ನವ ದೊಡ್ಡಬಳ್ಳಾಪುರ ನಿರ್ಮಾಣ ಹೆಸರಲ್ಲಿ ಅಧಿಕಾರಕ್ಕೆ ಬಂದವರು ಎಲ್ಲಿ..? – ಹಾಲಿ ಶಾಸಕರಿಗೆ ಮಾಜಿ ಶಾಸಕ ಪ್ರಶ್ನೆ

ನವ ದೊಡ್ಡಬಳ್ಳಾಪುರ ನಿರ್ಮಾಣ ಹೆಸರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಶಾಸಕ ಒಂದೇ ವರ್ಷದಲ್ಲಿ ಚಿಗರೇನಹಳ್ಳಿ ಸಮೀಪದ ಎಂಎಸ್‌ಜಿಪಿ ಕಂಪನಿಯ ಬಿಬಿಎಂಪಿ ಕಸವಿಲೇವಾರಿ ಘಟಕ ಮುಚ್ಚಿಸಲಾಗುವುದು ಎಂದು ಹೇಳುತ್ತಿದ್ದರು. ಈ ಬಗ್ಗೆ ಮಾತನಾಡುವುದನ್ನೇ ನಿಲ್ಲಿಸಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಕ್ಷೇತ್ರದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ಟೆರ್ರಾಫಾರಂ ಬಿಬಿಎಂಪಿ ಕಸ ವಿಲೇವಾರಿ ಘಟಕವನ್ನು ಸ್ಥಳೀಯ ಜನರ ಹಾಗೂ ಮಠಾದೀಶರ ಬೆಂಬಲದೊಂದಿಗೆ ಹೋರಾಟ ಮಾಡಿ ಮುಚ್ಚಿಸಲಾಗಿತ್ತು. ಆದರೆ ಈಗ ಮತ್ತೆ ಟೆರ್ರಾಫಾರಂ ಕಸ ವಿಲೇವಾರಿಯನ್ನು ಬಿಬಿಎಂಪಿ ಆರಂಭಿಸಲು ಹೋರಟಿದೆ. ಇದಕ್ಕೆ ನಮ್ಮ ವಿರೋಧ ಇದೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ವಿರೋಧ ಪಕ್ಷದ ಶಾಸಕರು ಆಯ್ಕೆಯಾಗಿರುವ ಕ್ಷೇತ್ರಕ್ಕೆ ಅನುದಾನ ನೀಡದೆ ತಾರತಮ್ಯ ದೋರಣೆ ನೀತಿ ಅನುಸರಿಸುವ ಕೆಟ್ಟ ಸಂಪ್ರದಾಯ ಆರಂಭಿಸಿದ್ದು ಬಿಜೆಪಿ ಆಡಳಿತದಲ್ಲಿ. ಅದರೂ ಸಹ ಹೋರಾಟದ ಮೂಲಕ ಕ್ಷೇತ್ರಕ್ಕೆ ನನ್ನ ಅಧಿಕಾರದ ಅವಧಿಯಲ್ಲಿ ಮಂಜೂರಾಗಿದ್ದ ಚಿಕ್ಕಬಳ್ಳಾಪುರ ರಸ್ತೆಯ ರಾಜಘಟ್ಟ ಕೆರೆ ಏರಿ ಮೇಲಿನ ರಸ್ತೆ ವಿಸ್ತರಣೆ, ಸಾಸಲು ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಕನಕೇನಹಳ್ಳಿ ರಸ್ತೆ ಕಾಮಗಾರಿಗಳು ಈಗ ನಡೆಯುತ್ತಿವೆ. ಇವುಗಳ ಹೊರತು ಈಗಿನ ಶಾಸಕರು ಯಾವುದೇ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ತಾಲ್ಲೂಕಿನಲ್ಲಿ ಅಭಿವೃದ್ಧಿ ಶೂನ್ಯವಾಗಿದೆ’ ಎಂದು ದೂರಿದರು.

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 100 ಹಾಸಿಗೆಗಳ ಇಎಸ್‌ಐ ಆಸ್ಪತ್ರೆ ನಿರ್ಮಾಣವಾಗಿ ಎರಡು ವರ್ಷಗಳು ಕಳೆಯುತ್ತ ಬಂದಿದ್ದರು ಸಹ ಉದ್ಘಾಟನೆಯಾಗಿಲ್ಲ. ಕೇಂದ್ರ ಸರ್ಕಾರದ ಅದೀನದಲ್ಲಿ ಬರುವ ಇಎಸ್‌ಐ ಆಸ್ಪತ್ರೆಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಬಿಜೆಪಿಯವರ ಕಾರ್ಮಿಕ ವಿರೋಧಿ ನೀತಿಯೇ ಇಎಸ್‌ಐ ಆಸ್ಪತ್ರೆ ಪಾಳುಬೀಳಲು ಕಾರಣವಾಗಿದೆ ಎಂದು ಆರೋಪಿಸಿದರು.

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ, ನಿರ್ದೇಶಕ ಎನ್‌.ಅಂಜನಮೂರ್ತಿ, ಕಾಂಗ್ರೆಸ್‌ ನಗರ ಬ್ಲಾಕ್‌ ಅಧ್ಯಕ್ಷ ಕೆ.ಪಿ.ಜಗನ್ನಾಥ್‌, ಗ್ರಾಮಾಂತರ ಬ್ಲಾಕ್‌ ಅಧ್ಯಕ್ಷ ಎಂ.ಬೈರೇಗೌಡ, ಕಸಬಾ ಬ್ಲಾಕ್‌ ಅಧ್ಯಕ್ಷ ಅಪ್ಪಿವೆಂಕಟೇಶ್‌, ಭೂನ್ಯಾಯ ಮಂಡಲಿ ಸದಸ್ಯ ಆದಿತ್ಯನಾಗೇಶ್‌, ಸಿ.ಡಿ.ಅಶ್ವತ್ಥನಾರಾಯಣಗೌಡ, ಕಚೇರಿಪಾಳ್ಯಮಂಜುನಾಥ್‌, ರಾಜಣ್ಣ, ಕಾಂಗ್ರೆಸ್‌ ಮಹಿಳಾ ಘಟಕದ ಕಾರ್ಯದರ್ಶಿ ಮಮತಾ, ನಗರಸಭೆ ಆಶ್ರಯ ಸಮಿತಿ ಸದಸ್ಯೆ ಮೌಷಿದಾಮುನ್ನಾ ಇದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

6 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago