ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ ಮತ್ತು ಪ್ರಮೋಷನ್ಗೆ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಇದರಿಂದಾಗಿ ನಕಲಿ ಮದ್ಯದ ಪ್ರಮಾಣ ಹೆಚ್ಚಾಗಿದೆ. ಮದ್ಯದಂಗಡಿ ಮಾಲೀಕರು ನವೆಂಬರ್ 20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ಗೆ ಕರೆ ನೀಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ (Excise Department) ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ, ಪ್ರಮೋಷನ್ಗೆ ಸನ್ನದುದಾರರಿಂದ ಮನಸೋ ಇಚ್ಛೆ ಕೋಟಿ ಕೋಟಿ ರೂ. ಲಂಚ ಕೇಳಲಾಗುತ್ತಿದೆ. ಅಧಿಕಾರಿಗಳ ಲಂಚಾವತಾರದಿಂದ ನಕಲಿ ಅಂತಾರಾಜ್ಯ ಮದ್ಯ ಹೆಚ್ಚಳವಾಗಿದೆ. ಹೀಗಾಗಿ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್ಗೆ ಕರೆ ನೀಡಲಾಗಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 20ರಂದು ಕರ್ನಾಟಕದಾದ್ಯಂತ ಎಂಎಸ್ಐಎಲ್ ಹೊರತುಪಡಿಸಿ ಎಲ್ಲಾ ಬಾರ್ಗಳ ಬಂದ್ಗೆ ಕರೆ ನೀಡಿರುವುದಾಗಿ ತಿಳಿಸಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ನಮ್ಮ ಜೊತೆ ಸಿಎಂ, ಅಬಕಾರಿ ಸಚಿವರು ಮೀಟಿಂಗ್ ಮಾಡಬೇಕು. ನಾವು 500-900 ಕೋಟಿ ರೂ. ಲಂಚದ ಬಗ್ಗೆ ಎಂದೂ ಮಾತನಾಡಿಲ್ಲ. ತಪ್ಪು ಮಾಹಿತಿಯನ್ನು ಪ್ರಧಾನಿಗೆ ಯಾರು ಕೊಟ್ಟರೋ ಗೊತ್ತಿಲ್ಲ. ಪ್ರಧಾನಿ ವಿಚಾರದ ಬಗ್ಗೆ ಏನೂ ಹೇಳಲ್ಲ ಎಂದಿದ್ದಾರೆ.
ಸಿಎಲ್ 7 ಬಾರ್ಗಳಿಗೆ ಬೇಕಾ ಬಿಟ್ಟಿ ಲೈಸನ್ಸ್ ಕೊಡಲಾಗುತ್ತಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವುದೇ ಇಲ್ಲ. ಆರ್ಟಿಐ ಕಾರ್ಯಕರ್ತರ ಹೇಳಿಕೆ ಬಗ್ಗೆ ಮಾತನಾಡಿರೋದು ಸರಿಯಲ್ಲ. ನಮ್ಮ ಬೇಡಿಕೆಗಳ ಬಗ್ಗೆ ನಾವು ಹೋರಾಟ ಮಾಡುತ್ತಿದ್ದೇವೆ. ನಮ್ಮ ಬೇಡಿಕೆ ಬಗ್ಗೆ ಸರ್ಕಾರ ತಿರ್ಮಾನ ತೆಗೆದುಕೊಂಡರೆ ಒಳ್ಳೇದು ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…