ್ಣ ನೇತೃತ್ವದಲ್ಲಿ ಬಂಧಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ.
ಬಂಧಿತರನ್ನು ಪುಟ್ಟಪರ್ತಿ ಟೌನ್ ನಿವಾಸಿಗಳಾದ ಶ್ರೀನಿವಾಸ, ಬಾಲಾಜಿ ಎಂದು ಗುರುತಿಸಲಾಗಿದೆ. ಆರೋಪಿ ಶ್ರೀನಿವಾಸ ಎಂಬಾತ ಜಾಲಿಗೆ ಶಿವಣ್ಣ ಎಂಬುವರ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮತ್ತೊಬ್ಬ ಆರೋಪಿ ಬಾಲಾಜಿ, ಅರಳುಮಲ್ಲಿಗೆಯ ವೆಂಕಟೇಶ್ ಎಂಬುವರ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಕಳೆದ ರಾತ್ರಿ ಗ್ರಾಮಾಂತರ ಪೊಲೀಸರು ಗಸ್ತು ತಿರುಗುತ್ತಿದ್ದಾಗ ನವಿಲು ಬೇಟೆಯಾಡುತ್ತಿದ್ದವರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ, ಆರೋಪಿಗಳನ್ನ ಅರಣ್ಯ ಇಲಾಖೆಯ ವಶಕ್ಕೆ ನೀಡಲಾಗಿದ್ದು ಪ್ರಕರಣ ದಾಖಲಾಗಿದೆ.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…