ನವೆಂಬರ್ 23 ರಂದು ಹಸಿರುಮನೆ ನಿರ್ಮಾಣ ಕುರಿತು ತರಬೇತಿ ಕಾರ್ಯಾಗಾರ

ಅಟಲ್ ಭೂಜಲ ಯೋಜನೆಯು ಅಂತರ್ಜಲ ನಿರ್ವಹಣೆಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. 2023-24ನೇ ಸಾಲಿಗೆ ಅಟಲ್ ಭೂಜಲ ಯೋಜನೆಯನ್ನು ವಿಶ್ವ ಬ್ಯಾಂಕ್ ನೆರವಿನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನಕ್ಕೆ ಸೇರಿದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಸಂರಕ್ಷಿತ ಬೇಸಾಯದ ತಾಂತ್ರಿಕತೆ ಅಳವಡಿಸಿಕೊಂಡು ನೀರಿನ ಸದ್ಬಳಕೆಯೊಂದಿಗೆ ಹಸಿರುಮನೆಯಲ್ಲಿ ಉತ್ತಮ ಗುಣಮಟ್ಟದ ತೋಟಗಾರಿಕೆ ಬೆಳೆಗಳ ಉತ್ಪನ್ನಗಳನ್ನು ಉತ್ಪಾದಿಸಲು ಹಾಗೂ ರೋಗ, ಕೀಟ ಬಾದೆಯನ್ನು ನಿಯಂತ್ರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ.

ತೋಟಗಾರಿಕೆ ಬೆಳೆಗಳಾದ ವಿವಿಧ ಪುಷ್ಪ, ಹಣ್ಣಿನ, ತರಕಾರಿ ಹಾಗೂ ಇತರೆ ಅಧಿಕ ಮೌಲ್ಯದ ತೋಟಗಾರಿಕೆ ಬೆಳೆಗಳನ್ನು ಹಸಿರುಮನೆಯಲ್ಲಿ ಬೆಳೆಯಲು ಎಲ್ಲಾ ವರ್ಗದ ರೈತರಿಗೆ ಶೇ.50ರ ಸಹಾಯಧನ ನೀಡಲಾಗುವುದು.‌‌ಅಟಲ್ ಭೂಜಲ ಯೋಜನೆಯಡಿ ಕೃಷಿ ಹೊಂಡ ನಿರ್ಮಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಅಟಲ್ ಭೂಜಲ್ ಯೋಜನೆಯಡಿ ನವೆಂಬರ್ 23 ರಂದು ಪೂರ್ವಾಹ್ನ 10.00 ಗಂಟೆಗೆ ದೊಡ್ಡಬಳ್ಳಾಪುರದ ತೂಬಗೆರೆ ಹೋಬಳಿಯ ಕಾವಲಹಳ್ಳಿ ಗ್ರಾಮದಲ್ಲಿರುವ ಪ್ರಗತಿ ಪರ ರೈತನಾದ ಬಲ್ಲೇಪಲ್ಲಿ ಶ್ರೀಕಾಂತ್ ವಾಸವಿ ಪ್ಲೋರಿಟೆಕ್ ನಲ್ಲಿ

1. ಹಸಿರು ಮನೆ ನಿರ್ಮಾಣ ಸಂದರ್ಭದಲ್ಲಿ ಅನುಸರಿಸಬೇಕಾದ ತಾಂತ್ರಿಕ ವೈಶಿಷ್ಟ್ಯಗಳು, 2. ಹಸಿರು ಮನೆಯಲ್ಲಿ ಗುಲಾಬಿ, ಜರ್ಬೆರಾ ಮತ್ತು ಕ್ಯಾಪ್ಸಿಕಂ ಸಮಗ್ರ ಬೇಸಾಯ ಪದ್ದತಿ, 3.ಹಸಿರು ಮನೆಯಲ್ಲಿ ಹೊಸ ಬೆಳೆಗಳ ಸಮಗ್ರ ಬೇಸಾಯ ಪದ್ದತಿ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಈ ಮೂಲಕ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ದೊಡ್ಡಬಳ್ಳಾಪುರ 9880210892,  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ದೇವನಹಳ್ಳಿ 9480461234. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ಹೊಸಕೋಟೆ 8217210320, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ನೆಲಮಂಗಲ 9880461607 ಅನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

2 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

4 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

7 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

12 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

23 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

1 day ago