ನವೆಂಬರ್ ನಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಮಟ್ಟದ ಸಾಂಸ್ಕೃತಿಕ ಹಬ್ಬವನ್ನು ಆಚರಣೆ – ಶಾಸಕ ಧೀರಜ್ ಮುನಿರಾಜು

ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಸಹ ಮುಖ್ಯವಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನವೆಂಬರ್ ತಿಂಗಳಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಮಟ್ಟದ ಸಾಂಸ್ಕೃತಿಕ ಹಬ್ಬವನ್ನು ಆಚರಿಸಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾಲೇಜು ದಿನಾಚರಣೆ ಹಾಗೂ 2023-24ನೇ ಸಾಲಿನ  ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್‌ಎಸ್‌ಎಸ್, ಎನ್‌ಸಿಸಿ, ವಿವಿಧ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಗರಪ್ರದೇಶದ ಖಾಸಗಿ ಕಾಲೇಜುಗಳಲ್ಲಿ ಆಚರಿಸುವಂತೆ, ಸರ್ಕಾರಿ ಕಾಲೇಜುಗಳಲ್ಲಿಯೂ ಸಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಪಿಸುವ ಉದ್ದೇಶ ಹೊಂದಲಾಗಿದೆ. ವಿವಿಧ ಕ್ಷೇತ್ರಗಳ ತಜ್ಞರು, ಕೈಗಾರಿಕೋದ್ಯಮಿಗಳು, ಕಾಲೇಜಿನ ಹಿತೈಷಿಗಳು ಸೇರಿದಂತೆ ಕಾಲೇಜು ಅಭಿವೃದ್ದಿ ಸಮಿತಿಯನ್ನು ನೂತನವಾಗಿ ರಚಿಸಲಾಗಿದೆ ಎಂದರು.

ಕಾಲೇಜಿನ ಅಭಿವೃದ್ದಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ 3 ಎಕರೆ ಪ್ರಸ್ತಾವನೆಯಾಗಿದ್ದು, ವಿದ್ಯಾರ್ಥಿನಿಲಯ, ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ 3 ಎಕರೆಗೆ ಮನವಿ ಸಲ್ಲಿಸಲಾಗಿದೆ ಎಂದರು.

ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಾಕ್ರಮದಲ್ಲಿ ನಗರಸಭಾ ಸದಸ್ಯರಾದ ಆರ್.ಹಂಸಪ್ರಿಯ, ಎಸ್.ಪದ್ಮನಾಭ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಲಲಿತ್ ಚಂಪಾಲಾಲ್, ಪಿ.ಸಿ.ವೆಂಕಟೇಶ್, ಕಾಂತರಾಜ್, ಪುಷ್ಪಾ ಶಿವಶಂಕರ್, ಎಂ.ಕೃಷ್ಣಮೂರ್ತಿ, ಪ್ರವೀಣ್,ಡಿ.ಶ್ರೀಕಾಂತ , ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ಖಜಾಂಚಿ ಮಹೇಶ್ ಮೊದಲಾದವರು ಭಾಗವಹಿಸಿದ್ದರು.

ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಯೋಗ ಪ್ರದರ್ಶನ ನಡೆಯಿತು.

Ramesh Babu

Journalist

Recent Posts

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

35 minutes ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

5 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

10 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

11 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

12 hours ago