Categories: ರಾಜ್ಯ

ನವೆಂಬರ್ 20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್

ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ ಮತ್ತು ಪ್ರಮೋಷನ್‌ಗೆ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಇದರಿಂದಾಗಿ ನಕಲಿ ಮದ್ಯದ ಪ್ರಮಾಣ ಹೆಚ್ಚಾಗಿದೆ. ಮದ್ಯದಂಗಡಿ ಮಾಲೀಕರು ನವೆಂಬರ್ 20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ಕರೆ ನೀಡಿದ್ದಾರೆ.

ಅಬಕಾರಿ ಇಲಾಖೆಯಲ್ಲಿ (Excise Department) ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ, ಪ್ರಮೋಷನ್​ಗೆ ಸನ್ನದುದಾರರಿಂದ ಮನಸೋ ಇಚ್ಛೆ ಕೋಟಿ ಕೋಟಿ ರೂ. ಲಂಚ ಕೇಳಲಾಗುತ್ತಿದೆ. ಅಧಿಕಾರಿಗಳ ಲಂಚಾವತಾರದಿಂದ‌ ನಕಲಿ ಅಂತಾರಾಜ್ಯ ಮದ್ಯ ಹೆಚ್ಚಳವಾಗಿದೆ. ಹೀಗಾಗಿ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್​ಗೆ ಕರೆ ನೀಡಲಾಗಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ವೈನ್ ಮರ್ಚೆಂಟ್​ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್​ ಹೆಗ್ಡೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 20ರಂದು ಕರ್ನಾಟಕದಾದ್ಯಂತ ಎಂಎಸ್​​ಐಎಲ್​ ಹೊರತುಪಡಿಸಿ ಎಲ್ಲಾ ಬಾರ್​ಗಳ ಬಂದ್​ಗೆ ಕರೆ ನೀಡಿರುವುದಾಗಿ ತಿಳಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ನಮ್ಮ ಜೊತೆ ಸಿಎಂ, ಅಬಕಾರಿ ಸಚಿವರು ಮೀಟಿಂಗ್ ಮಾಡಬೇಕು. ನಾವು 500-900 ಕೋಟಿ ರೂ. ಲಂಚದ ಬಗ್ಗೆ ಎಂದೂ ಮಾತನಾಡಿಲ್ಲ. ತಪ್ಪು ಮಾಹಿತಿಯನ್ನು ಪ್ರಧಾನಿಗೆ ಯಾರು ಕೊಟ್ಟರೋ ಗೊತ್ತಿಲ್ಲ. ಪ್ರಧಾನಿ ವಿಚಾರದ ಬಗ್ಗೆ ಏನೂ ಹೇಳಲ್ಲ ಎಂದಿದ್ದಾರೆ.

ಸಿಎಲ್​ 7 ಬಾರ್​ಗಳಿಗೆ ಬೇಕಾ ಬಿಟ್ಟಿ ಲೈಸನ್ಸ್ ಕೊಡಲಾಗುತ್ತಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವುದೇ ಇಲ್ಲ. ಆರ್​ಟಿಐ ಕಾರ್ಯಕರ್ತರ ಹೇಳಿಕೆ ಬಗ್ಗೆ ಮಾತನಾಡಿರೋದು ಸರಿಯಲ್ಲ. ನಮ್ಮ ಬೇಡಿಕೆಗಳ ಬಗ್ಗೆ ನಾವು ಹೋರಾಟ ಮಾಡುತ್ತಿದ್ದೇವೆ. ನಮ್ಮ ಬೇಡಿಕೆ ಬಗ್ಗೆ ಸರ್ಕಾರ ತಿರ್ಮಾನ ತೆಗೆದುಕೊಂಡರೆ ಒಳ್ಳೇದು ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…

4 hours ago

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

7 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

19 hours ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

21 hours ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

24 hours ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

1 day ago