Categories: ಕೋಲಾರ

ನಾಗಮಂಗಲ ಘಟನೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಕೋಲಾರ: ಮಂಡ್ಯ ಜಿಲ್ಲೆಯ ನಾಗಮಂಗಲ ನಗರದಲ್ಲಿ ಬುಧವಾರ ರಾತ್ರಿ ಗಣಪತಿ ವಿಸರ್ಜನೆಯ ಮೆರವಣಿಗೆ ಮೇಲೆ ಪೆಟ್ರೋಲ್ ಬಾಂಬ್ ಮತ್ತು ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳು ಮತ್ತು ದೇಶದ್ರೋಹಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗುರುವಾರ ಅಖಂಡ ಭಾರತ ವಿನಾಯಕ ಮಹಾಸಭಾ ಹಾಗೂ ಹಿಂದೂಪರ ಸಂಘಟನೆಗಳು ನಗರದ ಪ್ರವಾಸಿ ಮಂದಿರ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಕುಮ್ಮಕ್ಕಿನಿಂದ ಮುಸ್ಲಿಮ್ ಸಮುದಾಯವು ಕೋಮುಗಲಭೆಗಳನ್ನು ನಡೆಸಿದ್ದಾರೆ ರಾಜ್ಯದಲ್ಲೂ ಉತ್ತರಪ್ರದೇಶದ ಮಾದರಿ ಸರ್ಕಾರ ರಚನೆಯಾಗಬೇಕು ಭಯೋತ್ಪಾದಕರಿಂದ ವಿಘ್ನ ವಿನಾಯಕನ ಮೂರ್ತಿಯ ಮೇಲಿನ ಹಲ್ಲೆಯು ಮುಂದೆ ನಡೆಯದ ರೀತಿಯಲ್ಲಿ ಪುಂಡರಿಗೆ ಪಾಠ ಕಲಿಸಬೇಕು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯಾದ್ಯಂತ ಮತಾಂಧರ ಶಕ್ತಿಗಳ ಅಟ್ಟಹಾಸವು ಮಿತಿ ಮೀರಿದೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಕಿಡಿಕಾರಿದರು.

ಕೋಲಾರದಲ್ಲಿ ಕೂಡ ನಾಗಮಂಗಲ ಅಂತಹ ಘಟನೆಗಳು ನಡೆಯುತ್ತವೆ ಹಿಂದೂಗಳಾದ ನಾವು ಇದನ್ನು ಪ್ರಶ್ನೆ ಮಾಡಬೇಕು ಮತ್ತು ಖಂಡಿಸಬೇಕಾಗಿದೆ ಅವರ ಮೇಲೆ ಕೂಡಲೇ ರಾಷ್ಟ್ರ ದ್ರೋಹಿ ಪ್ರಕರಣ ದಾಖಲಿಸಬೇಕು ರಾಷ್ಟ್ರ ದ್ರೋಹಿ ಕೃತ್ಯ ನಡೆಸಿದವರ ವಿರುದ್ದ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು ಗಲಭೆಗೆ ಕಾರಣರಾದವರನ್ನು ಈ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ವಿಜಯಕುಮಾರ್ ಮಾತನಾಡಿ, ಕಲ್ಲು ತೂರಿದ ಪುಂಡರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿ ಶಿಕ್ಷಿಸಬೇಕು ಕಲ್ಲು ತೂರಾಟವನ್ನು ಪ್ರಚೋದಿಸಿದ ಪಟ್ಟಭದ್ರರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರಾದ. ಪ್ರವೀಣ್ ಗೌಡ, ನಾಮಲ್ ಮಂಜು, ಭಜರಂಗದಳ ಬಾಬು, ಸುರೇಶ್ ರಾಜ್, ಬಾಲಾಜಿ, ಗಾಂಧಿನಗರ ಮಹೇಶ್, ಎಬಿವಿಪಿ ಹರೀಶ್, ಸಂಪತ್, ಶಶಿ, ಮುರಳಿ, ವಿನಯ್, ರವಿಕುಮಾರ್, ಶ್ರೀನಿವಾಸ್, ಸಾಯಿಮೌಳಿ ಮುಂತಾದವರು ಇದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

8 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

10 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

10 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

11 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

15 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

17 hours ago