Categories: ರಾಜ್ಯ

ನವೆಂಬರ್ 20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್

ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ ಮತ್ತು ಪ್ರಮೋಷನ್‌ಗೆ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಇದರಿಂದಾಗಿ ನಕಲಿ ಮದ್ಯದ ಪ್ರಮಾಣ ಹೆಚ್ಚಾಗಿದೆ. ಮದ್ಯದಂಗಡಿ ಮಾಲೀಕರು ನವೆಂಬರ್ 20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ಕರೆ ನೀಡಿದ್ದಾರೆ.

ಅಬಕಾರಿ ಇಲಾಖೆಯಲ್ಲಿ (Excise Department) ಮಿತಿಮೀರಿದ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ, ಪ್ರಮೋಷನ್​ಗೆ ಸನ್ನದುದಾರರಿಂದ ಮನಸೋ ಇಚ್ಛೆ ಕೋಟಿ ಕೋಟಿ ರೂ. ಲಂಚ ಕೇಳಲಾಗುತ್ತಿದೆ. ಅಧಿಕಾರಿಗಳ ಲಂಚಾವತಾರದಿಂದ‌ ನಕಲಿ ಅಂತಾರಾಜ್ಯ ಮದ್ಯ ಹೆಚ್ಚಳವಾಗಿದೆ. ಹೀಗಾಗಿ ಅಬಕಾರಿ ಅಧಿಕಾರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಸಮರಕ್ಕೆ ಮುಂದಾಗಿದ್ದು, ನವೆಂಬರ್ 20ರಂದು ಕರ್ನಾಟಕದಾದ್ಯಂತ ಮದ್ಯ ಮಾರಾಟ ಬಂದ್​ಗೆ ಕರೆ ನೀಡಲಾಗಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ವೈನ್ ಮರ್ಚೆಂಟ್​ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್​ ಹೆಗ್ಡೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 20ರಂದು ಕರ್ನಾಟಕದಾದ್ಯಂತ ಎಂಎಸ್​​ಐಎಲ್​ ಹೊರತುಪಡಿಸಿ ಎಲ್ಲಾ ಬಾರ್​ಗಳ ಬಂದ್​ಗೆ ಕರೆ ನೀಡಿರುವುದಾಗಿ ತಿಳಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ನಮ್ಮ ಜೊತೆ ಸಿಎಂ, ಅಬಕಾರಿ ಸಚಿವರು ಮೀಟಿಂಗ್ ಮಾಡಬೇಕು. ನಾವು 500-900 ಕೋಟಿ ರೂ. ಲಂಚದ ಬಗ್ಗೆ ಎಂದೂ ಮಾತನಾಡಿಲ್ಲ. ತಪ್ಪು ಮಾಹಿತಿಯನ್ನು ಪ್ರಧಾನಿಗೆ ಯಾರು ಕೊಟ್ಟರೋ ಗೊತ್ತಿಲ್ಲ. ಪ್ರಧಾನಿ ವಿಚಾರದ ಬಗ್ಗೆ ಏನೂ ಹೇಳಲ್ಲ ಎಂದಿದ್ದಾರೆ.

ಸಿಎಲ್​ 7 ಬಾರ್​ಗಳಿಗೆ ಬೇಕಾ ಬಿಟ್ಟಿ ಲೈಸನ್ಸ್ ಕೊಡಲಾಗುತ್ತಿದೆ. ಅಧಿಕಾರಿಗಳು ಪರಿಶೀಲನೆ ನಡೆಸುವುದೇ ಇಲ್ಲ. ಆರ್​ಟಿಐ ಕಾರ್ಯಕರ್ತರ ಹೇಳಿಕೆ ಬಗ್ಗೆ ಮಾತನಾಡಿರೋದು ಸರಿಯಲ್ಲ. ನಮ್ಮ ಬೇಡಿಕೆಗಳ ಬಗ್ಗೆ ನಾವು ಹೋರಾಟ ಮಾಡುತ್ತಿದ್ದೇವೆ. ನಮ್ಮ ಬೇಡಿಕೆ ಬಗ್ಗೆ ಸರ್ಕಾರ ತಿರ್ಮಾನ ತೆಗೆದುಕೊಂಡರೆ ಒಳ್ಳೇದು ಎಂದು ಹೇಳಿದ್ದಾರೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

1 hour ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

13 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

15 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

15 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

22 hours ago