ಅಟಲ್ ಭೂಜಲ ಯೋಜನೆಯು ಅಂತರ್ಜಲ ನಿರ್ವಹಣೆಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. 2023-24ನೇ ಸಾಲಿಗೆ ಅಟಲ್ ಭೂಜಲ ಯೋಜನೆಯನ್ನು ವಿಶ್ವ ಬ್ಯಾಂಕ್ ನೆರವಿನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನಕ್ಕೆ ಸೇರಿದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಸಂರಕ್ಷಿತ ಬೇಸಾಯದ ತಾಂತ್ರಿಕತೆ ಅಳವಡಿಸಿಕೊಂಡು ನೀರಿನ ಸದ್ಬಳಕೆಯೊಂದಿಗೆ ಹಸಿರುಮನೆಯಲ್ಲಿ ಉತ್ತಮ ಗುಣಮಟ್ಟದ ತೋಟಗಾರಿಕೆ ಬೆಳೆಗಳ ಉತ್ಪನ್ನಗಳನ್ನು ಉತ್ಪಾದಿಸಲು ಹಾಗೂ ರೋಗ, ಕೀಟ ಬಾದೆಯನ್ನು ನಿಯಂತ್ರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ.
ತೋಟಗಾರಿಕೆ ಬೆಳೆಗಳಾದ ವಿವಿಧ ಪುಷ್ಪ, ಹಣ್ಣಿನ, ತರಕಾರಿ ಹಾಗೂ ಇತರೆ ಅಧಿಕ ಮೌಲ್ಯದ ತೋಟಗಾರಿಕೆ ಬೆಳೆಗಳನ್ನು ಹಸಿರುಮನೆಯಲ್ಲಿ ಬೆಳೆಯಲು ಎಲ್ಲಾ ವರ್ಗದ ರೈತರಿಗೆ ಶೇ.50ರ ಸಹಾಯಧನ ನೀಡಲಾಗುವುದು.ಅಟಲ್ ಭೂಜಲ ಯೋಜನೆಯಡಿ ಕೃಷಿ ಹೊಂಡ ನಿರ್ಮಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಅಟಲ್ ಭೂಜಲ್ ಯೋಜನೆಯಡಿ ನವೆಂಬರ್ 23 ರಂದು ಪೂರ್ವಾಹ್ನ 10.00 ಗಂಟೆಗೆ ದೊಡ್ಡಬಳ್ಳಾಪುರದ ತೂಬಗೆರೆ ಹೋಬಳಿಯ ಕಾವಲಹಳ್ಳಿ ಗ್ರಾಮದಲ್ಲಿರುವ ಪ್ರಗತಿ ಪರ ರೈತನಾದ ಬಲ್ಲೇಪಲ್ಲಿ ಶ್ರೀಕಾಂತ್ ವಾಸವಿ ಪ್ಲೋರಿಟೆಕ್ ನಲ್ಲಿ
1. ಹಸಿರು ಮನೆ ನಿರ್ಮಾಣ ಸಂದರ್ಭದಲ್ಲಿ ಅನುಸರಿಸಬೇಕಾದ ತಾಂತ್ರಿಕ ವೈಶಿಷ್ಟ್ಯಗಳು, 2. ಹಸಿರು ಮನೆಯಲ್ಲಿ ಗುಲಾಬಿ, ಜರ್ಬೆರಾ ಮತ್ತು ಕ್ಯಾಪ್ಸಿಕಂ ಸಮಗ್ರ ಬೇಸಾಯ ಪದ್ದತಿ, 3.ಹಸಿರು ಮನೆಯಲ್ಲಿ ಹೊಸ ಬೆಳೆಗಳ ಸಮಗ್ರ ಬೇಸಾಯ ಪದ್ದತಿ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಈ ಮೂಲಕ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ದೊಡ್ಡಬಳ್ಳಾಪುರ 9880210892, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ದೇವನಹಳ್ಳಿ 9480461234. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ಹೊಸಕೋಟೆ 8217210320, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ನೆಲಮಂಗಲ 9880461607 ಅನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…