ನವೆಂಬರ್ ನಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಮಟ್ಟದ ಸಾಂಸ್ಕೃತಿಕ ಹಬ್ಬವನ್ನು ಆಚರಣೆ – ಶಾಸಕ ಧೀರಜ್ ಮುನಿರಾಜು

ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಸಹ ಮುಖ್ಯವಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನವೆಂಬರ್ ತಿಂಗಳಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಮಟ್ಟದ ಸಾಂಸ್ಕೃತಿಕ ಹಬ್ಬವನ್ನು ಆಚರಿಸಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾಲೇಜು ದಿನಾಚರಣೆ ಹಾಗೂ 2023-24ನೇ ಸಾಲಿನ  ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್‌ಎಸ್‌ಎಸ್, ಎನ್‌ಸಿಸಿ, ವಿವಿಧ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಗರಪ್ರದೇಶದ ಖಾಸಗಿ ಕಾಲೇಜುಗಳಲ್ಲಿ ಆಚರಿಸುವಂತೆ, ಸರ್ಕಾರಿ ಕಾಲೇಜುಗಳಲ್ಲಿಯೂ ಸಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಪಿಸುವ ಉದ್ದೇಶ ಹೊಂದಲಾಗಿದೆ. ವಿವಿಧ ಕ್ಷೇತ್ರಗಳ ತಜ್ಞರು, ಕೈಗಾರಿಕೋದ್ಯಮಿಗಳು, ಕಾಲೇಜಿನ ಹಿತೈಷಿಗಳು ಸೇರಿದಂತೆ ಕಾಲೇಜು ಅಭಿವೃದ್ದಿ ಸಮಿತಿಯನ್ನು ನೂತನವಾಗಿ ರಚಿಸಲಾಗಿದೆ ಎಂದರು.

ಕಾಲೇಜಿನ ಅಭಿವೃದ್ದಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ 3 ಎಕರೆ ಪ್ರಸ್ತಾವನೆಯಾಗಿದ್ದು, ವಿದ್ಯಾರ್ಥಿನಿಲಯ, ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ 3 ಎಕರೆಗೆ ಮನವಿ ಸಲ್ಲಿಸಲಾಗಿದೆ ಎಂದರು.

ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಾಕ್ರಮದಲ್ಲಿ ನಗರಸಭಾ ಸದಸ್ಯರಾದ ಆರ್.ಹಂಸಪ್ರಿಯ, ಎಸ್.ಪದ್ಮನಾಭ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಲಲಿತ್ ಚಂಪಾಲಾಲ್, ಪಿ.ಸಿ.ವೆಂಕಟೇಶ್, ಕಾಂತರಾಜ್, ಪುಷ್ಪಾ ಶಿವಶಂಕರ್, ಎಂ.ಕೃಷ್ಣಮೂರ್ತಿ, ಪ್ರವೀಣ್,ಡಿ.ಶ್ರೀಕಾಂತ , ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ಖಜಾಂಚಿ ಮಹೇಶ್ ಮೊದಲಾದವರು ಭಾಗವಹಿಸಿದ್ದರು.

ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಯೋಗ ಪ್ರದರ್ಶನ ನಡೆಯಿತು.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

23 minutes ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

2 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

5 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

19 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago