ನವೆಂಬರ್ 23 ರಂದು ಹಸಿರುಮನೆ ನಿರ್ಮಾಣ ಕುರಿತು ತರಬೇತಿ ಕಾರ್ಯಾಗಾರ

ಅಟಲ್ ಭೂಜಲ ಯೋಜನೆಯು ಅಂತರ್ಜಲ ನಿರ್ವಹಣೆಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. 2023-24ನೇ ಸಾಲಿಗೆ ಅಟಲ್ ಭೂಜಲ ಯೋಜನೆಯನ್ನು ವಿಶ್ವ ಬ್ಯಾಂಕ್ ನೆರವಿನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನಕ್ಕೆ ಸೇರಿದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಸಂರಕ್ಷಿತ ಬೇಸಾಯದ ತಾಂತ್ರಿಕತೆ ಅಳವಡಿಸಿಕೊಂಡು ನೀರಿನ ಸದ್ಬಳಕೆಯೊಂದಿಗೆ ಹಸಿರುಮನೆಯಲ್ಲಿ ಉತ್ತಮ ಗುಣಮಟ್ಟದ ತೋಟಗಾರಿಕೆ ಬೆಳೆಗಳ ಉತ್ಪನ್ನಗಳನ್ನು ಉತ್ಪಾದಿಸಲು ಹಾಗೂ ರೋಗ, ಕೀಟ ಬಾದೆಯನ್ನು ನಿಯಂತ್ರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ.

ತೋಟಗಾರಿಕೆ ಬೆಳೆಗಳಾದ ವಿವಿಧ ಪುಷ್ಪ, ಹಣ್ಣಿನ, ತರಕಾರಿ ಹಾಗೂ ಇತರೆ ಅಧಿಕ ಮೌಲ್ಯದ ತೋಟಗಾರಿಕೆ ಬೆಳೆಗಳನ್ನು ಹಸಿರುಮನೆಯಲ್ಲಿ ಬೆಳೆಯಲು ಎಲ್ಲಾ ವರ್ಗದ ರೈತರಿಗೆ ಶೇ.50ರ ಸಹಾಯಧನ ನೀಡಲಾಗುವುದು.‌‌ಅಟಲ್ ಭೂಜಲ ಯೋಜನೆಯಡಿ ಕೃಷಿ ಹೊಂಡ ನಿರ್ಮಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಅಟಲ್ ಭೂಜಲ್ ಯೋಜನೆಯಡಿ ನವೆಂಬರ್ 23 ರಂದು ಪೂರ್ವಾಹ್ನ 10.00 ಗಂಟೆಗೆ ದೊಡ್ಡಬಳ್ಳಾಪುರದ ತೂಬಗೆರೆ ಹೋಬಳಿಯ ಕಾವಲಹಳ್ಳಿ ಗ್ರಾಮದಲ್ಲಿರುವ ಪ್ರಗತಿ ಪರ ರೈತನಾದ ಬಲ್ಲೇಪಲ್ಲಿ ಶ್ರೀಕಾಂತ್ ವಾಸವಿ ಪ್ಲೋರಿಟೆಕ್ ನಲ್ಲಿ

1. ಹಸಿರು ಮನೆ ನಿರ್ಮಾಣ ಸಂದರ್ಭದಲ್ಲಿ ಅನುಸರಿಸಬೇಕಾದ ತಾಂತ್ರಿಕ ವೈಶಿಷ್ಟ್ಯಗಳು, 2. ಹಸಿರು ಮನೆಯಲ್ಲಿ ಗುಲಾಬಿ, ಜರ್ಬೆರಾ ಮತ್ತು ಕ್ಯಾಪ್ಸಿಕಂ ಸಮಗ್ರ ಬೇಸಾಯ ಪದ್ದತಿ, 3.ಹಸಿರು ಮನೆಯಲ್ಲಿ ಹೊಸ ಬೆಳೆಗಳ ಸಮಗ್ರ ಬೇಸಾಯ ಪದ್ದತಿ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಈ ಮೂಲಕ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ದೊಡ್ಡಬಳ್ಳಾಪುರ 9880210892,  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ದೇವನಹಳ್ಳಿ 9480461234. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ಹೊಸಕೋಟೆ 8217210320, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ನೆಲಮಂಗಲ 9880461607 ಅನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

2 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

4 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

4 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

5 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

6 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

11 hours ago