ಕೋಲಾರ: ಮಂಡ್ಯ ಜಿಲ್ಲೆಯ ನಾಗಮಂಗಲ ನಗರದಲ್ಲಿ ಬುಧವಾರ ರಾತ್ರಿ ಗಣಪತಿ ವಿಸರ್ಜನೆಯ ಮೆರವಣಿಗೆ ಮೇಲೆ ಪೆಟ್ರೋಲ್ ಬಾಂಬ್ ಮತ್ತು ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳು ಮತ್ತು ದೇಶದ್ರೋಹಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗುರುವಾರ ಅಖಂಡ ಭಾರತ ವಿನಾಯಕ ಮಹಾಸಭಾ ಹಾಗೂ ಹಿಂದೂಪರ ಸಂಘಟನೆಗಳು ನಗರದ ಪ್ರವಾಸಿ ಮಂದಿರ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಕುಮ್ಮಕ್ಕಿನಿಂದ ಮುಸ್ಲಿಮ್ ಸಮುದಾಯವು ಕೋಮುಗಲಭೆಗಳನ್ನು ನಡೆಸಿದ್ದಾರೆ ರಾಜ್ಯದಲ್ಲೂ ಉತ್ತರಪ್ರದೇಶದ ಮಾದರಿ ಸರ್ಕಾರ ರಚನೆಯಾಗಬೇಕು ಭಯೋತ್ಪಾದಕರಿಂದ ವಿಘ್ನ ವಿನಾಯಕನ ಮೂರ್ತಿಯ ಮೇಲಿನ ಹಲ್ಲೆಯು ಮುಂದೆ ನಡೆಯದ ರೀತಿಯಲ್ಲಿ ಪುಂಡರಿಗೆ ಪಾಠ ಕಲಿಸಬೇಕು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯಾದ್ಯಂತ ಮತಾಂಧರ ಶಕ್ತಿಗಳ ಅಟ್ಟಹಾಸವು ಮಿತಿ ಮೀರಿದೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಕಿಡಿಕಾರಿದರು.
ಕೋಲಾರದಲ್ಲಿ ಕೂಡ ನಾಗಮಂಗಲ ಅಂತಹ ಘಟನೆಗಳು ನಡೆಯುತ್ತವೆ ಹಿಂದೂಗಳಾದ ನಾವು ಇದನ್ನು ಪ್ರಶ್ನೆ ಮಾಡಬೇಕು ಮತ್ತು ಖಂಡಿಸಬೇಕಾಗಿದೆ ಅವರ ಮೇಲೆ ಕೂಡಲೇ ರಾಷ್ಟ್ರ ದ್ರೋಹಿ ಪ್ರಕರಣ ದಾಖಲಿಸಬೇಕು ರಾಷ್ಟ್ರ ದ್ರೋಹಿ ಕೃತ್ಯ ನಡೆಸಿದವರ ವಿರುದ್ದ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು ಗಲಭೆಗೆ ಕಾರಣರಾದವರನ್ನು ಈ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ವಿಜಯಕುಮಾರ್ ಮಾತನಾಡಿ, ಕಲ್ಲು ತೂರಿದ ಪುಂಡರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿ ಶಿಕ್ಷಿಸಬೇಕು ಕಲ್ಲು ತೂರಾಟವನ್ನು ಪ್ರಚೋದಿಸಿದ ಪಟ್ಟಭದ್ರರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು
ಈ ಸಂದರ್ಭದಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರಾದ. ಪ್ರವೀಣ್ ಗೌಡ, ನಾಮಲ್ ಮಂಜು, ಭಜರಂಗದಳ ಬಾಬು, ಸುರೇಶ್ ರಾಜ್, ಬಾಲಾಜಿ, ಗಾಂಧಿನಗರ ಮಹೇಶ್, ಎಬಿವಿಪಿ ಹರೀಶ್, ಸಂಪತ್, ಶಶಿ, ಮುರಳಿ, ವಿನಯ್, ರವಿಕುಮಾರ್, ಶ್ರೀನಿವಾಸ್, ಸಾಯಿಮೌಳಿ ಮುಂತಾದವರು ಇದ್ದರು.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…