ನಶಾ ಮುಕ್ತ ಭಾರತ್ ಅಭಿಯಾನಕ್ಕೆ 05 ನೇ ವಾರ್ಷಿಕೋತ್ಸವ ಸಂಭ್ರಮ

ನಶಾ ಮುಕ್ತ ಭಾರತ್ ಅಭಿಯಾನ ಆರಂಭವಾಗಿ ಇಂದಿಗೆ 05 ವರ್ಷ ಪೂರೈಸಿರುವ ಹಿನ್ನೆಲೆ ಇಂದು ಜಿಲ್ಲಾಡಳಿತ ಭವನದಲ್ಲಿ ನಶಾ ಮುಕ್ತ ಭಾರತ್ ಪೋಸ್ಟರ್ ಅನ್ನು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಬಿಡುಗಡೆ ಮಾಡಿದರು.

ನಂತರ ಮಾತನಾಡಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ ನಿರ್ದೇಶನದ ಮೇರೆಗೆ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಶಾ ಮುಕ್ತ ಭಾರತ್ ಅಭಿಯಾನ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.

ದೇಶದಲ್ಲಿಯೇ ನಮ್ಮ ಕರ್ನಾಟಕ ರಾಜ್ಯವು ನಶಾ ಮುಕ್ತ ಭಾರತ್ ಅಭಿಯಾನ ಕಾರ್ಯಕ್ರಮದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, 28,237 ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದು, ಇದರಲ್ಲಿ 43,04,183 ಜನರಿಗೆ ಜಾಗೃತಿ ಮೂಡಿಸುವ ಕಾರ್ಯಗಳನ್ನು ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ, ವೈದ್ಯಕೀಯ ಕಾಲೇಜು, ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ನಶಾ ಮುಕ್ತ ಭಾರತ್ ಅಭಿಯಾನ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಮಾದಕ ವಸ್ತುಗಳ ಬಳಕೆ ಮತ್ತು ಸೇವನೆಯ ದುಷ್ಪರಿಣಾಮಗಳು ಹಾಗೂ ಅವುಗಳ ನಿರ್ಮೂಲನೆ ಮಾಡಲು ನಶಾ ಮುಕ್ತ ಭಾರತ್ ಅಭಿಯಾನ ಸಹಕಾರಿಯಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾ ವಿಧಿಯನ್ನು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಪ್ರತಿಜ್ಞೆಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವಿಕಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಸತೀಶ್ ಪಾಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮೀ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

3 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

4 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

5 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

16 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

17 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago