ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ ಮತ್ತು ಪ್ರಮೋಷನ್ಗೆ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಇದರಿಂದಾಗಿ ನಕಲಿ ಮದ್ಯದ ಪ್ರಮಾಣ ಹೆಚ್ಚಾಗಿದೆ. ಮದ್ಯದಂಗಡಿ ಮಾಲೀಕರು ನವೆಂಬರ್ 20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ಗೆ ಕರೆ ನೀಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ (Excise Department) ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ, ಪ್ರಮೋಷನ್ಗೆ ಸನ್ನದುದಾರರಿಂದ ಮನಸೋ ಇಚ್ಛೆ ಕೋಟಿ ಕೋಟಿ ರೂ. ಲಂಚ ಕೇಳಲಾಗುತ್ತಿದೆ. ಅಧಿಕಾರಿಗಳ ಲಂಚಾವತಾರದಿಂದ ನಕಲಿ ಅಂತಾರಾಜ್ಯ ಮದ್ಯ ಹೆಚ್ಚಳವಾಗಿದೆ. ಹೀಗಾಗಿ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್ಗೆ ಕರೆ ನೀಡಲಾಗಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 20ರಂದು ಕರ್ನಾಟಕದಾದ್ಯಂತ ಎಂಎಸ್ಐಎಲ್ ಹೊರತುಪಡಿಸಿ ಎಲ್ಲಾ ಬಾರ್ಗಳ ಬಂದ್ಗೆ ಕರೆ ನೀಡಿರುವುದಾಗಿ ತಿಳಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ನಮ್ಮ ಜೊತೆ ಸಿಎಂ, ಅಬಕಾರಿ ಸಚಿವರು ಮೀಟಿಂಗ್ ಮಾಡಬೇಕು. ನಾವು 500-900 ಕೋಟಿ ರೂ. ಲಂಚದ ಬಗ್ಗೆ ಎಂದೂ ಮಾತನಾಡಿಲ್ಲ. ತಪ್ಪು ಮಾಹಿತಿಯನ್ನು ಪ್ರಧಾನಿಗೆ ಯಾರು ಕೊಟ್ಟರೋ ಗೊತ್ತಿಲ್ಲ. ಪ್ರಧಾನಿ ವಿಚಾರದ ಬಗ್ಗೆ ಏನೂ ಹೇಳಲ್ಲ ಎಂದಿದ್ದಾರೆ.
ಸಿಎಲ್ 7 ಬಾರ್ಗಳಿಗೆ ಬೇಕಾ ಬಿಟ್ಟಿ ಲೈಸನ್ಸ್ ಕೊಡಲಾಗುತ್ತಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವುದೇ ಇಲ್ಲ. ಆರ್ಟಿಐ ಕಾರ್ಯಕರ್ತರ ಹೇಳಿಕೆ ಬಗ್ಗೆ ಮಾತನಾಡಿರೋದು ಸರಿಯಲ್ಲ. ನಮ್ಮ ಬೇಡಿಕೆಗಳ ಬಗ್ಗೆ ನಾವು ಹೋರಾಟ ಮಾಡುತ್ತಿದ್ದೇವೆ. ನಮ್ಮ ಬೇಡಿಕೆ ಬಗ್ಗೆ ಸರ್ಕಾರ ತಿರ್ಮಾನ ತೆಗೆದುಕೊಂಡರೆ ಒಳ್ಳೇದು ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…