ನವೆಂಬರ್ 23 ರಂದು ಹಸಿರುಮನೆ ನಿರ್ಮಾಣ ಕುರಿತು ತರಬೇತಿ ಕಾರ್ಯಾಗಾರ

ಅಟಲ್ ಭೂಜಲ ಯೋಜನೆಯು ಅಂತರ್ಜಲ ನಿರ್ವಹಣೆಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. 2023-24ನೇ ಸಾಲಿಗೆ ಅಟಲ್ ಭೂಜಲ ಯೋಜನೆಯನ್ನು ವಿಶ್ವ ಬ್ಯಾಂಕ್ ನೆರವಿನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನಕ್ಕೆ ಸೇರಿದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಸಂರಕ್ಷಿತ ಬೇಸಾಯದ ತಾಂತ್ರಿಕತೆ ಅಳವಡಿಸಿಕೊಂಡು ನೀರಿನ ಸದ್ಬಳಕೆಯೊಂದಿಗೆ ಹಸಿರುಮನೆಯಲ್ಲಿ ಉತ್ತಮ ಗುಣಮಟ್ಟದ ತೋಟಗಾರಿಕೆ ಬೆಳೆಗಳ ಉತ್ಪನ್ನಗಳನ್ನು ಉತ್ಪಾದಿಸಲು ಹಾಗೂ ರೋಗ, ಕೀಟ ಬಾದೆಯನ್ನು ನಿಯಂತ್ರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ.

ತೋಟಗಾರಿಕೆ ಬೆಳೆಗಳಾದ ವಿವಿಧ ಪುಷ್ಪ, ಹಣ್ಣಿನ, ತರಕಾರಿ ಹಾಗೂ ಇತರೆ ಅಧಿಕ ಮೌಲ್ಯದ ತೋಟಗಾರಿಕೆ ಬೆಳೆಗಳನ್ನು ಹಸಿರುಮನೆಯಲ್ಲಿ ಬೆಳೆಯಲು ಎಲ್ಲಾ ವರ್ಗದ ರೈತರಿಗೆ ಶೇ.50ರ ಸಹಾಯಧನ ನೀಡಲಾಗುವುದು.‌‌ಅಟಲ್ ಭೂಜಲ ಯೋಜನೆಯಡಿ ಕೃಷಿ ಹೊಂಡ ನಿರ್ಮಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಅಟಲ್ ಭೂಜಲ್ ಯೋಜನೆಯಡಿ ನವೆಂಬರ್ 23 ರಂದು ಪೂರ್ವಾಹ್ನ 10.00 ಗಂಟೆಗೆ ದೊಡ್ಡಬಳ್ಳಾಪುರದ ತೂಬಗೆರೆ ಹೋಬಳಿಯ ಕಾವಲಹಳ್ಳಿ ಗ್ರಾಮದಲ್ಲಿರುವ ಪ್ರಗತಿ ಪರ ರೈತನಾದ ಬಲ್ಲೇಪಲ್ಲಿ ಶ್ರೀಕಾಂತ್ ವಾಸವಿ ಪ್ಲೋರಿಟೆಕ್ ನಲ್ಲಿ

1. ಹಸಿರು ಮನೆ ನಿರ್ಮಾಣ ಸಂದರ್ಭದಲ್ಲಿ ಅನುಸರಿಸಬೇಕಾದ ತಾಂತ್ರಿಕ ವೈಶಿಷ್ಟ್ಯಗಳು, 2. ಹಸಿರು ಮನೆಯಲ್ಲಿ ಗುಲಾಬಿ, ಜರ್ಬೆರಾ ಮತ್ತು ಕ್ಯಾಪ್ಸಿಕಂ ಸಮಗ್ರ ಬೇಸಾಯ ಪದ್ದತಿ, 3.ಹಸಿರು ಮನೆಯಲ್ಲಿ ಹೊಸ ಬೆಳೆಗಳ ಸಮಗ್ರ ಬೇಸಾಯ ಪದ್ದತಿ ಕುರಿತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಈ ಮೂಲಕ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ದೊಡ್ಡಬಳ್ಳಾಪುರ 9880210892,  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ), ದೇವನಹಳ್ಳಿ 9480461234. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ) ಹೊಸಕೋಟೆ 8217210320, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ನೆಲಮಂಗಲ 9880461607 ಅನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

13 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

21 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago